ಮೈಸೂರು : ಮೂವರ ಮೇಲೆ ಕಾರು ಹರಿಸಿ, ಕೊಲೆಗೆ ಯತ್ನಿಸಿದ ಆರೋಪಿ ದರ್ಶನ್ (೨೪)ನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮತ್ತೊಂದೆಡೆ, ಈ ಕೃತ್ಯಕ್ಕೆ ಆರೋಪಿಯ ತಾಯಿಯೇ ಪ್ರಚೋದನೆ ನೀಡಿದ್ದಾರೆ ಎಂದು ಗಾಯಾಳು ಪ್ರಜ್ವಲ್ ತಂದೆಯಿಂದ ಆರೋಪ ಕೇಳಿಬಂದಿದೆ.
ಭಾನುವಾರ ತಡರಾತ್ರಿ ಜನತಾ ನಗರದ ಟೆಂಟ್ ಸರ್ಕಲ್ ಬಳಿ ಪ್ರಜ್ವಲ್, ರಾಹುಲ್, ಆನಂದ್ ಎಂಬವರ ಮೇಲೆ ಟಿ.ಕೆ. ಬಡಾವಣೆಯ ನಿವಾಸಿ ವಾಸುದೇವ್ ಅವರ ಮಗ ದರ್ಶನ (೨೪) ಕಾರು ಹರಿಸಿ, ಕೊಲೆಗೆ ಯತ್ನಿಸಿದ್ದ ಈ ಸಂಬಂಧ ಸೋಮವಾರ ಸಂಜೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದರ್ಶನ್ ಹೇಳಿಕೆ : ತಡರಾತ್ರಿಯಾಗಿದ್ದರಿಂದ ರಸ್ತೆಯಲ್ಲಿ ಯಾವುದೇ ವಾಹನಗಳು ಇರಲಿಲ್ಲ. ಹಾಗಾಗಿ, ನಾನು ವೇಗವಾಗಿ ಬಂದಿದ್ದು, ನಿಜ. ಆದರೆ, ದೂರುದಾರರು ಬಲಕ್ಕೆ ತಿರುಗಲು ಇಂಡಿಕೇಟರ್ ಹಾಕಿಕೊಂಡು ಮಾತನಾಡುತ್ತಿದ್ದರು. ಆದರೂ, ಕಾರನ್ನು ನಿಯಂತ್ರಿಸಿದೆ. ಇವರು ಯಾಕೆ ಹೀಗೆ ಬಂದೆ ಎಂದು ನನ್ನ ಮೇಲೆ ಹಲ್ಲೆ ಮಾಡಲು ಬಂದರು. ಈ ಸಮಯದಲ್ಲಿ ನಮ್ಮ ತಂದೆ-ತಾಯಿ ತಪ್ಪಾಯಿತು ಎಂದು ಸಮಾಧಾನ ಮಾಡಿದರು. ನಂತರ ನಾನು ಬೇಕೆಂದು ಅವರ ಮೇಲೆ ಕಾರು ಹರಿಸಿಲ್ಲ. ಕಾರಿನದ್ದು ಆಟೋಮೆಟಿಕ್ ಗೇರ್ ಆಗಿದ್ದರಿಂದ ಮೊದಲ ಗೇರ್ನಲ್ಲಿ ಕಾರು ಜಂಪ್ ಮಾಡಿ, ಅವರಿಗೆ ಡಿಕ್ಕಿ ಹೊಡೆದಿದೆ. ಮತ್ತೆ ಅವರೆಲ್ಲಿ ಹೊಡೆಯಲು ಬರುತ್ತಾರೋ ಎಂದು ಕಾರನ್ನು ರಿವರ್ಸ್ ತೆಗೆದೆ ಎಂದು ವಿಚಾರಣೆ ವೇಳೆ ದರ್ಶನ್ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಇನ್ನು ಮೂವರು ಗಾಯಾಳುಗಳಿಗೂ ಚಿಕಿತ್ಸೆ ಮುಂದುವರಿದಿದೆ. ಪ್ರಜ್ವಲ್ ಸ್ಥಿತಿ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸರ್ಜರಿಯಾಗಿಲ್ಲ. ರಾಹುಲ್ಗೆ ಸರ್ಜರಿ ಆಗಿ ಐಸಿಯುನಲ್ಲಿ ಇದ್ದಾರೆ. ಆನಂದ್ ಎಂಬಾತನಿಗೂ ಸರ್ಜರಿಯಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪ್ರಜ್ವಲ್ ಕುಟುಂಬದ ಮೂಲಗಳು ತಿಳಿಸಿವೆ.
ಆರೋಪಿಯ ತಾಯಿಯಿಂದಲೇ ಪ್ರಚೋದನೆ: ಆರೋಪ
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಹರಿಸಲು ಕಾರಿನಲ್ಲಿ ಇದ್ದ ಆರೋಪಿ ದರ್ಶನ್ ತಾಯಿ ಪ್ರಚೋದನೆ ನೀಡಿದ್ದಾರೆ. ಆದರೆ, ಗಾಯಾಳುವಿನ ಹೇಳಿಕೆ ಪಡೆದು ಎಫ್ಐಆರ್ ಮಾಡಿರುವವರು ಇದನ್ನು ಸೇರಿಸಿಲ್ಲ. ಬದಲಾಗಿ, ತಂದೆ-ತಾಯಿಯೇ ಸಮಾಧಾನ ಮಾಡಿದರು ಎಂದು ಸೇರಿಸಿದ್ದಾರೆ. ಆರೋಪಿಯ ತಂದೆ-ತಾಯಿಗಳು ಮಾನವೀಯತೆಯಿಂದಲೂ ಬಂದು ಗಾಯಾಳುಗಳ ಆರೋಗ್ಯ ವಿಚಾರಿಸಿಲ್ಲ ಎಂದು ಪ್ರಜ್ವಲ್ ತಂದೆ ನಾಗರಾಜು ಆರೋಪಿಸಿದ್ದು, ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ಮಾಡಿ, ನ್ಯಾಯ ಒದಗಿಸುವಂತೆ ಕೋರಿದ್ದಾರೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…