ಜಿಲ್ಲೆಗಳು

ಮೈಸೂರು : ಮನುಸ್ಮತಿ ಸುಡುವ ಚಳವಳಿ ನಾಳೆ

ಬನ್ನಿ ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ-ಮನುಸ್ಮತಿಗೆ ಕೊಳ್ಳಿ ಇಡೋಣ’ ಕಾರ್ಯಕ್ರಮ

ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯು ಅಂಬೇಡ್ಕರ್ ಅವರ ಹೋರಾಟವನ್ನು ಮುನ್ನಡೆಸಲು ಹಾಗೂ ಪ್ರಸ್ತುತ ವಿದ್ಯಮಾನಗಳಿಗೆ ಪ್ರತ್ಯುತ್ತರ ನೀಡಲು ಚಳವಳಿ ರೂಪಿಸುವ ಉದ್ದೇಶದಿಂದ ಡಿ.೨೫ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಟೌನ್‌ಹಾಲ್‌ನಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಎದುರು ಮನುಸ್ಮತಿ ಸುಡುವ ಚಳವಳಿ ನಡೆಸುತ್ತಿದ್ದು,‘ಬನ್ನಿ ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ-ಮನುಸ್ಮತಿಗೆ ಕೊಳ್ಳಿ ಇಡೋಣ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ಹಾಗೂ ಪ್ರಸನ್ನ ತಳೂರು ತಿಳಿಸಿದ್ದಾರೆ.
ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಚಾಲಕರಾದ ಬೆಟ್ಟಯ್ಯ ಕೋಟೆ, ಆಲಗೂಡು ಶಿವಕುಮಾರ್, ಚುಂಚನಹಳ್ಳಿ ಮಲ್ಲೇಶ್, ಭುಗತಹಳ್ಳಿ ಮಣಿಯಯ್ಯ, ಕಾರ್ಯ ಬಸವಣ್ಣ, ಜಗದೀಶ್ ಪಿರಿಯಾಪಟ್ಟಣ ಮತ್ತು ದಸಂಸ ಎಲ್ಲ ಬಣಗಳ ಮುಖಂಡರುಗಳು ಭಾಗವಹಿಸಲಿದ್ದು, ದಸಂಸ ಹಿತೈಷಿಗಳು, ಕಾರ್ಯಕರ್ತರು, ಪ್ರಗತಿಪರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.
ಆರ್ಯರ ಆಕ್ರಮಣದ ನಂತರ ವ್ಯಕ್ತಿಯ ಹುಟ್ಟು ಮತ್ತು ಕಸನುಗಳನ್ನು ಆಧರಿಸಿ ಸಮಾಜವನ್ನು ವಿಭಜಿಸುವ ಮೊದಲ ದುಷ್ಟ ಕೆಲಸ ಪ್ರಾರಂಭವಾಯಿತು. ಹಾಗೆಯೇ ಋಗ್ವೇದದ ಅಂತ್ಯಭಾಗಕ್ಕೆ ಸೇರ್ಪಡೆಯಾದ ಪುರುಷ ಸೂಕ್ತಿ ವರ್ಣಾಶ್ರಮ ಪದ್ಧತಿಗೆ ಸಮರ್ಥನೆ ನೀಡಲು ಗ್ರಂಥದ ಮುಂದುವರಿದ ಭಾಗವಾಗಿ ಮನುಸ್ಮತಿಯೂ ಸೇರ್ಪಡೆಯಾಯಿತು. ಸಾವಿರಾರು ವರ್ಷಗಳಿಂದ ಭಾರತೀಯ ಸಮಾಜದ ಮೇಲೆ ಈ ಮನುಸ್ಮತಿ ಹೇರಿದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ, ಧಾರ್ಮಿಕ, ಅಮಾನವೀಯ ನೀತಿ ಸಂಹಿತೆಗಳು ಈ ದೇಶದ ಮೂಲ ನಿವಾಸಿಗಳ ಬಹು ಸಂಖ್ಯಾತ ದುಡಿಯುವ ವರ್ಗಗಳ ಹೀನಾಯ ಬದುಕಿಗೆ ಕಾರಣವಾಯಿತು. ಶಿಕ್ಷಣ, ಸಮಾನತೆ, ಸ್ವಾತಂತ್ರ್ಯ, ಆರ್ಥಿಕ ಸ್ವಾವಲಂಬನೆಗಳಿಂದ ವಂಚಿಸಿ ಬಲಿ ತೆಗೆದುಕೊಂಡಿತು. ಹಾಗಾಗಿ ಮನುಸ್ಮತಿ ಸುಡುವ ಚಳವಳಿ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

8 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

8 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

8 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

8 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

8 hours ago