ಜಿಲ್ಲೆಗಳು

ಬಾಡುತ್ತಿದೆ ಮೈವಿವಿ ತಾಯಿಬೇರು

ಪಾರಂಪರಿಕತೆ ಹೊಂದಿರುವ ಮಹಾರಾಜ ಕಾಲೇಜು ಕಟ್ಟಡಕ್ಕೆ ಶೀಘ್ರ ದುರಸ್ತಿ ಅಗತ್ಯವಿದೆ

ಬಿ.ಎನ್.ಧನಂಜಯಗೌಡ

ಮೈಸೂರು: ಶತಮಾನ ಪೂರೈಸಿರುವ ಮೈಸೂರಿನ ‘ಮಹಾರಾಜ ಕಾಲೇಜು’ ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಲಾಗಿರುವ ವಿಶೇಷ ಕಟ್ಟಡ. ಇಲ್ಲಿ ನೂರು ವರ್ಷಗಳ ಹಿಂದಿನಿಂದಲೂ ಜ್ಞಾನದಾಹಿಗಳಿಗೆ ನಿರಂತರ ಜ್ಞಾನ ದಾಸೋಹ ಉಣಬಡಿಸಲಾಗುತ್ತಿದೆ. ಇಲ್ಲಿ ವ್ಯಾಸಂಗ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಪ್ರಪಂಚದ ಮೂಲೆ ಮೂಲೆಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪ್ರಸ್ತುತ ಸುಮಾರು ೩ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಕಾಲೇಜಿನ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ.
ಮುಮ್ಮಡಿ ಕೃಷ್ಣರಾಜ ಒಡೆಯರು ೧೮೩೩ರಲ್ಲಿ ‘ರಾಜಾಸ್ ಇಂಗ್ಲಿಷ್ ಫ್ರೀ ಸ್ಕೂಲ್’ ಸ್ಥಾಪಿಸಿದರು. ಆನಂತರ ೧೮೯೭ರಲ್ಲಿ ಎರಡನೇ ಸ್ತರದ ಕಾಲೇಜನ್ನಾಗಿ ಮಾಡಲಾಯಿತು. ೧೦ನೇ ಚಾಮರಾಜ ಒಡೆಯರ್ ಆಡಳಿತಾವಧಿಯಲ್ಲಿ ಅಂದರೆ ೧೮೮೯ರಲ್ಲಿ ಈಗಿನ ಮಹಾರಾಜ ಕಾಲೇಜು ಕಟ್ಟಡ ನಿರ್ಮಾಣ ಮಾಡಲಾಯಿತು. ನಂತರ ೧೮೯೪ರಲ್ಲಿ ಇದನ್ನು ಪ್ರಥಮ ದರ್ಜೆ ಕಾಲೇಜನ್ನಾಗಿ ಮಾಡಲಾಯಿತು. ಹಾಗಾಗಿ ಈ ಕಾಲೇಜನ್ನು ಮೈಸೂರು ವಿಶ್ವವಿದ್ಯಾನಿಲಯದ ‘ತಾಯಿಬೇರು’ ಎಂದೇ ಹೇಳಲಾಗುತ್ತದೆ.
ಮಹಾರಾಜ ಕಾಲೇಜಿನ ಮುಖ್ಯ ಕಟ್ಟಡದ ಬಣ್ಣ ಮಾಸಿದೆ. ಇಲ್ಲಿನ ಆಡಳಿತ ವಿಭಾಗ ಮತ್ತು ನಗದು ವಿಭಾಗದ ಕೊಠಡಿಗಳ ಮೇಲ್ಚಾವಣಿ ಶಿಥಿಲವಾಗಿದ್ದು, ಮಳೆ ನೀರು ಸೋರಿಕೆಯಿಂದ ಗೋಡೆಯೆಲ್ಲಾ ವಸ್ತಿ ಹಿಡಿದಿದೆ. ಜೂನಿಯರ್ ಬಿ.ಎ. ಹಾಲ್ ಕಿಟಕಿಗಳಲ್ಲಿ ಪಾಚಿ ಬೆಳೆದಿದೆ.
ಪತ್ರಿಕೋದ್ಯಮ ತರಗತಿಗಳು ನಡೆಯುವ ಕಟ್ಟಡವನ್ನು ಯೂನಿಯನ್ ಕಟ್ಟಡ ಎನ್ನಲಾಗುತ್ತದೆ. ಇಲ್ಲಿಯೇ, ಕಂಪ್ಯೂಟರ್ ವಿಭಾಗ, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗ ಮತ್ತು ವಾಚನಾಲಯವೂ ಇದೆ. ಈ ಕಟ್ಟಡ ಹೆಚ್ಚಿನ ಪ್ರಮಾಣದಲ್ಲಿ ಶಿಥಿಲಗೊಂಡಿದೆ. ಕಟ್ಟಡದ ಮೇಲೆ ಗಿಡ-ಗಂಟಿಗಳು ಬೆಳೆದಿವೆ. ಮಳೆ ಬಂದಾಗ ನೀರು ಸೋರಿಕೆಯಾಗಿ ತರಗತಿಯ ಒಳಗೆಲ್ಲ ನೀರು ನಿಲ್ಲುತ್ತದೆ.

ಮೇಲ್ಚಾವಣಿ ಕುಸಿದಿತ್ತು : ಎರಡು ವರ್ಷದ ಹಿಂದೆ ಇದೇ ಕಾಲೇಜಿನ ಆವರಣದಲ್ಲಿ ಇರುವ ಕ್ರಿಮಿನಾಲಜಿ ತರಗತಿಗಳು ನಡೆಯುವ ಕೊಠಡಿಯೊಂದರ ಮೇಲ್ಚಾವಣಿ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣ ಪ್ರಮಾಣದ ಗಾಯಗಳಾಗಿತ್ತು.

ತಜ್ಞರ ಅಸಮಾಧಾನ: ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿಯುತ್ತಿದ್ದಂತೆ ನಗರದ ಪಾರಂಪರಿಕ ಕಟ್ಟಡಗಳ ಪರಿಶೀಲನೆ ನಡೆಸಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಸದಸ್ಯರು ಮಹಾರಾಜ ಕಾಲೇಜಿಗೂ ಭೇಟಿ ನೀಡಿ ಪರಿಶೀಲಿಸಿದ್ದು, ಕಟ್ಟಡವನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿರುವ ಬಗ್ಗೆ ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಮಹಾರಾಜ ಕಾಲೇಜು ಇತಿಹಾಸ:

* ಮುಮ್ಮಡಿ ಕೃಷ್ಣರಾಜ ಒಡೆಯರ್ ೧೮೩೩ರಲ್ಲಿ ಸ್ಥಾಪಿಸಿದ ‘ರಾಜಾಸ್ ಇಂಗ್ಲಿಷ್ ಫ್ರೀ ಸ್ಕೂಲ್’ ಈ ಕಾಲೇಜಿನ ಮೂಲ

*೧೦ನೇ ಚಾಮರಾಜ ಒಡೆಯರ್ ಆಡಳಿತಾವಧಿಯಲ್ಲಿ ಈಗಿರುವ ಜಾಗದಲ್ಲಿ ೧೮೮೯ರಲ್ಲಿ ಈಗಿನ ಕಟ್ಟಡ ನಿರ್ಮಾಣ

* ಇಂಡೋ-ಸಾರ್ಸೆನಿಕ್ ಶೈಲಿಯಲ್ಲಿ ನಿರ್ಮಿಸಿರುವ ಕಟ್ಟಡ ಇದಾಗಿದೆ


ಕಾಲೇಜಿನಲ್ಲಿ ಓದಿದ ಪ್ರಸಿದ್ಧರು

ಕುವೆಂಪು, ಜಿ.ಎಸ್.ಶಿವರುದ್ರಪ್ಪ, ಆರ್.ಕೆ.ನಾರಾಯಣ್, ಆರ್.ಕೆ.ಲಕ್ಷ್ಮಣ್, ಯು.ಆರ್.ಅನಂತಮೂರ್ತಿ, ಪಿ.ಲಂಕೇಶ್, ಕೆ.ಪಿ.ಪೂರ್ಣಚಂದ್ರ ತೇಜಸ್ವಿ, ದೇವನೂರು ಮಹಾದೇವ, ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಬಿ. ಪಿ.ಶೌರಿ, ಶ್ರೀಕೃಷ್ಣ ಆಲನಹಳ್ಳಿ, ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್ ಹನುಮಂತಯ್ಯ, ಕಡಿದಾಳ್ ಮಂಜಪ್ಪ, ಎಸ್.ಬಂಗಾರಪ್ಪ, ಜೆ.ಎಚ್.ಪಟೇಲ್, ಎಸ್.ಎಂ.ಕೃಷ್ಣ ಹೀಗೆ ಇನ್ನು ಅನೇಕರು ಈ ಕಾಲೇಜಿನಲ್ಲಿ ಓದಿ ಪ್ರಸಿದ್ಧರಾಗಿದ್ದಾರೆ.



ಮುಮ್ಮಡಿ ಕೃಷ್ಣರಾಜ ಒಡೆಯರು ೧೮೩೩ರಲ್ಲಿ ‘ರಾಜಸ್ ಇಂಗ್ಲಿಷ್ ಫ್ರೀ ಸ್ಕೂಲ್’ ಆರಂಭಿಸಿದರು. ಆನಂತರದ ದಿನಗಳಲ್ಲಿ ಮಹಾರಾಜ ಕಾಲೇಜಾಗಿ ಆಗಿ ಬೆಳೆಯಿತು. ೧೮೮೯ರಲ್ಲಿ ಮಹಾರಾಜ ಕಾಲೇಜು ಕಟ್ಟಡವನ್ನು ಸ್ಥಾಪಿಸಲಾಯಿತು.

– ಈಚನೂರು ಕುಮಾರ್, ಇತಿಹಾಸ ತಜ್ಞ


ಮಹಾರಾಜ ಕಾಲೇಜು ಕಟ್ಟಡದಲ್ಲಿನ ಅನೇಕ ಕೊಠಡಿಗಳಲ್ಲಿ ಮಳೆ ಬಂದಾಗ ನೀರು ಸೋರುತ್ತದೆ. ಪತ್ರಿಕೋದ್ಯಮ ವಿಭಾಗದ ಕಟ್ಟಡವು ಹೆಚ್ಚಿನ ಪ್ರಮಾಣದಲ್ಲಿ ಶಿಥಿಲಗೊಂಡಿದೆ. ಈ ಬಗ್ಗೆ ದುರಸ್ತಿ ಮಾಡಿಸಲು ಸಂಬಂಧಪಟ್ಟವರಿಗೆ ಸಾಕಷ್ಟು ಬಾರಿ ಪತ್ರ ಬರೆಯಲಾಗಿದೆ.

-ಪ್ರೊ.ಅನಿತಾ ವಿಮ್ಲಾ ಬ್ರಾಗ್ಸ್, ಪ್ರಾಂಶುಪಾಲರು, ಮಹಾರಾಜ ಕಾಲೇಜು

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

3 hours ago