ಜಿಲ್ಲೆಗಳು

ಕುದುರೆ ಸವಾರಿ ಮಾಡುವ ಅವಕಾಶ ದೊರೆತಿರುವುದು ನನ್ನ ಪೂರ್ವಜನ್ಮದ ಪುಣ್ಯ : ಮೇಯರ್ ಶಿವಕುಮಾರ್

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಅಶ್ವಾರೋಹಿಯಾಗಿ ಭಾಗವಹಿಸಲಿರುವ ಮೈಸೂರಿನ ನೂತನ ಮಹಾಪೌರ ಶಿವಕುಮಾರ್ ಅವರಿಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹಾರ್ಸ್ ಪಾರ್ಕ್‌ನಲ್ಲಿ ಸೋಮವಾರ ಕುದುರೆ ಸವಾರಿ ತರಬೇತಿ ಆರಂಭವಾಯಿತು.‌

ಟೀಶರ್ಟ್,ಟ್ರ್ಯಾಕ್ ಪ್ಯಾಂಟ್,ಶೂ ಹಾಗೂ ಹೆಲ್ಮೆಟ್ ಧರಿಸಿದ್ದ ಶಿವಕುಮಾರ್‌ಗೆ ತರಬೇತಿಯ ಮೊದಲ ದಿನದಂದು ಕುದುರೆ ಏರುವುದು, ಲಗಾಮು ಹಿಡಿಯುವುದು, ಸವಾರಿ ವೇಳೆ ಎಚ್ಚರ ವಹಿಸುವುದು, ಇಳಿಯುವಾಗ ಅನುಸರಿಸಬೇಕಾದ ಕ್ರಮ ಮೊದಲಾದವುಗಳನ್ನು ಅಶ್ವಾರೋಹಿ ದಳದ ಸಿಬ್ಬಂದಿ ತಿಳಿಸಿಕೊಟ್ಟರು.

ಮೊದಲು ಕುದುರೆಯ ಸಾಮರ್ಥ್ಯ, ದೈಹಿಕ ಮತ್ತು ಮಾನಸಿಕ ಲಕ್ಷಣಗಳು,ಸ್ವಭಾವ,ಗಾತ್ರ,ಎತ್ತರ, ಆಹಾರ ಪದ್ಧತಿ ಕುರಿತಂತೆ ಮಾಹಿತಿ ನೀಡಿದ ಪೊಲೀಸರು ಹೊಸಬರ ಬಗ್ಗೆ ಅದರ ಪ್ರತಿಕ್ರಿಯೆ,ಯಾವ ಸಂದರ್ಭದಲ್ಲಿ ಅದು ಉಗ್ರರೂಪ ತಾಳಬಹುದು ಎಂಬುದರ ಕುರಿತು ಮೌಂಟೆಡ್ ಕಂಪನಿತರಬೇತುದಾರ ಶ್ರೀನಿವಾಸ್,ಲೋಕೇಶ್,ಆನಂದ್ ಸಿಂಗ್ ಅವರು ವಿವರಿಸಿದರು. ಆರಂಭದಲ್ಲಿ ಮಹಾಪೌರ ಏರಿದ ಕುದುರೆಯನ್ನು ಓರ್ವ ಸಿಬ್ಬಂದಿ ಹಿಡಿದು ಮೈದಾನದಲ್ಲಿ ಮೂರ್ನಾಲ್ಕು ಸುತ್ತು ನಿಧಾನವಾಗಿ ನಡೆಸಿದರು. ಅದರ ಎಡ ಮತ್ತು ಬಲ ಭಾಗದಲ್ಲಿ ಇಬ್ಬರು ಪೊಲೀಸರು ಕುದುರೆ ಸವಾರಿ ಮಾಡಿದರು.ಬೆಳಿಗ್ಗೆ ೬ರಿಂದ ೭.೩೦ರವರೆಗೆ ಮಹಾಪೌರಿಗೆ ಕುದುರೆ ಸವಾರಿ ಕುರಿತು ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್,ಮಹಾಪೌರರಾಗಿ ಆಯ್ಕೆಯಾಗುತ್ತಿದ್ದಂತೆಯೇ ನಾಡಿನ ಅಧಿದೇವತೆ ಚಾಮುಂಡೇಶ್ವರಿದೇವಿಗೆ ಗಣ್ಯರೊಂದಿಗೆ ಪುಷ್ಪಾರ್ಚನೆ ಮಾಡುವ ಹಾಗೂ ಲಕ್ಷಾಂತರ ಜನರ ಸಮ್ಮುಖದಲ್ಲಿ ವಿಜಯದಶಮಿ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವ ಅವಕಾಶ ದೊರೆತಿರುವುದು ನನ್ನ ಪೂರ್ವಜನ್ಮದ ಪುಣ್ಯವಾಗಿದೆ ಎಂದರು.

andolanait

Recent Posts

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

14 seconds ago

ಅಸ್ಸಾಂನಲ್ಲಿ ಘೋರ ದುರಂತ: ರೈಲು ಡಿಕ್ಕಿಯಾಗಿ 7 ಆನೆಗಳು ಸಾವು

ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…

50 mins ago

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು: ಏನಾಗಿದೆ ಗೊತ್ತಾ?

ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್‌ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…

1 hour ago

ದ್ವೇಷ ಭಾಷಣ ಪ್ರತಿಬಂಧನ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…

1 hour ago

ಓದುಗರ ಪತ್ರ: ಕಾನೂನು ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…

2 hours ago

ಓದುಗರ ಪತ್ರ:  ಸಾಮಾಜಿಕ ಬಹಿಷ್ಕಾರ ನಿಷೇಧ ಕಾನೂನು ಸ್ವಾಗತಾರ್ಹ

ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…

2 hours ago