ಜಿಲ್ಲೆಗಳು

ಹಾಲು : ಸಿಗದ ಪ್ರೋತ್ಸಾಹಧನ

ಮೈಸೂರು ಭಾಗದ ನಾಲ್ಕು ಒಕ್ಕೂಟಗಳಿಂದ ಮಾಹಿತಿ ರವಾನೆ:ಸರ್ಕಾರದಿಂದಲೇ ೧೦೦ ಕೋಟಿ. ರೂ.ವರೆಗೂ ಬಾಕಿ

ಮೈಸೂರು: ರಾಜ್ಯದಲ್ಲಿ ಹಾಲು ಮಾರಾಟದ ದರ ಏರಿಕೆಯಾಗಿ ರೈತರ ಪಾಲು ಹೆಚ್ಚಳದ ಖುಷಿ ಒಂದು ಕಡೆಯಾದರೂ ರೈತರಿಗೆ ಬರಬೇಕಾಗಿರುವ ೫ ರೂ. ಪ್ರೋತ್ಸಾಹಧನದ ಹಾಲಿನ ಬಾಕಿ ಇನ್ನೂ ಬಿಡುಗಡೆಯಾಗಬೇಕಿದೆ. ಏಕೆಂದರೆ ರೈತರಿಗೆ ಸೆಪ್ಟಂಬರ್ ತಿಂಗಳಿನಿಂದಲೇ ಸರ್ಕಾರದ ಪಾಲು ಬಿಡುಗಡೆಯಾಗದೇ ಇರುವುದರಿಂದ ಅತ್ತ ಕಡೆಯೇ ಒಕ್ಕೂಟಗಳು ಮುಖ ಮಾಡಿ ಕುಳಿತಿವೆ.

ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿರುವ ಹಾಲು ಉತ್ಪಾದಕರಿಗೆ ಮೈಮುಲ್‌ನಿಂದ ಕೊಡುತ್ತಿರುವ ೩೨ ರೂ. ಸಾಕಾಗದಿರುವ ಕಾರಣ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡುವ ೫ ರೂ. ಪ್ರೋತ್ಸಾಹಧನಕ್ಕಾಗಿ ಕಾದು ಕುಳಿತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿಯ ನಂತರ ಅತೀ ಹೆಚ್ಚು ಹೈನುಗಾರಿಕೆಯನ್ನೇ ನಂಬಿರುವ ಹಾಲು ಉತ್ಪಾದಕರು ಬ್ಯಾಂಕ್, ಕೈ ಸಾಲ-ಸೋಲ ಮಾಡಿ ಹಸುಗಳನ್ನು ಖರೀದಿಸಿ ಸಾಕುವ ಮೂಲಕ ಡೇರಿಗಳಿಗೆ ಹಾಲು ಹಾಕುತ್ತಿದ್ದಾರೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಒಂದಿಷ್ಟು ಆರ್ಥಿಕ ಚೇತರಿಕೆ ಕಂಡು ನೆಮ್ಮದಿಯಿಂದ ಕುಟುಂಬದ ನಿರ್ವಹಣೆ ನಡೆಯುತ್ತಿದೆ. ಹೀಗಿದ್ದರೂ, ಸರ್ಕಾರ ಪ್ರೋತ್ಸಾಹಧನವನ್ನು ಸಕಾಲಕ್ಕೆ ಬಿಡುಗಡೆ ಮಾಡದಿರುವುದರಿಂದ ಹೈನುಗಾರರಿಗೆ ದೊಡ್ಡ ಹೊಡೆತ ಬಿದ್ದಿದೆ.

ಕರ್ನಾಟಕದಲ್ಲಿ ೧೬ ಹಾಲು ಒಕ್ಕೂಟಗಳಿದ್ದು, ೨೫ ಸಾವಿರಕ್ಕೂ ಹೆಚ್ಚು ಹಾಲು ಉತ್ಪಾದಕರ ಸಹಕಾರ ಸಂಘಗಳಿವೆ. ನಿತ್ಯ ೮೦ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ದಿನದ ಹಾಲಿನ ವಹಿವಾಟಿನ ಪ್ರಮಾಣವೇ ೩೦ ಕೋಟಿ ರೂ.ವರೆಗೂ ಆಗುತ್ತದೆ. ಇದರಲ್ಲಿ ರೈತರಿಗೆ ಪ್ರತಿ ಲೀಟರ್‌ಗೆ ೫ ರೂ. ನೀಡುತ್ತಾ ಬರುತ್ತಿದೆ. ಇದು ಆರೇಳು ವರ್ಷದಿಂದ ಏರಿಕೆಯಾಗಿಲ್ಲ. ಈಗಾಗಲೇ ಸೆಪ್ಟಂಬರ್ ಹಾಗೂ ಅಕ್ಟೋಬರ್ ಮಾಹಿತಿ ಸರ್ಕಾರಕ್ಕೆ ಹೋಗಿದ್ದು, ನವೆಂಬರ್ ಮಾಹಿತಿಯನ್ನೂ ಕಳುಹಿಸಲಾಗುತ್ತಿದೆ. ಈ ಮೂರು ತಿಂಗಳ ಬಾಕಿ ಬಿಡುಗಡೆಯಾಗಬೇಕಾಗಿದೆ.

ಮೈಸೂರು ಭಾಗದಲ್ಲಿಯೇ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಒಳಗೊಂಡಂತೆ ಹಾಸನ ಹಾಲು ಒಕ್ಕೂಟಗಳೂ ಹಾಲು ಸಂಗ್ರಹದಲ್ಲಿ ಅತ್ಯುತ್ತಮ ಸಾಧನೆ ಮಾಡಿವೆ. ಕೋವಿಡ್ ನಂತರ ಹಾಲು ಉತ್ಪಾದನೆ ಪ್ರಮಾಣ ಸಹಜ ಸ್ಥಿತಿ ಬಂದಿದೆ. ಆದರೆ ಪ್ರೋತ್ಸಾಹ ಧನ ವಿತರಣೆಯಲ್ಲಿ ಮಾತ್ರ ಸರ್ಕಾರವನ್ನೇ ಕಾಯಬೇಕಾಗಿರುವುದರಿಂದ ಕನಿಷ್ಠ ಮೂರು ತಿಂಗಳಾದರೂ ವಿಳಂಬವಾಗುತ್ತಿದೆ. ಮೈಸೂರು ಭಾಗದಲ್ಲಿಯೇ ಅಂದಾಜು ೯೦ರಿಂದ ೧೦೦ ಕೋಟಿ ರೂ.ಗಳಷ್ಟು ಎನ್ನುವುದು ಒಕ್ಕೂಟಗಳ ವಿವರಣೆ.

ಮೈಸೂರು

ಸಂಘಗಳು- ೧೧೫೬

ನಿತ್ಯ ಹಾಲು ಪ್ರಮಾಣ- ೬.೫೦ ಲಕ್ಷ ಲೀ

ಸದಸ್ಯರು- ೯೬ ಸಾವಿರ

ದರ- ೩೨ ರೂ.

ಬಾಕಿ- ೩೦ ಕೋಟಿ ರೂ.


ಮಂಡ್ಯ 

ಸಂಘಗಳು-೧೨೭೪

ಹಾಲು ಪ್ರಮಾಣ- ೯ ಲಕ್ಷ ಲೀ

ಸದಸ್ಯರು- ೧,೦೨,೦೦೦

ದರ- ೩೨ ರೂ.

ಬಾಕಿ- ೩೫ ಕೋಟಿ ರೂ.


 

ಚಾಮರಾಜನಗರ

ಸಂಘಗಳು-೪೬೫

ಹಾಲು ಪ್ರಮಾಣ- ೨.೧೦ ಲಕ್ಷ ಲೀ.

ಸದಸ್ಯರು-೩೨ ಸಾವಿರ

ದರ- ೩೨ ರೂ.

ಬಾಕಿ- ೨.೮ ಕೋಟಿ ರೂ.


 

ಕೊಡಗು

ಸಂಘಗಳು- ೩೮

ಹಾಲು ಪ್ರಮಾಣ-

ಸದಸ್ಯರು-೨೭೦೦

ದರ- ೩೨ ರೂ.

ಬಾಕಿ-

 

 

andolanait

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

5 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

5 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

6 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

6 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

7 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

7 hours ago