ಜಿಲ್ಲೆಗಳು

ಕುದುರೆ ಸವಾರಿ ಮಾಡುವ ಅವಕಾಶ ದೊರೆತಿರುವುದು ನನ್ನ ಪೂರ್ವಜನ್ಮದ ಪುಣ್ಯ : ಮೇಯರ್ ಶಿವಕುಮಾರ್

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಅಶ್ವಾರೋಹಿಯಾಗಿ ಭಾಗವಹಿಸಲಿರುವ ಮೈಸೂರಿನ ನೂತನ ಮಹಾಪೌರ ಶಿವಕುಮಾರ್ ಅವರಿಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹಾರ್ಸ್ ಪಾರ್ಕ್‌ನಲ್ಲಿ ಸೋಮವಾರ ಕುದುರೆ ಸವಾರಿ ತರಬೇತಿ ಆರಂಭವಾಯಿತು.‌

ಟೀಶರ್ಟ್,ಟ್ರ್ಯಾಕ್ ಪ್ಯಾಂಟ್,ಶೂ ಹಾಗೂ ಹೆಲ್ಮೆಟ್ ಧರಿಸಿದ್ದ ಶಿವಕುಮಾರ್‌ಗೆ ತರಬೇತಿಯ ಮೊದಲ ದಿನದಂದು ಕುದುರೆ ಏರುವುದು, ಲಗಾಮು ಹಿಡಿಯುವುದು, ಸವಾರಿ ವೇಳೆ ಎಚ್ಚರ ವಹಿಸುವುದು, ಇಳಿಯುವಾಗ ಅನುಸರಿಸಬೇಕಾದ ಕ್ರಮ ಮೊದಲಾದವುಗಳನ್ನು ಅಶ್ವಾರೋಹಿ ದಳದ ಸಿಬ್ಬಂದಿ ತಿಳಿಸಿಕೊಟ್ಟರು.

ಮೊದಲು ಕುದುರೆಯ ಸಾಮರ್ಥ್ಯ, ದೈಹಿಕ ಮತ್ತು ಮಾನಸಿಕ ಲಕ್ಷಣಗಳು,ಸ್ವಭಾವ,ಗಾತ್ರ,ಎತ್ತರ, ಆಹಾರ ಪದ್ಧತಿ ಕುರಿತಂತೆ ಮಾಹಿತಿ ನೀಡಿದ ಪೊಲೀಸರು ಹೊಸಬರ ಬಗ್ಗೆ ಅದರ ಪ್ರತಿಕ್ರಿಯೆ,ಯಾವ ಸಂದರ್ಭದಲ್ಲಿ ಅದು ಉಗ್ರರೂಪ ತಾಳಬಹುದು ಎಂಬುದರ ಕುರಿತು ಮೌಂಟೆಡ್ ಕಂಪನಿತರಬೇತುದಾರ ಶ್ರೀನಿವಾಸ್,ಲೋಕೇಶ್,ಆನಂದ್ ಸಿಂಗ್ ಅವರು ವಿವರಿಸಿದರು. ಆರಂಭದಲ್ಲಿ ಮಹಾಪೌರ ಏರಿದ ಕುದುರೆಯನ್ನು ಓರ್ವ ಸಿಬ್ಬಂದಿ ಹಿಡಿದು ಮೈದಾನದಲ್ಲಿ ಮೂರ್ನಾಲ್ಕು ಸುತ್ತು ನಿಧಾನವಾಗಿ ನಡೆಸಿದರು. ಅದರ ಎಡ ಮತ್ತು ಬಲ ಭಾಗದಲ್ಲಿ ಇಬ್ಬರು ಪೊಲೀಸರು ಕುದುರೆ ಸವಾರಿ ಮಾಡಿದರು.ಬೆಳಿಗ್ಗೆ ೬ರಿಂದ ೭.೩೦ರವರೆಗೆ ಮಹಾಪೌರಿಗೆ ಕುದುರೆ ಸವಾರಿ ಕುರಿತು ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್,ಮಹಾಪೌರರಾಗಿ ಆಯ್ಕೆಯಾಗುತ್ತಿದ್ದಂತೆಯೇ ನಾಡಿನ ಅಧಿದೇವತೆ ಚಾಮುಂಡೇಶ್ವರಿದೇವಿಗೆ ಗಣ್ಯರೊಂದಿಗೆ ಪುಷ್ಪಾರ್ಚನೆ ಮಾಡುವ ಹಾಗೂ ಲಕ್ಷಾಂತರ ಜನರ ಸಮ್ಮುಖದಲ್ಲಿ ವಿಜಯದಶಮಿ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವ ಅವಕಾಶ ದೊರೆತಿರುವುದು ನನ್ನ ಪೂರ್ವಜನ್ಮದ ಪುಣ್ಯವಾಗಿದೆ ಎಂದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago