ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಅಶ್ವಾರೋಹಿಯಾಗಿ ಭಾಗವಹಿಸಲಿರುವ ಮೈಸೂರಿನ ನೂತನ ಮಹಾಪೌರ ಶಿವಕುಮಾರ್ ಅವರಿಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹಾರ್ಸ್ ಪಾರ್ಕ್ನಲ್ಲಿ ಸೋಮವಾರ ಕುದುರೆ ಸವಾರಿ ತರಬೇತಿ ಆರಂಭವಾಯಿತು.
ಟೀಶರ್ಟ್,ಟ್ರ್ಯಾಕ್ ಪ್ಯಾಂಟ್,ಶೂ ಹಾಗೂ ಹೆಲ್ಮೆಟ್ ಧರಿಸಿದ್ದ ಶಿವಕುಮಾರ್ಗೆ ತರಬೇತಿಯ ಮೊದಲ ದಿನದಂದು ಕುದುರೆ ಏರುವುದು, ಲಗಾಮು ಹಿಡಿಯುವುದು, ಸವಾರಿ ವೇಳೆ ಎಚ್ಚರ ವಹಿಸುವುದು, ಇಳಿಯುವಾಗ ಅನುಸರಿಸಬೇಕಾದ ಕ್ರಮ ಮೊದಲಾದವುಗಳನ್ನು ಅಶ್ವಾರೋಹಿ ದಳದ ಸಿಬ್ಬಂದಿ ತಿಳಿಸಿಕೊಟ್ಟರು.
ಮೊದಲು ಕುದುರೆಯ ಸಾಮರ್ಥ್ಯ, ದೈಹಿಕ ಮತ್ತು ಮಾನಸಿಕ ಲಕ್ಷಣಗಳು,ಸ್ವಭಾವ,ಗಾತ್ರ,ಎತ್ತರ, ಆಹಾರ ಪದ್ಧತಿ ಕುರಿತಂತೆ ಮಾಹಿತಿ ನೀಡಿದ ಪೊಲೀಸರು ಹೊಸಬರ ಬಗ್ಗೆ ಅದರ ಪ್ರತಿಕ್ರಿಯೆ,ಯಾವ ಸಂದರ್ಭದಲ್ಲಿ ಅದು ಉಗ್ರರೂಪ ತಾಳಬಹುದು ಎಂಬುದರ ಕುರಿತು ಮೌಂಟೆಡ್ ಕಂಪನಿತರಬೇತುದಾರ ಶ್ರೀನಿವಾಸ್,ಲೋಕೇಶ್,ಆನಂದ್ ಸಿಂಗ್ ಅವರು ವಿವರಿಸಿದರು. ಆರಂಭದಲ್ಲಿ ಮಹಾಪೌರ ಏರಿದ ಕುದುರೆಯನ್ನು ಓರ್ವ ಸಿಬ್ಬಂದಿ ಹಿಡಿದು ಮೈದಾನದಲ್ಲಿ ಮೂರ್ನಾಲ್ಕು ಸುತ್ತು ನಿಧಾನವಾಗಿ ನಡೆಸಿದರು. ಅದರ ಎಡ ಮತ್ತು ಬಲ ಭಾಗದಲ್ಲಿ ಇಬ್ಬರು ಪೊಲೀಸರು ಕುದುರೆ ಸವಾರಿ ಮಾಡಿದರು.ಬೆಳಿಗ್ಗೆ ೬ರಿಂದ ೭.೩೦ರವರೆಗೆ ಮಹಾಪೌರಿಗೆ ಕುದುರೆ ಸವಾರಿ ಕುರಿತು ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್,ಮಹಾಪೌರರಾಗಿ ಆಯ್ಕೆಯಾಗುತ್ತಿದ್ದಂತೆಯೇ ನಾಡಿನ ಅಧಿದೇವತೆ ಚಾಮುಂಡೇಶ್ವರಿದೇವಿಗೆ ಗಣ್ಯರೊಂದಿಗೆ ಪುಷ್ಪಾರ್ಚನೆ ಮಾಡುವ ಹಾಗೂ ಲಕ್ಷಾಂತರ ಜನರ ಸಮ್ಮುಖದಲ್ಲಿ ವಿಜಯದಶಮಿ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವ ಅವಕಾಶ ದೊರೆತಿರುವುದು ನನ್ನ ಪೂರ್ವಜನ್ಮದ ಪುಣ್ಯವಾಗಿದೆ ಎಂದರು.
ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…
ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಟಿಪ್ಪರ್ಗಳ ಹಾವಳಿ ಹೆಚ್ಚಾಗಿ ಶಾಲಾ ಮಕ್ಕಳ ವಾಹಕ ಅಪಘಾತಕ್ಕೀಡಾಗಿ ಹಲವು ಮಕ್ಕಳಿಗೆ ಗಾಯಗಳಾಗಿದ್ದ ಪ್ರಕರಣದ ಬಳಿಕ ತಾಲ್ಲೂಕಿನಾದ್ಯಂತ…
ಬೆಂಗಳೂರು: ಕರ್ನಾಟಕ ಸರ್ಕಾರದ 'ಗೃಹಲಕ್ಷ್ಮಿ' ಯೋಜನೆಯಡಿ ಫಲಾನುಭವಿಗಳಿಗೆ ನೇರವಾಗಿ ಜಮೆ ಆಗುವ ಹಣದ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ…
ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು…
ವಿಶಾಖಪಟ್ಟಣ: ಇಲ್ಲಿನ ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸಂಭವಿಸಿದ ಅವಘಡದಲ್ಲಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಬಂದ…
ಮಂಡ್ಯ: ಒಂದೇ ಕುಟುಂಬದ ಮೂವರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯದ ನೆಹರು ನಗರದಲ್ಲಿ ನಡೆದಿದೆ. ತಂದೆ ಪ್ರಭಾಕರ್, ತಾಯಿ ಜ್ಯೋತಿ…