ಜಿಲ್ಲೆಗಳು

ಕಾರು ಹರಿಸಿ ಕೊಲೆ ಯತ್ನ : ದರ್ಶನ್ ನ್ಯಾಯಾಂಗ ಬಂಧನಕ್ಕೆ

ಮೈಸೂರು : ಮೂವರ ಮೇಲೆ ಕಾರು ಹರಿಸಿ, ಕೊಲೆಗೆ ಯತ್ನಿಸಿದ ಆರೋಪಿ ದರ್ಶನ್ (೨೪)ನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮತ್ತೊಂದೆಡೆ, ಈ ಕೃತ್ಯಕ್ಕೆ ಆರೋಪಿಯ ತಾಯಿಯೇ ಪ್ರಚೋದನೆ ನೀಡಿದ್ದಾರೆ ಎಂದು ಗಾಯಾಳು ಪ್ರಜ್ವಲ್ ತಂದೆಯಿಂದ ಆರೋಪ ಕೇಳಿಬಂದಿದೆ.

ಭಾನುವಾರ ತಡರಾತ್ರಿ ಜನತಾ ನಗರದ ಟೆಂಟ್ ಸರ್ಕಲ್ ಬಳಿ ಪ್ರಜ್ವಲ್, ರಾಹುಲ್, ಆನಂದ್ ಎಂಬವರ ಮೇಲೆ ಟಿ.ಕೆ. ಬಡಾವಣೆಯ ನಿವಾಸಿ ವಾಸುದೇವ್ ಅವರ ಮಗ ದರ್ಶನ (೨೪) ಕಾರು ಹರಿಸಿ, ಕೊಲೆಗೆ ಯತ್ನಿಸಿದ್ದ ಈ ಸಂಬಂಧ ಸೋಮವಾರ ಸಂಜೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದರ್ಶನ್ ಹೇಳಿಕೆ : ತಡರಾತ್ರಿಯಾಗಿದ್ದರಿಂದ ರಸ್ತೆಯಲ್ಲಿ ಯಾವುದೇ ವಾಹನಗಳು ಇರಲಿಲ್ಲ. ಹಾಗಾಗಿ, ನಾನು ವೇಗವಾಗಿ ಬಂದಿದ್ದು, ನಿಜ. ಆದರೆ, ದೂರುದಾರರು ಬಲಕ್ಕೆ ತಿರುಗಲು ಇಂಡಿಕೇಟರ್ ಹಾಕಿಕೊಂಡು ಮಾತನಾಡುತ್ತಿದ್ದರು. ಆದರೂ, ಕಾರನ್ನು ನಿಯಂತ್ರಿಸಿದೆ. ಇವರು ಯಾಕೆ ಹೀಗೆ ಬಂದೆ ಎಂದು ನನ್ನ ಮೇಲೆ ಹಲ್ಲೆ ಮಾಡಲು ಬಂದರು. ಈ ಸಮಯದಲ್ಲಿ ನಮ್ಮ ತಂದೆ-ತಾಯಿ ತಪ್ಪಾಯಿತು ಎಂದು ಸಮಾಧಾನ ಮಾಡಿದರು. ನಂತರ ನಾನು ಬೇಕೆಂದು ಅವರ ಮೇಲೆ ಕಾರು ಹರಿಸಿಲ್ಲ. ಕಾರಿನದ್ದು ಆಟೋಮೆಟಿಕ್ ಗೇರ್ ಆಗಿದ್ದರಿಂದ ಮೊದಲ ಗೇರ್‌ನಲ್ಲಿ ಕಾರು ಜಂಪ್ ಮಾಡಿ, ಅವರಿಗೆ ಡಿಕ್ಕಿ ಹೊಡೆದಿದೆ. ಮತ್ತೆ ಅವರೆಲ್ಲಿ ಹೊಡೆಯಲು ಬರುತ್ತಾರೋ ಎಂದು ಕಾರನ್ನು ರಿವರ್ಸ್ ತೆಗೆದೆ ಎಂದು ವಿಚಾರಣೆ ವೇಳೆ ದರ್ಶನ್ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಇನ್ನು ಮೂವರು ಗಾಯಾಳುಗಳಿಗೂ ಚಿಕಿತ್ಸೆ ಮುಂದುವರಿದಿದೆ. ಪ್ರಜ್ವಲ್ ಸ್ಥಿತಿ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸರ್ಜರಿಯಾಗಿಲ್ಲ. ರಾಹುಲ್‌ಗೆ ಸರ್ಜರಿ ಆಗಿ ಐಸಿಯುನಲ್ಲಿ ಇದ್ದಾರೆ. ಆನಂದ್ ಎಂಬಾತನಿಗೂ ಸರ್ಜರಿಯಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪ್ರಜ್ವಲ್ ಕುಟುಂಬದ ಮೂಲಗಳು ತಿಳಿಸಿವೆ.

ಆರೋಪಿಯ ತಾಯಿಯಿಂದಲೇ ಪ್ರಚೋದನೆ: ಆರೋಪ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಹರಿಸಲು ಕಾರಿನಲ್ಲಿ ಇದ್ದ ಆರೋಪಿ ದರ್ಶನ್ ತಾಯಿ ಪ್ರಚೋದನೆ ನೀಡಿದ್ದಾರೆ. ಆದರೆ, ಗಾಯಾಳುವಿನ ಹೇಳಿಕೆ ಪಡೆದು ಎಫ್‌ಐಆರ್ ಮಾಡಿರುವವರು ಇದನ್ನು ಸೇರಿಸಿಲ್ಲ. ಬದಲಾಗಿ, ತಂದೆ-ತಾಯಿಯೇ ಸಮಾಧಾನ ಮಾಡಿದರು ಎಂದು ಸೇರಿಸಿದ್ದಾರೆ. ಆರೋಪಿಯ ತಂದೆ-ತಾಯಿಗಳು ಮಾನವೀಯತೆಯಿಂದಲೂ ಬಂದು ಗಾಯಾಳುಗಳ ಆರೋಗ್ಯ ವಿಚಾರಿಸಿಲ್ಲ ಎಂದು ಪ್ರಜ್ವಲ್ ತಂದೆ ನಾಗರಾಜು ಆರೋಪಿಸಿದ್ದು, ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ಮಾಡಿ, ನ್ಯಾಯ ಒದಗಿಸುವಂತೆ ಕೋರಿದ್ದಾರೆ.

andolanait

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

1 hour ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago