ಮೈಸೂರು : ಮೈಸೂರು ಮಹಾನಗರ ಪಾಲಿಕೆ ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ, ಸ್ಥಳೀಯ ನಾಯಕರು ಯಾವ ತೀರ್ಮಾನ ಕೈಗೊಂಡಿದ್ದಾರೆ ಅನ್ನೋದು ಗೊತ್ತಿಲ್ಲ. ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಮುಂದುವರಿದು, ಸಂಜೆ ಭಾರತ್ ಜೋಡೋ ಯಾತ್ರೆ ವಿಚಾರವಾಗಿ ಸಭೆ ಕರೆದಿದ್ದೇನೆ. ಅಲ್ಲಿ ಪಾಲಿಕೆ ಮೇಯರ್ ವಿಚಾರವನ್ನು ಅಲ್ಲಿ ಚರ್ಚೆ ಮಾಡುತ್ತೇನೆ, ಬಿಜೆಪಿ ಜೆ.ಡಿ.ಎಸ್ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ.ಅವರು ಏನನ್ನು ಬೇಕಾದರು ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.
ಇನ್ನೂ ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದದ ಕುರಿತು ಮಾತನಾಡಿದ ಅವರು ಮಹಾಜನ್ ವರದಿಯೇ ಅಂತಿಮವಾಗಿದೆ. ಈ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ.ನ್ಯಾಯಾಂಗ ತೀರ್ಪು ಪುನರ್ ವಿಮರ್ಶೆಗೆ ಮಹಾರಾಷ್ಟ್ರದವರು ಕೇಳಿದ್ದಾರೆ ನಮ್ಮ ಸರ್ಕಾರದವರೂ ಸಿದ್ಧತೆ ಮಾಡಿಕೊಂಡಿದ್ದಾರೆ. ಮಹಾಜನ್ ಯಾವ ರಾಜ್ಯದವರು ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಮಳೆಹಾನಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೆರೆ, ರಾಜಕಾಲುವೆ ಒತ್ತುವರಿ ಮಾಡಿ ಮನೆ ಕಟ್ಟಿದ್ದಾರೆ.
ಇದರಿಂದ ಮನೆ, ರಸ್ತೆಗಳಿಗೆ ನೀರು ನುಗ್ಗುತ್ತಿದೆ.ನಮ್ಮ ಸರ್ಕಾರ ಇದ್ದಾಗ ರಾಜಕಾಲುವೆ ಒತ್ತುವರಿ ತೆರವಿಗೆ ಚಾಲನೆ ಕೊಟ್ಟಿದ್ದೆವು, ಬಿಜೆಪಿ ಅವರು ಅಧಿಕಾರಕ್ಕೆ ಬಂದು ಮೂರೂವರೆ ವರ್ಷವಾದರೂ ಏನು ಮಾಡಲಿಲ್ಲ.
ಐಟಿ, ಬಿಟಿ ಅವರಿಗೆ ಸರಿಯಾದ ಮೂಲಸೌಕರ್ಯ ಬೇಕು ಈ ಬಗ್ಗೆ ಈ ಸರ್ಕಾರದವರು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ, ಇದರಿಂದಾಗಿ ಐಟಿ, ಬಿಟಿ ಕಂಪನಿಗಳು ಬೇರೆಡೆ ಹೋಗುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…