ಜಿಲ್ಲೆಗಳು

ಹಾಲು : ಸಿಗದ ಪ್ರೋತ್ಸಾಹಧನ

ಮೈಸೂರು ಭಾಗದ ನಾಲ್ಕು ಒಕ್ಕೂಟಗಳಿಂದ ಮಾಹಿತಿ ರವಾನೆ:ಸರ್ಕಾರದಿಂದಲೇ ೧೦೦ ಕೋಟಿ. ರೂ.ವರೆಗೂ ಬಾಕಿ

ಮೈಸೂರು: ರಾಜ್ಯದಲ್ಲಿ ಹಾಲು ಮಾರಾಟದ ದರ ಏರಿಕೆಯಾಗಿ ರೈತರ ಪಾಲು ಹೆಚ್ಚಳದ ಖುಷಿ ಒಂದು ಕಡೆಯಾದರೂ ರೈತರಿಗೆ ಬರಬೇಕಾಗಿರುವ ೫ ರೂ. ಪ್ರೋತ್ಸಾಹಧನದ ಹಾಲಿನ ಬಾಕಿ ಇನ್ನೂ ಬಿಡುಗಡೆಯಾಗಬೇಕಿದೆ. ಏಕೆಂದರೆ ರೈತರಿಗೆ ಸೆಪ್ಟಂಬರ್ ತಿಂಗಳಿನಿಂದಲೇ ಸರ್ಕಾರದ ಪಾಲು ಬಿಡುಗಡೆಯಾಗದೇ ಇರುವುದರಿಂದ ಅತ್ತ ಕಡೆಯೇ ಒಕ್ಕೂಟಗಳು ಮುಖ ಮಾಡಿ ಕುಳಿತಿವೆ.

ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿರುವ ಹಾಲು ಉತ್ಪಾದಕರಿಗೆ ಮೈಮುಲ್‌ನಿಂದ ಕೊಡುತ್ತಿರುವ ೩೨ ರೂ. ಸಾಕಾಗದಿರುವ ಕಾರಣ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡುವ ೫ ರೂ. ಪ್ರೋತ್ಸಾಹಧನಕ್ಕಾಗಿ ಕಾದು ಕುಳಿತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿಯ ನಂತರ ಅತೀ ಹೆಚ್ಚು ಹೈನುಗಾರಿಕೆಯನ್ನೇ ನಂಬಿರುವ ಹಾಲು ಉತ್ಪಾದಕರು ಬ್ಯಾಂಕ್, ಕೈ ಸಾಲ-ಸೋಲ ಮಾಡಿ ಹಸುಗಳನ್ನು ಖರೀದಿಸಿ ಸಾಕುವ ಮೂಲಕ ಡೇರಿಗಳಿಗೆ ಹಾಲು ಹಾಕುತ್ತಿದ್ದಾರೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಒಂದಿಷ್ಟು ಆರ್ಥಿಕ ಚೇತರಿಕೆ ಕಂಡು ನೆಮ್ಮದಿಯಿಂದ ಕುಟುಂಬದ ನಿರ್ವಹಣೆ ನಡೆಯುತ್ತಿದೆ. ಹೀಗಿದ್ದರೂ, ಸರ್ಕಾರ ಪ್ರೋತ್ಸಾಹಧನವನ್ನು ಸಕಾಲಕ್ಕೆ ಬಿಡುಗಡೆ ಮಾಡದಿರುವುದರಿಂದ ಹೈನುಗಾರರಿಗೆ ದೊಡ್ಡ ಹೊಡೆತ ಬಿದ್ದಿದೆ.

ಕರ್ನಾಟಕದಲ್ಲಿ ೧೬ ಹಾಲು ಒಕ್ಕೂಟಗಳಿದ್ದು, ೨೫ ಸಾವಿರಕ್ಕೂ ಹೆಚ್ಚು ಹಾಲು ಉತ್ಪಾದಕರ ಸಹಕಾರ ಸಂಘಗಳಿವೆ. ನಿತ್ಯ ೮೦ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ದಿನದ ಹಾಲಿನ ವಹಿವಾಟಿನ ಪ್ರಮಾಣವೇ ೩೦ ಕೋಟಿ ರೂ.ವರೆಗೂ ಆಗುತ್ತದೆ. ಇದರಲ್ಲಿ ರೈತರಿಗೆ ಪ್ರತಿ ಲೀಟರ್‌ಗೆ ೫ ರೂ. ನೀಡುತ್ತಾ ಬರುತ್ತಿದೆ. ಇದು ಆರೇಳು ವರ್ಷದಿಂದ ಏರಿಕೆಯಾಗಿಲ್ಲ. ಈಗಾಗಲೇ ಸೆಪ್ಟಂಬರ್ ಹಾಗೂ ಅಕ್ಟೋಬರ್ ಮಾಹಿತಿ ಸರ್ಕಾರಕ್ಕೆ ಹೋಗಿದ್ದು, ನವೆಂಬರ್ ಮಾಹಿತಿಯನ್ನೂ ಕಳುಹಿಸಲಾಗುತ್ತಿದೆ. ಈ ಮೂರು ತಿಂಗಳ ಬಾಕಿ ಬಿಡುಗಡೆಯಾಗಬೇಕಾಗಿದೆ.

ಮೈಸೂರು ಭಾಗದಲ್ಲಿಯೇ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಒಳಗೊಂಡಂತೆ ಹಾಸನ ಹಾಲು ಒಕ್ಕೂಟಗಳೂ ಹಾಲು ಸಂಗ್ರಹದಲ್ಲಿ ಅತ್ಯುತ್ತಮ ಸಾಧನೆ ಮಾಡಿವೆ. ಕೋವಿಡ್ ನಂತರ ಹಾಲು ಉತ್ಪಾದನೆ ಪ್ರಮಾಣ ಸಹಜ ಸ್ಥಿತಿ ಬಂದಿದೆ. ಆದರೆ ಪ್ರೋತ್ಸಾಹ ಧನ ವಿತರಣೆಯಲ್ಲಿ ಮಾತ್ರ ಸರ್ಕಾರವನ್ನೇ ಕಾಯಬೇಕಾಗಿರುವುದರಿಂದ ಕನಿಷ್ಠ ಮೂರು ತಿಂಗಳಾದರೂ ವಿಳಂಬವಾಗುತ್ತಿದೆ. ಮೈಸೂರು ಭಾಗದಲ್ಲಿಯೇ ಅಂದಾಜು ೯೦ರಿಂದ ೧೦೦ ಕೋಟಿ ರೂ.ಗಳಷ್ಟು ಎನ್ನುವುದು ಒಕ್ಕೂಟಗಳ ವಿವರಣೆ.

ಮೈಸೂರು

ಸಂಘಗಳು- ೧೧೫೬

ನಿತ್ಯ ಹಾಲು ಪ್ರಮಾಣ- ೬.೫೦ ಲಕ್ಷ ಲೀ

ಸದಸ್ಯರು- ೯೬ ಸಾವಿರ

ದರ- ೩೨ ರೂ.

ಬಾಕಿ- ೩೦ ಕೋಟಿ ರೂ.


ಮಂಡ್ಯ 

ಸಂಘಗಳು-೧೨೭೪

ಹಾಲು ಪ್ರಮಾಣ- ೯ ಲಕ್ಷ ಲೀ

ಸದಸ್ಯರು- ೧,೦೨,೦೦೦

ದರ- ೩೨ ರೂ.

ಬಾಕಿ- ೩೫ ಕೋಟಿ ರೂ.


 

ಚಾಮರಾಜನಗರ

ಸಂಘಗಳು-೪೬೫

ಹಾಲು ಪ್ರಮಾಣ- ೨.೧೦ ಲಕ್ಷ ಲೀ.

ಸದಸ್ಯರು-೩೨ ಸಾವಿರ

ದರ- ೩೨ ರೂ.

ಬಾಕಿ- ೨.೮ ಕೋಟಿ ರೂ.


 

ಕೊಡಗು

ಸಂಘಗಳು- ೩೮

ಹಾಲು ಪ್ರಮಾಣ-

ಸದಸ್ಯರು-೨೭೦೦

ದರ- ೩೨ ರೂ.

ಬಾಕಿ-

 

 

andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

2 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

3 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

3 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

3 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

4 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

5 hours ago