ಜಿಲ್ಲೆಗಳು

ಬಾಡುತ್ತಿದೆ ಮೈವಿವಿ ತಾಯಿಬೇರು

ಪಾರಂಪರಿಕತೆ ಹೊಂದಿರುವ ಮಹಾರಾಜ ಕಾಲೇಜು ಕಟ್ಟಡಕ್ಕೆ ಶೀಘ್ರ ದುರಸ್ತಿ ಅಗತ್ಯವಿದೆ

ಬಿ.ಎನ್.ಧನಂಜಯಗೌಡ

ಮೈಸೂರು: ಶತಮಾನ ಪೂರೈಸಿರುವ ಮೈಸೂರಿನ ‘ಮಹಾರಾಜ ಕಾಲೇಜು’ ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಲಾಗಿರುವ ವಿಶೇಷ ಕಟ್ಟಡ. ಇಲ್ಲಿ ನೂರು ವರ್ಷಗಳ ಹಿಂದಿನಿಂದಲೂ ಜ್ಞಾನದಾಹಿಗಳಿಗೆ ನಿರಂತರ ಜ್ಞಾನ ದಾಸೋಹ ಉಣಬಡಿಸಲಾಗುತ್ತಿದೆ. ಇಲ್ಲಿ ವ್ಯಾಸಂಗ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಪ್ರಪಂಚದ ಮೂಲೆ ಮೂಲೆಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪ್ರಸ್ತುತ ಸುಮಾರು ೩ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಕಾಲೇಜಿನ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ.
ಮುಮ್ಮಡಿ ಕೃಷ್ಣರಾಜ ಒಡೆಯರು ೧೮೩೩ರಲ್ಲಿ ‘ರಾಜಾಸ್ ಇಂಗ್ಲಿಷ್ ಫ್ರೀ ಸ್ಕೂಲ್’ ಸ್ಥಾಪಿಸಿದರು. ಆನಂತರ ೧೮೯೭ರಲ್ಲಿ ಎರಡನೇ ಸ್ತರದ ಕಾಲೇಜನ್ನಾಗಿ ಮಾಡಲಾಯಿತು. ೧೦ನೇ ಚಾಮರಾಜ ಒಡೆಯರ್ ಆಡಳಿತಾವಧಿಯಲ್ಲಿ ಅಂದರೆ ೧೮೮೯ರಲ್ಲಿ ಈಗಿನ ಮಹಾರಾಜ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಯಿತು. ನಂತರ ೧೮೯೪ರಲ್ಲಿ ಇದನ್ನು ಪ್ರಥಮ ದರ್ಜೆ ಕಾಲೇಜನ್ನಾಗಿ ಮಾಡಲಾಯಿತು. ಹಾಗಾಗಿ ಈ ಕಾಲೇಜನ್ನು ಮೈಸೂರು ವಿಶ್ವವಿದ್ಯಾನಿಲಯದ ‘ತಾಯಿಬೇರು’ ಎಂದೇ ಹೇಳಲಾಗುತ್ತದೆ.
ಮಹಾರಾಜ ಕಾಲೇಜಿನ ಮುಖ್ಯ ಕಟ್ಟಡದ ಬಣ್ಣ ಮಾಸಿದೆ. ಇಲ್ಲಿನ ಆಡಳಿತ ವಿಭಾಗ ಮತ್ತು ನಗದು ವಿಭಾಗದ ಕೊಠಡಿಗಳ ಮೇಲ್ಚಾವಣಿ ಶಿಥಿಲವಾಗಿದ್ದು, ಮಳೆ ನೀರು ಸೋರಿಕೆಯಿಂದ ಗೋಡೆಯೆಲ್ಲಾ ವಸ್ತಿ ಹಿಡಿದಿದೆ. ಜೂನಿಯರ್ ಬಿ.ಎ. ಹಾಲ್ ಕಿಟಕಿಗಳಲ್ಲಿ ಪಾಚಿ ಬೆಳೆದಿದೆ.
ಪತ್ರಿಕೋದ್ಯಮ ತರಗತಿಗಳು ನಡೆಯುವ ಕಟ್ಟಡವನ್ನು ಯೂನಿಯನ್ ಕಟ್ಟಡ ಎನ್ನಲಾಗುತ್ತದೆ. ಇಲ್ಲಿಯೇ, ಕಂಪ್ಯೂಟರ್ ವಿಭಾಗ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗ ಮತ್ತು ವಾಚನಾಲಯವೂ ಇದೆ. ಈ ಕಟ್ಟಡ ಹೆಚ್ಚಿನ ಪ್ರಮಾಣದಲ್ಲಿ ಶಿಥಿಲಗೊಂಡಿದೆ. ಕಟ್ಟಡದ ಮೇಲೆ ಗಿಡ-ಗಂಟಿಗಳು ಬೆಳೆದಿವೆ. ಮಳೆ ಬಂದಾಗ ನೀರು ಸೋರಿಕೆಯಾಗಿ ತರಗತಿಯ ಒಳಗೆಲ್ಲ ನೀರು ನಿಲ್ಲುತ್ತದೆ.

ಮೇಲ್ಚಾವಣಿ ಕುಸಿದಿತ್ತು : ಎರಡು ವರ್ಷದ ಹಿಂದೆ ಇದೇ ಕಾಲೇಜಿನ ಆವರಣದಲ್ಲಿ ಇರುವ ಕ್ರಿಮಿನಾಲಜಿ ತರಗತಿಗಳು ನಡೆಯುವ ಕೊಠಡಿಯೊಂದರ ಮೇಲ್ಚಾವಣಿ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣ ಪ್ರಮಾಣದ ಗಾಯಗಳಾಗಿತ್ತು.

ತಜ್ಞರ ಅಸಮಾಧಾನ: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿಯುತ್ತಿದ್ದಂತೆ ನಗರದ ಪಾರಂಪರಿಕ ಕಟ್ಟಡಗಳ ಪರಿಶೀಲನೆ ನಡೆಸಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಸದಸ್ಯರು ಮಹಾರಾಜ ಕಾಲೇಜಿಗೂ ಭೇಟಿ ನೀಡಿ ಪರಿಶೀಲಿಸಿದ್ದು, ಕಟ್ಟಡವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿರುವ ಬಗ್ಗೆ ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಮಹಾರಾಜ ಕಾಲೇಜು ಇತಿಹಾಸ:

* ಮುಮ್ಮಡಿ ಕೃಷ್ಣರಾಜ ಒಡೆಯರ್ ೧೮೩೩ರಲ್ಲಿ ಸ್ಥಾಪಿಸಿದ ‘ರಾಜಾಸ್ ಇಂಗ್ಲಿಷ್ ಫ್ರೀ ಸ್ಕೂಲ್’ ಈ ಕಾಲೇಜಿನ ಮೂಲ

*೧೦ನೇ ಚಾಮರಾಜ ಒಡೆಯರ್ ಆಡಳಿತಾವಧಿಯಲ್ಲಿ ಈಗಿರುವ ಜಾಗದಲ್ಲಿ ೧೮೮೯ರಲ್ಲಿ ಈಗಿನ ಕಟ್ಟಡ ನಿರ್ಮಾಣ

* ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಿರುವ ಕಟ್ಟಡ ಇದಾಗಿದೆ


ಕಾಲೇಜಿನಲ್ಲಿ ಓದಿದ ಪ್ರಸಿದ್ಧರು

ಕುವೆಂಪು, ಜಿ.ಎಸ್.ಶಿವರುದ್ರಪ್ಪ, ಆರ್.ಕೆ.ನಾರಾಯಣ್, ಆರ್.ಕೆ.ಲಕ್ಷ್ಮಣ್, ಯು.ಆರ್.ಅನಂತಮೂರ್ತಿ, ಪಿ.ಲಂಕೇಶ್, ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ದೇವನೂರು ಮಹಾದೇವ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಬಿ. ಪಿ.ಶೌರಿ, ಶ್ರೀಕೃಷ್ಣ ಆಲನಹಳ್ಳಿ, ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ, ಎಸ್.ಬಂಗಾರಪ್ಪ, ಜೆ.ಎಚ್.ಪಟೇಲ್, ಎಸ್.ಎಂ.ಕೃಷ್ಣ ಹೀಗೆ ಇನ್ನು ಅನೇಕರು ಈ ಕಾಲೇಜಿನಲ್ಲಿ ಓದಿ ಪ್ರಸಿದ್ಧರಾಗಿದ್ದಾರೆ.



ಮುಮ್ಮಡಿ ಕೃಷ್ಣರಾಜ ಒಡೆಯರು ೧೮೩೩ರಲ್ಲಿ ‘ರಾಜಸ್ ಇಂಗ್ಲಿಷ್ ಫ್ರೀ ಸ್ಕೂಲ್’ ಆರಂಭಿಸಿದರು. ಆನಂತರದ ದಿನಗಳಲ್ಲಿ ಮಹಾರಾಜ ಕಾಲೇಜಾಗಿ ಆಗಿ ಬೆಳೆಯಿತು. ೧೮೮೯ರಲ್ಲಿ ಮಹಾರಾಜ ಕಾಲೇಜು ಕಟ್ಟಡವನ್ನು ಸ್ಥಾಪಿಸಲಾಯಿತು.

– ಈಚನೂರು ಕುಮಾರ್, ಇತಿಹಾಸ ತಜ್ಞ


ಮಹಾರಾಜ ಕಾಲೇಜು ಕಟ್ಟಡದಲ್ಲಿನ ಅನೇಕ ಕೊಠಡಿಗಳಲ್ಲಿ ಮಳೆ ಬಂದಾಗ ನೀರು ಸೋರುತ್ತದೆ. ಪತ್ರಿಕೋದ್ಯಮ ವಿಭಾಗದ ಕಟ್ಟಡವು ಹೆಚ್ಚಿನ ಪ್ರಮಾಣದಲ್ಲಿ ಶಿಥಿಲಗೊಂಡಿದೆ. ಈ ಬಗ್ಗೆ ದುರಸ್ತಿ ಮಾಡಿಸಲು ಸಂಬಂಧಪಟ್ಟವರಿಗೆ ಸಾಕಷ್ಟು ಬಾರಿ ಪತ್ರ ಬರೆಯಲಾಗಿದೆ.

-ಪ್ರೊ.ಅನಿತಾ ವಿಮ್ಲಾ ಬ್ರಾಗ್ಸ್, ಪ್ರಾಂಶುಪಾಲರು, ಮಹಾರಾಜ ಕಾಲೇಜು

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago