ಜಿಲ್ಲೆಗಳು

ಮೈಸೂರು ಮೇಯರ್ ಹುದ್ದೆಗೆ ಮತ್ತೆ ಮೈತ್ರಿಯ ಖದರ್!

ಕೊಡು- ಕೊಳ್ಳುವಿಕೆಯ ಲೆಕ್ಕದಲ್ಲಿ ಕಾಂಗ್ರೆಸ್,ಜಾ.ದಳ: ಕಾದು ನೋಡುವ ಲೆಕ್ಕಾಚಾರದಲ್ಲಿ ಕಮಲ ಪಾಳೆಯ

* ಎಚ್.ಎಸ್.ದಿನೇಶ್‌ಕುಮಾರ್
ಮೈಸೂರು: ಮೈಸೂರು ಮಹಾಪೌರರ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಮಹಾಪೌರರು ಯಾವ ಪಕ್ಷದವರು ಆಗುತ್ತಾರೆ ಎಂಬ ಕುತೂಹಲ ಮೂರೂ ಪಕ್ಷದ ಕಾರ್ಯಕರ್ತರಲ್ಲಿದೆ.
ಕಳೆದ ಬಾರಿಯ ಕಾಂಗ್ರೆಸ್ ಹಾಗೂ ಜಾ.ದಳ ಹೊಂದಾಣಿಕೆ ಮಾಡಿಕೊಂಡಿತ್ತು. ರುಕ್ಮಿಣಿ ಮಾದೇಗೌಡ ಮಹಾಪೌರರಾಗಿ ಹಾಗೂ ಅನ್ವರ್ ಬೇಗ್ ಉಪ ಮಹಾಪೌರರಾಗಿ ಅಧಿಕಾರ ಹಂಚಿಕೊಂಡಿದ್ದರು. ನಂತರದ ನ್ಯಾಯಾಲಯದ ಆದೇಶದ ಮೇರೆಗೆ ರುಕ್ಮಿಣಿ ಮಾದೇಗೌಡ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು. ಇದರಿಂದ ಸಹಜವಾಗಿ ಜಾ.ದಳಕ್ಕೆ ಮತ್ತೆ ಮಹಾಪೌರರ ಸ್ಥಾನ ಸಿಗಬೇಕಾಗಿತ್ತು. ಆದರೆ, ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ಹಾಗೂ ಜಾ.ದಳ ಮುಖಂಡರ ಪರೋಕ್ಷ ಸಹಕಾರದೊಂದಿಗೆ ಬಿಜೆಪಿಯ ಸುನಂದಪಾಲನೇತ್ರ ಅವರು ಮಹಾಪೌರರಾಗಿ ಅಧಿಕಾರ ವಹಿಸಿಕೊಂಡರು.
ಇದೀಗ ನಗರಪಾಲಿಕೆಯಲ್ಲಿ ಹೊಂದಾಣಿಕೆಯ ಮಾತುಗಳು ಮುನ್ನೆಲೆಗೆ ಬರುತ್ತಿವೆ. ಸುನಂದ ಪಾಲನೇತ್ರ ಅವರಿಗೆ ಮಹಾಪೌರರ ಸ್ಥಾನ ಸಿಗಲು ನಾವು ಕಾರಣವಾದ್ದರಿಂದ ಬಿಜೆಪಿ ಮುಖಂಡರು ನಮ್ಮ ಪಕ್ಷಕ್ಕೆ ಮೇಯರ್ ಸ್ಥಾನ ಬಿಟ್ಟುಕೊಡಬೇಕು ಎಂದು ಪಟ್ಟು ಹಿಡಿಯುವ ಎಲ್ಲಾ ಸಾಧ್ಯತೆಗಳಿವೆ. ಕಾಂಗ್ರೆಸ್‌ನವರು ಜಾ.ದಳವರ ಕಡೆ ನೋಡುತ್ತಿದ್ದಾರೆ. ಆದರೆ ಬಿಜೆಪಿ ಮಾತ್ರ ಕಳೆದ ಬಾರಿಯಂತೆ ಇಬ್ಬರ ಜಗಳದಲ್ಲಿ ನಮಗೆ ಮತ್ತೊಮ್ಮೆ ಅವಕಾಶ ಸಿಕ್ಕರೆ ನೋಡೋಣ ಎನ್ನುವ ತಂತ್ರ ಅನುಸರಿಸುವ ಸಾಧ್ಯತೆಯಿದೆ.

ಕಳೆದ ಬಾರಿ ಕಾಂಗ್ರೆಸ್ ವತಿಯಿಂದ ನಮ್ಮ ಪಕ್ಷಕ್ಕೆ ಮಹಾಪೌರರ ಸ್ಥಾನ ಕೊಡಬೇಕಾಗಿತ್ತು. ಆದರೆ, ಸಿದ್ದರಾಮಯ್ಯ ಅವರು ಜಾ.ದಳ ಎಲ್ಲಿದೆ, ಅವರಿಗೇಕೆ ಮಹಾಪೌರರ ಸ್ಥಾನ ಬಿಟ್ಟುಕೊಡಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ನಮಗೂ ಸ್ವಾಭಿಮಾನವಿದೆ ಹೀಗಾಗಿ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಸಲು ಆಗಲಿಲ್ಲ ಎನ್ನುವುದು ಶಾಸಕ ಸಾ.ರಾ.ಮಹೇಶ್ ಅವರ ನುಡಿ. ನಂತರ ಜಿಲ್ಲಾ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು ಹಾಗೂ ಬಿಜೆಪಿ ಶಾಸಕರು ನನ್ನೊಡನೆ ಮಾತನಾಡಿ ಮಹಾಪೌರರ ಸ್ಥಾನ ಪಡೆಯಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು. ಕೆ.ಆರ್.ನಗರದ ಹೆಣ್ಣುಮಗಳು ಮಹಾಪೌರರಾಗಲಿ ಎಂದು ನಾವೂ ಕೂಡ ಸಹಕಾರ ನೀಡಿದ್ದೆವು ಎಂದು ಹೇಳಿದ್ದಾರೆ.

 

 

ಶಾಸಕ ಸಾ.ರಾ.ಮಹೇಶ್

ಬಿಜೆಪಿ ನಮಗೆ ಬಿಟ್ಟು ಕೊಡಲಿ

ಜಿಲ್ಲಾ ಉಸ್ತವಾರಿ ಸಚಿವರು, ಸಂಸದರು ಹಾಗೂ ಮುಖ್ಯಮಂತ್ರಿಗಳು ನಮಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ನಮ್ಮ ಪಕ್ಷದ ಸದಸ್ಯರಿಗೆ ಮಹಾಪೌರರ ಸ್ಥಾನ ಬಿಟ್ಟುಕೊಡುವುದರ ಮೂಲಕ ತಮ್ಮ ಮಾತನ್ನು ಉಳಿಸಿಕೊಳ್ಳಬೇಕು. ಅವರು ನಮ್ಮ ಪಕ್ಷಕ್ಕೆ ಮೇಯರ್ ಸ್ಥಾನ ಬಿಟ್ಟುಕೊಡುವ ವಿಶ್ವಾಸ ನನಗಿದೆ ಎಂದು ಶಾಸಕ ಸಾ.ರಾ.ಮಹೇಶ್ ಸ್ಪಷ್ಟವಾಗಿ ಹೇಳುತ್ತಾರೆ.


ಕಾಂಗ್ರೆಸ್‌ನ ಅಯೂಬ್‌ಖಾನ್.

ಜಾ.ದಳದವರು ನಮಗೇ ಬೆಂಬಲಿಸಲಿ
ಈ ಹಿಂದೆ ನಾವು ರುಕ್ಮಿಣಿ ಮಾದೇಗೌಡ ಅವರನ್ನು ಮೇಯರ್ ಆಗಿ ಆರಿಸಲು ಸಹಕಾರ ನೀಡಿದ್ದೆವು. ನಂತರ ನಮ್ಮ ಪಕ್ಷಕ್ಕೆ ಮೇಯರ್ ಸ್ಥಾನ ಬಿಟ್ಟುಕೊಡಬೇಕಿತ್ತು. ಅದು ಏಕೆ ಸಾಧ್ಯವಾಗಲಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಈ ಬಾರಿ ಜಾ.ದಳವರು ನಮಗೆ ಬೆಂಬಲ ನೀಡಲಿ.ಇದೀಗ ನಗರಪಾಲಿಕೆಯಲ್ಲಿ ಮೈತ್ರಿ ಮಾಡಿಕೊಳ್ಳಬೇಕೇ? ಬೇಡವೇ ಎಂಬ ಬಗ್ಗೆ ಸ್ಥಳೀಯ ಶಾಸಕರು, ಮುಖಂಡರು ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿ ನಿರ್ಧರಿಸಲಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ದರಿದ್ದೇವೆ ಎನ್ನುತ್ತಾರೆ ಮಾಜಿ ಮೇಯರ್, ಕಾಂಗ್ರೆಸ್‌ನ ಅಯೂಬ್‌ಖಾನ್.


ಸಂಸದ ಪ್ರತಾಪ್‌ಸಿಂಹ

ಹೊಂದಾಣಿಕೆ ಕುರಿತು ಹಿರಿಯರ ತೀರ್ಮಾನ

ಮಹಾಪೌರರ ಸ್ಥಾನಕ್ಕೆ ಸ್ಪರ್ಧಿಸಬೇಕೇ? ಅಥವ ಜಾ.ದಳ ಜೊತೆ ಮೈತ್ರಿ ಮಾಡಿಕೊಳ್ಳಬೇಕೇ? ಎಂಬ ಬಗ್ಗೆ ಆದಷ್ಟು ಶೀಘ್ರವಾಗಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ಮೈಸೂರಿಗೆ ಬರಲಿದ್ದು, ಸ್ಥಳೀಯ ಶಾಸಕರು, ಪಕ್ಷದ ಅಧ್ಯಕ್ಷರು ಹಾಗೂ ನಗರಪಾಲಿಕೆ ಸದಸ್ಯರ ಸಮ್ಮುಖದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂಬುದು ಸಂಸದ ಪ್ರತಾಪ್‌ಸಿಂಹ ಅವರ ವಿವರಣೆ.

andolanait

Recent Posts

ಮಡಿಕೇರಿ | ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ; ಸಾರ್ವಜನಿಕೆ ಕೆಲಸ ವಿಳಂಬ

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು,…

9 mins ago

ಎಚ್.ಡಿ.ಕೋಟೆ | ಉತ್ತಮ ಮಳೆ ; ಕೃಷಿ ಚಟುವಟಿಕೆ ಚುರುಕುಗೊಳಿಸಿದ ರೈತರು

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ…

14 mins ago

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

45 mins ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

3 hours ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

4 hours ago