ಜಿಲ್ಲೆಗಳು

ಕಾರು ಹರಿಸಿ ಕೊಲೆ ಯತ್ನ : ದರ್ಶನ್ ನ್ಯಾಯಾಂಗ ಬಂಧನಕ್ಕೆ

ಮೈಸೂರು : ಮೂವರ ಮೇಲೆ ಕಾರು ಹರಿಸಿ, ಕೊಲೆಗೆ ಯತ್ನಿಸಿದ ಆರೋಪಿ ದರ್ಶನ್ (೨೪)ನನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮತ್ತೊಂದೆಡೆ, ಈ ಕೃತ್ಯಕ್ಕೆ ಆರೋಪಿಯ ತಾಯಿಯೇ ಪ್ರಚೋದನೆ ನೀಡಿದ್ದಾರೆ ಎಂದು ಗಾಯಾಳು ಪ್ರಜ್ವಲ್ ತಂದೆಯಿಂದ ಆರೋಪ ಕೇಳಿಬಂದಿದೆ.

ಭಾನುವಾರ ತಡರಾತ್ರಿ ಜನತಾ ನಗರದ ಟೆಂಟ್ ಸರ್ಕಲ್ ಬಳಿ ಪ್ರಜ್ವಲ್, ರಾಹುಲ್, ಆನಂದ್ ಎಂಬವರ ಮೇಲೆ ಟಿ.ಕೆ. ಬಡಾವಣೆಯ ನಿವಾಸಿ ವಾಸುದೇವ್ ಅವರ ಮಗ ದರ್ಶನ (೨೪) ಕಾರು ಹರಿಸಿ, ಕೊಲೆಗೆ ಯತ್ನಿಸಿದ್ದ ಈ ಸಂಬಂಧ ಸೋಮವಾರ ಸಂಜೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದರ್ಶನ್ ಹೇಳಿಕೆ : ತಡರಾತ್ರಿಯಾಗಿದ್ದರಿಂದ ರಸ್ತೆಯಲ್ಲಿ ಯಾವುದೇ ವಾಹನಗಳು ಇರಲಿಲ್ಲ. ಹಾಗಾಗಿ, ನಾನು ವೇಗವಾಗಿ ಬಂದಿದ್ದು, ನಿಜ. ಆದರೆ, ದೂರುದಾರರು ಬಲಕ್ಕೆ ತಿರುಗಲು ಇಂಡಿಕೇಟರ್ ಹಾಕಿಕೊಂಡು ಮಾತನಾಡುತ್ತಿದ್ದರು. ಆದರೂ, ಕಾರನ್ನು ನಿಯಂತ್ರಿಸಿದೆ. ಇವರು ಯಾಕೆ ಹೀಗೆ ಬಂದೆ ಎಂದು ನನ್ನ ಮೇಲೆ ಹಲ್ಲೆ ಮಾಡಲು ಬಂದರು. ಈ ಸಮಯದಲ್ಲಿ ನಮ್ಮ ತಂದೆ-ತಾಯಿ ತಪ್ಪಾಯಿತು ಎಂದು ಸಮಾಧಾನ ಮಾಡಿದರು. ನಂತರ ನಾನು ಬೇಕೆಂದು ಅವರ ಮೇಲೆ ಕಾರು ಹರಿಸಿಲ್ಲ. ಕಾರಿನದ್ದು ಆಟೋಮೆಟಿಕ್ ಗೇರ್ ಆಗಿದ್ದರಿಂದ ಮೊದಲ ಗೇರ್‌ನಲ್ಲಿ ಕಾರು ಜಂಪ್ ಮಾಡಿ, ಅವರಿಗೆ ಡಿಕ್ಕಿ ಹೊಡೆದಿದೆ. ಮತ್ತೆ ಅವರೆಲ್ಲಿ ಹೊಡೆಯಲು ಬರುತ್ತಾರೋ ಎಂದು ಕಾರನ್ನು ರಿವರ್ಸ್ ತೆಗೆದೆ ಎಂದು ವಿಚಾರಣೆ ವೇಳೆ ದರ್ಶನ್ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಇನ್ನು ಮೂವರು ಗಾಯಾಳುಗಳಿಗೂ ಚಿಕಿತ್ಸೆ ಮುಂದುವರಿದಿದೆ. ಪ್ರಜ್ವಲ್ ಸ್ಥಿತಿ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸರ್ಜರಿಯಾಗಿಲ್ಲ. ರಾಹುಲ್‌ಗೆ ಸರ್ಜರಿ ಆಗಿ ಐಸಿಯುನಲ್ಲಿ ಇದ್ದಾರೆ. ಆನಂದ್ ಎಂಬಾತನಿಗೂ ಸರ್ಜರಿಯಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪ್ರಜ್ವಲ್ ಕುಟುಂಬದ ಮೂಲಗಳು ತಿಳಿಸಿವೆ.

ಆರೋಪಿಯ ತಾಯಿಯಿಂದಲೇ ಪ್ರಚೋದನೆ: ಆರೋಪ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಹರಿಸಲು ಕಾರಿನಲ್ಲಿ ಇದ್ದ ಆರೋಪಿ ದರ್ಶನ್ ತಾಯಿ ಪ್ರಚೋದನೆ ನೀಡಿದ್ದಾರೆ. ಆದರೆ, ಗಾಯಾಳುವಿನ ಹೇಳಿಕೆ ಪಡೆದು ಎಫ್‌ಐಆರ್ ಮಾಡಿರುವವರು ಇದನ್ನು ಸೇರಿಸಿಲ್ಲ. ಬದಲಾಗಿ, ತಂದೆ-ತಾಯಿಯೇ ಸಮಾಧಾನ ಮಾಡಿದರು ಎಂದು ಸೇರಿಸಿದ್ದಾರೆ. ಆರೋಪಿಯ ತಂದೆ-ತಾಯಿಗಳು ಮಾನವೀಯತೆಯಿಂದಲೂ ಬಂದು ಗಾಯಾಳುಗಳ ಆರೋಗ್ಯ ವಿಚಾರಿಸಿಲ್ಲ ಎಂದು ಪ್ರಜ್ವಲ್ ತಂದೆ ನಾಗರಾಜು ಆರೋಪಿಸಿದ್ದು, ಪೊಲೀಸರು ಸೂಕ್ತ ರೀತಿಯಲ್ಲಿ ತನಿಖೆ ಮಾಡಿ, ನ್ಯಾಯ ಒದಗಿಸುವಂತೆ ಕೋರಿದ್ದಾರೆ.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago