ಜಿಲ್ಲೆಗಳು

ಬಾಡುತ್ತಿದೆ ಮೈವಿವಿ ತಾಯಿಬೇರು

ಪಾರಂಪರಿಕತೆ ಹೊಂದಿರುವ ಮಹಾರಾಜ ಕಾಲೇಜು ಕಟ್ಟಡಕ್ಕೆ ಶೀಘ್ರ ದುರಸ್ತಿ ಅಗತ್ಯವಿದೆ

ಬಿ.ಎನ್.ಧನಂಜಯಗೌಡ

ಮೈಸೂರು: ಶತಮಾನ ಪೂರೈಸಿರುವ ಮೈಸೂರಿನ ‘ಮಹಾರಾಜ ಕಾಲೇಜು’ ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಲಾಗಿರುವ ವಿಶೇಷ ಕಟ್ಟಡ. ಇಲ್ಲಿ ನೂರು ವರ್ಷಗಳ ಹಿಂದಿನಿಂದಲೂ ಜ್ಞಾನದಾಹಿಗಳಿಗೆ ನಿರಂತರ ಜ್ಞಾನ ದಾಸೋಹ ಉಣಬಡಿಸಲಾಗುತ್ತಿದೆ. ಇಲ್ಲಿ ವ್ಯಾಸಂಗ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಪ್ರಪಂಚದ ಮೂಲೆ ಮೂಲೆಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪ್ರಸ್ತುತ ಸುಮಾರು ೩ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಕಾಲೇಜಿನ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ.
ಮುಮ್ಮಡಿ ಕೃಷ್ಣರಾಜ ಒಡೆಯರು ೧೮೩೩ರಲ್ಲಿ ‘ರಾಜಾಸ್ ಇಂಗ್ಲಿಷ್ ಫ್ರೀ ಸ್ಕೂಲ್’ ಸ್ಥಾಪಿಸಿದರು. ಆನಂತರ ೧೮೯೭ರಲ್ಲಿ ಎರಡನೇ ಸ್ತರದ ಕಾಲೇಜನ್ನಾಗಿ ಮಾಡಲಾಯಿತು. ೧೦ನೇ ಚಾಮರಾಜ ಒಡೆಯರ್ ಆಡಳಿತಾವಧಿಯಲ್ಲಿ ಅಂದರೆ ೧೮೮೯ರಲ್ಲಿ ಈಗಿನ ಮಹಾರಾಜ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಯಿತು. ನಂತರ ೧೮೯೪ರಲ್ಲಿ ಇದನ್ನು ಪ್ರಥಮ ದರ್ಜೆ ಕಾಲೇಜನ್ನಾಗಿ ಮಾಡಲಾಯಿತು. ಹಾಗಾಗಿ ಈ ಕಾಲೇಜನ್ನು ಮೈಸೂರು ವಿಶ್ವವಿದ್ಯಾನಿಲಯದ ‘ತಾಯಿಬೇರು’ ಎಂದೇ ಹೇಳಲಾಗುತ್ತದೆ.
ಮಹಾರಾಜ ಕಾಲೇಜಿನ ಮುಖ್ಯ ಕಟ್ಟಡದ ಬಣ್ಣ ಮಾಸಿದೆ. ಇಲ್ಲಿನ ಆಡಳಿತ ವಿಭಾಗ ಮತ್ತು ನಗದು ವಿಭಾಗದ ಕೊಠಡಿಗಳ ಮೇಲ್ಚಾವಣಿ ಶಿಥಿಲವಾಗಿದ್ದು, ಮಳೆ ನೀರು ಸೋರಿಕೆಯಿಂದ ಗೋಡೆಯೆಲ್ಲಾ ವಸ್ತಿ ಹಿಡಿದಿದೆ. ಜೂನಿಯರ್ ಬಿ.ಎ. ಹಾಲ್ ಕಿಟಕಿಗಳಲ್ಲಿ ಪಾಚಿ ಬೆಳೆದಿದೆ.
ಪತ್ರಿಕೋದ್ಯಮ ತರಗತಿಗಳು ನಡೆಯುವ ಕಟ್ಟಡವನ್ನು ಯೂನಿಯನ್ ಕಟ್ಟಡ ಎನ್ನಲಾಗುತ್ತದೆ. ಇಲ್ಲಿಯೇ, ಕಂಪ್ಯೂಟರ್ ವಿಭಾಗ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗ ಮತ್ತು ವಾಚನಾಲಯವೂ ಇದೆ. ಈ ಕಟ್ಟಡ ಹೆಚ್ಚಿನ ಪ್ರಮಾಣದಲ್ಲಿ ಶಿಥಿಲಗೊಂಡಿದೆ. ಕಟ್ಟಡದ ಮೇಲೆ ಗಿಡ-ಗಂಟಿಗಳು ಬೆಳೆದಿವೆ. ಮಳೆ ಬಂದಾಗ ನೀರು ಸೋರಿಕೆಯಾಗಿ ತರಗತಿಯ ಒಳಗೆಲ್ಲ ನೀರು ನಿಲ್ಲುತ್ತದೆ.

ಮೇಲ್ಚಾವಣಿ ಕುಸಿದಿತ್ತು : ಎರಡು ವರ್ಷದ ಹಿಂದೆ ಇದೇ ಕಾಲೇಜಿನ ಆವರಣದಲ್ಲಿ ಇರುವ ಕ್ರಿಮಿನಾಲಜಿ ತರಗತಿಗಳು ನಡೆಯುವ ಕೊಠಡಿಯೊಂದರ ಮೇಲ್ಚಾವಣಿ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣ ಪ್ರಮಾಣದ ಗಾಯಗಳಾಗಿತ್ತು.

ತಜ್ಞರ ಅಸಮಾಧಾನ: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿಯುತ್ತಿದ್ದಂತೆ ನಗರದ ಪಾರಂಪರಿಕ ಕಟ್ಟಡಗಳ ಪರಿಶೀಲನೆ ನಡೆಸಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಸದಸ್ಯರು ಮಹಾರಾಜ ಕಾಲೇಜಿಗೂ ಭೇಟಿ ನೀಡಿ ಪರಿಶೀಲಿಸಿದ್ದು, ಕಟ್ಟಡವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿರುವ ಬಗ್ಗೆ ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಮಹಾರಾಜ ಕಾಲೇಜು ಇತಿಹಾಸ:

* ಮುಮ್ಮಡಿ ಕೃಷ್ಣರಾಜ ಒಡೆಯರ್ ೧೮೩೩ರಲ್ಲಿ ಸ್ಥಾಪಿಸಿದ ‘ರಾಜಾಸ್ ಇಂಗ್ಲಿಷ್ ಫ್ರೀ ಸ್ಕೂಲ್’ ಈ ಕಾಲೇಜಿನ ಮೂಲ

*೧೦ನೇ ಚಾಮರಾಜ ಒಡೆಯರ್ ಆಡಳಿತಾವಧಿಯಲ್ಲಿ ಈಗಿರುವ ಜಾಗದಲ್ಲಿ ೧೮೮೯ರಲ್ಲಿ ಈಗಿನ ಕಟ್ಟಡ ನಿರ್ಮಾಣ

* ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಿರುವ ಕಟ್ಟಡ ಇದಾಗಿದೆ


ಕಾಲೇಜಿನಲ್ಲಿ ಓದಿದ ಪ್ರಸಿದ್ಧರು

ಕುವೆಂಪು, ಜಿ.ಎಸ್.ಶಿವರುದ್ರಪ್ಪ, ಆರ್.ಕೆ.ನಾರಾಯಣ್, ಆರ್.ಕೆ.ಲಕ್ಷ್ಮಣ್, ಯು.ಆರ್.ಅನಂತಮೂರ್ತಿ, ಪಿ.ಲಂಕೇಶ್, ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ದೇವನೂರು ಮಹಾದೇವ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಬಿ. ಪಿ.ಶೌರಿ, ಶ್ರೀಕೃಷ್ಣ ಆಲನಹಳ್ಳಿ, ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ, ಎಸ್.ಬಂಗಾರಪ್ಪ, ಜೆ.ಎಚ್.ಪಟೇಲ್, ಎಸ್.ಎಂ.ಕೃಷ್ಣ ಹೀಗೆ ಇನ್ನು ಅನೇಕರು ಈ ಕಾಲೇಜಿನಲ್ಲಿ ಓದಿ ಪ್ರಸಿದ್ಧರಾಗಿದ್ದಾರೆ.



ಮುಮ್ಮಡಿ ಕೃಷ್ಣರಾಜ ಒಡೆಯರು ೧೮೩೩ರಲ್ಲಿ ‘ರಾಜಸ್ ಇಂಗ್ಲಿಷ್ ಫ್ರೀ ಸ್ಕೂಲ್’ ಆರಂಭಿಸಿದರು. ಆನಂತರದ ದಿನಗಳಲ್ಲಿ ಮಹಾರಾಜ ಕಾಲೇಜಾಗಿ ಆಗಿ ಬೆಳೆಯಿತು. ೧೮೮೯ರಲ್ಲಿ ಮಹಾರಾಜ ಕಾಲೇಜು ಕಟ್ಟಡವನ್ನು ಸ್ಥಾಪಿಸಲಾಯಿತು.

– ಈಚನೂರು ಕುಮಾರ್, ಇತಿಹಾಸ ತಜ್ಞ


ಮಹಾರಾಜ ಕಾಲೇಜು ಕಟ್ಟಡದಲ್ಲಿನ ಅನೇಕ ಕೊಠಡಿಗಳಲ್ಲಿ ಮಳೆ ಬಂದಾಗ ನೀರು ಸೋರುತ್ತದೆ. ಪತ್ರಿಕೋದ್ಯಮ ವಿಭಾಗದ ಕಟ್ಟಡವು ಹೆಚ್ಚಿನ ಪ್ರಮಾಣದಲ್ಲಿ ಶಿಥಿಲಗೊಂಡಿದೆ. ಈ ಬಗ್ಗೆ ದುರಸ್ತಿ ಮಾಡಿಸಲು ಸಂಬಂಧಪಟ್ಟವರಿಗೆ ಸಾಕಷ್ಟು ಬಾರಿ ಪತ್ರ ಬರೆಯಲಾಗಿದೆ.

-ಪ್ರೊ.ಅನಿತಾ ವಿಮ್ಲಾ ಬ್ರಾಗ್ಸ್, ಪ್ರಾಂಶುಪಾಲರು, ಮಹಾರಾಜ ಕಾಲೇಜು

andolanait

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

2 hours ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

2 hours ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

3 hours ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

3 hours ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

3 hours ago