ಜಿಲ್ಲೆಗಳು

ಹಾಲು : ಸಿಗದ ಪ್ರೋತ್ಸಾಹಧನ

ಮೈಸೂರು ಭಾಗದ ನಾಲ್ಕು ಒಕ್ಕೂಟಗಳಿಂದ ಮಾಹಿತಿ ರವಾನೆ:ಸರ್ಕಾರದಿಂದಲೇ ೧೦೦ ಕೋಟಿ. ರೂ.ವರೆಗೂ ಬಾಕಿ

ಮೈಸೂರು: ರಾಜ್ಯದಲ್ಲಿ ಹಾಲು ಮಾರಾಟದ ದರ ಏರಿಕೆಯಾಗಿ ರೈತರ ಪಾಲು ಹೆಚ್ಚಳದ ಖುಷಿ ಒಂದು ಕಡೆಯಾದರೂ ರೈತರಿಗೆ ಬರಬೇಕಾಗಿರುವ ೫ ರೂ. ಪ್ರೋತ್ಸಾಹಧನದ ಹಾಲಿನ ಬಾಕಿ ಇನ್ನೂ ಬಿಡುಗಡೆಯಾಗಬೇಕಿದೆ. ಏಕೆಂದರೆ ರೈತರಿಗೆ ಸೆಪ್ಟಂಬರ್ ತಿಂಗಳಿನಿಂದಲೇ ಸರ್ಕಾರದ ಪಾಲು ಬಿಡುಗಡೆಯಾಗದೇ ಇರುವುದರಿಂದ ಅತ್ತ ಕಡೆಯೇ ಒಕ್ಕೂಟಗಳು ಮುಖ ಮಾಡಿ ಕುಳಿತಿವೆ.

ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿರುವ ಹಾಲು ಉತ್ಪಾದಕರಿಗೆ ಮೈಮುಲ್‌ನಿಂದ ಕೊಡುತ್ತಿರುವ ೩೨ ರೂ. ಸಾಕಾಗದಿರುವ ಕಾರಣ ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡುವ ೫ ರೂ. ಪ್ರೋತ್ಸಾಹಧನಕ್ಕಾಗಿ ಕಾದು ಕುಳಿತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿಯ ನಂತರ ಅತೀ ಹೆಚ್ಚು ಹೈನುಗಾರಿಕೆಯನ್ನೇ ನಂಬಿರುವ ಹಾಲು ಉತ್ಪಾದಕರು ಬ್ಯಾಂಕ್, ಕೈ ಸಾಲ-ಸೋಲ ಮಾಡಿ ಹಸುಗಳನ್ನು ಖರೀದಿಸಿ ಸಾಕುವ ಮೂಲಕ ಡೇರಿಗಳಿಗೆ ಹಾಲು ಹಾಕುತ್ತಿದ್ದಾರೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಒಂದಿಷ್ಟು ಆರ್ಥಿಕ ಚೇತರಿಕೆ ಕಂಡು ನೆಮ್ಮದಿಯಿಂದ ಕುಟುಂಬದ ನಿರ್ವಹಣೆ ನಡೆಯುತ್ತಿದೆ. ಹೀಗಿದ್ದರೂ, ಸರ್ಕಾರ ಪ್ರೋತ್ಸಾಹಧನವನ್ನು ಸಕಾಲಕ್ಕೆ ಬಿಡುಗಡೆ ಮಾಡದಿರುವುದರಿಂದ ಹೈನುಗಾರರಿಗೆ ದೊಡ್ಡ ಹೊಡೆತ ಬಿದ್ದಿದೆ.

ಕರ್ನಾಟಕದಲ್ಲಿ ೧೬ ಹಾಲು ಒಕ್ಕೂಟಗಳಿದ್ದು, ೨೫ ಸಾವಿರಕ್ಕೂ ಹೆಚ್ಚು ಹಾಲು ಉತ್ಪಾದಕರ ಸಹಕಾರ ಸಂಘಗಳಿವೆ. ನಿತ್ಯ ೮೦ ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ದಿನದ ಹಾಲಿನ ವಹಿವಾಟಿನ ಪ್ರಮಾಣವೇ ೩೦ ಕೋಟಿ ರೂ.ವರೆಗೂ ಆಗುತ್ತದೆ. ಇದರಲ್ಲಿ ರೈತರಿಗೆ ಪ್ರತಿ ಲೀಟರ್‌ಗೆ ೫ ರೂ. ನೀಡುತ್ತಾ ಬರುತ್ತಿದೆ. ಇದು ಆರೇಳು ವರ್ಷದಿಂದ ಏರಿಕೆಯಾಗಿಲ್ಲ. ಈಗಾಗಲೇ ಸೆಪ್ಟಂಬರ್ ಹಾಗೂ ಅಕ್ಟೋಬರ್ ಮಾಹಿತಿ ಸರ್ಕಾರಕ್ಕೆ ಹೋಗಿದ್ದು, ನವೆಂಬರ್ ಮಾಹಿತಿಯನ್ನೂ ಕಳುಹಿಸಲಾಗುತ್ತಿದೆ. ಈ ಮೂರು ತಿಂಗಳ ಬಾಕಿ ಬಿಡುಗಡೆಯಾಗಬೇಕಾಗಿದೆ.

ಮೈಸೂರು ಭಾಗದಲ್ಲಿಯೇ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಒಳಗೊಂಡಂತೆ ಹಾಸನ ಹಾಲು ಒಕ್ಕೂಟಗಳೂ ಹಾಲು ಸಂಗ್ರಹದಲ್ಲಿ ಅತ್ಯುತ್ತಮ ಸಾಧನೆ ಮಾಡಿವೆ. ಕೋವಿಡ್ ನಂತರ ಹಾಲು ಉತ್ಪಾದನೆ ಪ್ರಮಾಣ ಸಹಜ ಸ್ಥಿತಿ ಬಂದಿದೆ. ಆದರೆ ಪ್ರೋತ್ಸಾಹ ಧನ ವಿತರಣೆಯಲ್ಲಿ ಮಾತ್ರ ಸರ್ಕಾರವನ್ನೇ ಕಾಯಬೇಕಾಗಿರುವುದರಿಂದ ಕನಿಷ್ಠ ಮೂರು ತಿಂಗಳಾದರೂ ವಿಳಂಬವಾಗುತ್ತಿದೆ. ಮೈಸೂರು ಭಾಗದಲ್ಲಿಯೇ ಅಂದಾಜು ೯೦ರಿಂದ ೧೦೦ ಕೋಟಿ ರೂ.ಗಳಷ್ಟು ಎನ್ನುವುದು ಒಕ್ಕೂಟಗಳ ವಿವರಣೆ.

ಮೈಸೂರು

ಸಂಘಗಳು- ೧೧೫೬

ನಿತ್ಯ ಹಾಲು ಪ್ರಮಾಣ- ೬.೫೦ ಲಕ್ಷ ಲೀ

ಸದಸ್ಯರು- ೯೬ ಸಾವಿರ

ದರ- ೩೨ ರೂ.

ಬಾಕಿ- ೩೦ ಕೋಟಿ ರೂ.


ಮಂಡ್ಯ 

ಸಂಘಗಳು-೧೨೭೪

ಹಾಲು ಪ್ರಮಾಣ- ೯ ಲಕ್ಷ ಲೀ

ಸದಸ್ಯರು- ೧,೦೨,೦೦೦

ದರ- ೩೨ ರೂ.

ಬಾಕಿ- ೩೫ ಕೋಟಿ ರೂ.


 

ಚಾಮರಾಜನಗರ

ಸಂಘಗಳು-೪೬೫

ಹಾಲು ಪ್ರಮಾಣ- ೨.೧೦ ಲಕ್ಷ ಲೀ.

ಸದಸ್ಯರು-೩೨ ಸಾವಿರ

ದರ- ೩೨ ರೂ.

ಬಾಕಿ- ೨.೮ ಕೋಟಿ ರೂ.


 

ಕೊಡಗು

ಸಂಘಗಳು- ೩೮

ಹಾಲು ಪ್ರಮಾಣ-

ಸದಸ್ಯರು-೨೭೦೦

ದರ- ೩೨ ರೂ.

ಬಾಕಿ-

 

 

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

5 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

15 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

20 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

20 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

20 hours ago