ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಅಶ್ವಾರೋಹಿಯಾಗಿ ಭಾಗವಹಿಸಲಿರುವ ಮೈಸೂರಿನ ನೂತನ ಮಹಾಪೌರ ಶಿವಕುಮಾರ್ ಅವರಿಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹಾರ್ಸ್ ಪಾರ್ಕ್ನಲ್ಲಿ ಸೋಮವಾರ ಕುದುರೆ ಸವಾರಿ ತರಬೇತಿ ಆರಂಭವಾಯಿತು.
ಟೀಶರ್ಟ್,ಟ್ರ್ಯಾಕ್ ಪ್ಯಾಂಟ್,ಶೂ ಹಾಗೂ ಹೆಲ್ಮೆಟ್ ಧರಿಸಿದ್ದ ಶಿವಕುಮಾರ್ಗೆ ತರಬೇತಿಯ ಮೊದಲ ದಿನದಂದು ಕುದುರೆ ಏರುವುದು, ಲಗಾಮು ಹಿಡಿಯುವುದು, ಸವಾರಿ ವೇಳೆ ಎಚ್ಚರ ವಹಿಸುವುದು, ಇಳಿಯುವಾಗ ಅನುಸರಿಸಬೇಕಾದ ಕ್ರಮ ಮೊದಲಾದವುಗಳನ್ನು ಅಶ್ವಾರೋಹಿ ದಳದ ಸಿಬ್ಬಂದಿ ತಿಳಿಸಿಕೊಟ್ಟರು.
ಮೊದಲು ಕುದುರೆಯ ಸಾಮರ್ಥ್ಯ, ದೈಹಿಕ ಮತ್ತು ಮಾನಸಿಕ ಲಕ್ಷಣಗಳು,ಸ್ವಭಾವ,ಗಾತ್ರ,ಎತ್ತರ, ಆಹಾರ ಪದ್ಧತಿ ಕುರಿತಂತೆ ಮಾಹಿತಿ ನೀಡಿದ ಪೊಲೀಸರು ಹೊಸಬರ ಬಗ್ಗೆ ಅದರ ಪ್ರತಿಕ್ರಿಯೆ,ಯಾವ ಸಂದರ್ಭದಲ್ಲಿ ಅದು ಉಗ್ರರೂಪ ತಾಳಬಹುದು ಎಂಬುದರ ಕುರಿತು ಮೌಂಟೆಡ್ ಕಂಪನಿತರಬೇತುದಾರ ಶ್ರೀನಿವಾಸ್,ಲೋಕೇಶ್,ಆನಂದ್ ಸಿಂಗ್ ಅವರು ವಿವರಿಸಿದರು. ಆರಂಭದಲ್ಲಿ ಮಹಾಪೌರ ಏರಿದ ಕುದುರೆಯನ್ನು ಓರ್ವ ಸಿಬ್ಬಂದಿ ಹಿಡಿದು ಮೈದಾನದಲ್ಲಿ ಮೂರ್ನಾಲ್ಕು ಸುತ್ತು ನಿಧಾನವಾಗಿ ನಡೆಸಿದರು. ಅದರ ಎಡ ಮತ್ತು ಬಲ ಭಾಗದಲ್ಲಿ ಇಬ್ಬರು ಪೊಲೀಸರು ಕುದುರೆ ಸವಾರಿ ಮಾಡಿದರು.ಬೆಳಿಗ್ಗೆ ೬ರಿಂದ ೭.೩೦ರವರೆಗೆ ಮಹಾಪೌರಿಗೆ ಕುದುರೆ ಸವಾರಿ ಕುರಿತು ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್,ಮಹಾಪೌರರಾಗಿ ಆಯ್ಕೆಯಾಗುತ್ತಿದ್ದಂತೆಯೇ ನಾಡಿನ ಅಧಿದೇವತೆ ಚಾಮುಂಡೇಶ್ವರಿದೇವಿಗೆ ಗಣ್ಯರೊಂದಿಗೆ ಪುಷ್ಪಾರ್ಚನೆ ಮಾಡುವ ಹಾಗೂ ಲಕ್ಷಾಂತರ ಜನರ ಸಮ್ಮುಖದಲ್ಲಿ ವಿಜಯದಶಮಿ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವ ಅವಕಾಶ ದೊರೆತಿರುವುದು ನನ್ನ ಪೂರ್ವಜನ್ಮದ ಪುಣ್ಯವಾಗಿದೆ ಎಂದರು.
ಮಂಡ್ಯ : ಇತ್ತೀಚೆಗೆ ಕೆ.ಆರ್.ಪೇಟೆ ಪಟ್ಟಣದ ಎರಡು ಖಾಸಗಿ ಡಯಾಗ್ನಾಸ್ಟಿಕ್ (ಸ್ಕ್ಯಾನಿಂಗ್) ಸೆಂಟರ್ಗಳಲ್ಲಿ ಕಾನೂನುಬಾಹಿರವಾಗಿ ಭ್ರೂಣಲಿಂಗ ಪತ್ತೆ ಮಾಡುತ್ತಿರುವುದನ್ನು ಲೋಕಾಯುಕ್ತ…
ಜನಪ್ರತಿನಿಧಿಗಳ ಆಡಳಿತವಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ಅಂಧ ದರ್ಬಾರ್ ಮೈಸೂರು : ಗ್ಯಾಸ್ ದರ ಹೆಚ್ಚಳ..., ವಿದ್ಯುತ್ ದರ ಹೆಚ್ಚಳ..., ನೀರಿನ…
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…