ಜಿಲ್ಲೆಗಳು

ಮೈಸೂರು : ಮನುಸ್ಮತಿ ಸುಡುವ ಚಳವಳಿ ನಾಳೆ

ಬನ್ನಿ ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ-ಮನುಸ್ಮತಿಗೆ ಕೊಳ್ಳಿ ಇಡೋಣ’ ಕಾರ್ಯಕ್ರಮ

ಮೈಸೂರು: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯು ಅಂಬೇಡ್ಕರ್ ಅವರ ಹೋರಾಟವನ್ನು ಮುನ್ನಡೆಸಲು ಹಾಗೂ ಪ್ರಸ್ತುತ ವಿದ್ಯಮಾನಗಳಿಗೆ ಪ್ರತ್ಯುತ್ತರ ನೀಡಲು ಚಳವಳಿ ರೂಪಿಸುವ ಉದ್ದೇಶದಿಂದ ಡಿ.೨೫ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಟೌನ್‌ಹಾಲ್‌ನಲ್ಲಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಎದುರು ಮನುಸ್ಮತಿ ಸುಡುವ ಚಳವಳಿ ನಡೆಸುತ್ತಿದ್ದು,‘ಬನ್ನಿ ಸಂವಿಧಾನವನ್ನು ಎದೆಗಪ್ಪಿಕೊಳ್ಳೋಣ-ಮನುಸ್ಮತಿಗೆ ಕೊಳ್ಳಿ ಇಡೋಣ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ಹಾಗೂ ಪ್ರಸನ್ನ ತಳೂರು ತಿಳಿಸಿದ್ದಾರೆ.
ಈ ಕುರಿತು ಜಂಟಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಯಕ್ರಮದಲ್ಲಿ ದಸಂಸ ಜಿಲ್ಲಾ ಸಂಚಾಲಕರಾದ ಬೆಟ್ಟಯ್ಯ ಕೋಟೆ, ಆಲಗೂಡು ಶಿವಕುಮಾರ್, ಚುಂಚನಹಳ್ಳಿ ಮಲ್ಲೇಶ್, ಭುಗತಹಳ್ಳಿ ಮಣಿಯಯ್ಯ, ಕಾರ್ಯ ಬಸವಣ್ಣ, ಜಗದೀಶ್ ಪಿರಿಯಾಪಟ್ಟಣ ಮತ್ತು ದಸಂಸ ಎಲ್ಲ ಬಣಗಳ ಮುಖಂಡರುಗಳು ಭಾಗವಹಿಸಲಿದ್ದು, ದಸಂಸ ಹಿತೈಷಿಗಳು, ಕಾರ್ಯಕರ್ತರು, ಪ್ರಗತಿಪರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದ್ದಾರೆ.
ಆರ್ಯರ ಆಕ್ರಮಣದ ನಂತರ ವ್ಯಕ್ತಿಯ ಹುಟ್ಟು ಮತ್ತು ಕಸನುಗಳನ್ನು ಆಧರಿಸಿ ಸಮಾಜವನ್ನು ವಿಭಜಿಸುವ ಮೊದಲ ದುಷ್ಟ ಕೆಲಸ ಪ್ರಾರಂಭವಾಯಿತು. ಹಾಗೆಯೇ ಋಗ್ವೇದದ ಅಂತ್ಯಭಾಗಕ್ಕೆ ಸೇರ್ಪಡೆಯಾದ ಪುರುಷ ಸೂಕ್ತಿ ವರ್ಣಾಶ್ರಮ ಪದ್ಧತಿಗೆ ಸಮರ್ಥನೆ ನೀಡಲು ಗ್ರಂಥದ ಮುಂದುವರಿದ ಭಾಗವಾಗಿ ಮನುಸ್ಮತಿಯೂ ಸೇರ್ಪಡೆಯಾಯಿತು. ಸಾವಿರಾರು ವರ್ಷಗಳಿಂದ ಭಾರತೀಯ ಸಮಾಜದ ಮೇಲೆ ಈ ಮನುಸ್ಮತಿ ಹೇರಿದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ, ಧಾರ್ಮಿಕ, ಅಮಾನವೀಯ ನೀತಿ ಸಂಹಿತೆಗಳು ಈ ದೇಶದ ಮೂಲ ನಿವಾಸಿಗಳ ಬಹು ಸಂಖ್ಯಾತ ದುಡಿಯುವ ವರ್ಗಗಳ ಹೀನಾಯ ಬದುಕಿಗೆ ಕಾರಣವಾಯಿತು. ಶಿಕ್ಷಣ, ಸಮಾನತೆ, ಸ್ವಾತಂತ್ರ್ಯ, ಆರ್ಥಿಕ ಸ್ವಾವಲಂಬನೆಗಳಿಂದ ವಂಚಿಸಿ ಬಲಿ ತೆಗೆದುಕೊಂಡಿತು. ಹಾಗಾಗಿ ಮನುಸ್ಮತಿ ಸುಡುವ ಚಳವಳಿ ಹಮ್ಮಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

5 hours ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

6 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

7 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

12 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

13 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

13 hours ago