ಮೈಸೂರು: ನಾಡಹಬ್ಬ ದಸರೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ. ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಸಿದ್ದಗೊಳಿಸುವ ನಿಟ್ಟಿನಲ್ಲಿ ಇಂದು ನಗರ ಸಶಸ್ತ್ರ ಮೀಸಲು ಪಡೆ (City armed reserve police force) ಪೊಲೀಸರು ಆನೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು (Cannon firing rehearsal) ನಡೆಸಿದರು. 14 ಆನೆಗಳು ಮತ್ತು 43 ಅಶ್ವಗಳು ತಾಲೀಮಿನಲ್ಲಿ ಭಾಗವಹಿಸಿದ್ದವು. ಇದೇ ಮೊದಲ ಬಾರಿಗೆ ದಸರೆ ಗಜೆ ಪಡೆಗೆ ಸೇರಿರುವ 18 ವರ್ಷದ ಕಿರಿಯ ಆನೆ ಪಾರ್ಥಸಾರಥಿ ಫಿರಂಗಿ ಸಿಡಿದಾಗ ಬೆಚ್ಚಿ ಹಿಂದಕ್ಕೆ ಸರಿದ. ಆತನನ್ನು ಮಾವುತರು ನಿಯಂತ್ರಣಕ್ಕೆ ತಂದರು. ಇದೇ ರೀತಿ ಮೊದಲ ಬಾರಿ ದಸರೆ ತಂಡಕ್ಕೆ ಸೇರಿಕೊಂಡಿರುವ ಶ್ರೀ ರಾಮ, ಸುಗ್ರೀವ ಹೆಸರಿನ ಆನೆಗಳೂ ಸ್ವಲ್ಪ ಮಟ್ಟಿಗೆ ಭಯಗೊಂಡವು. ಭೀಮ ಮತ್ತು ತಂಡದ ಹಿರಿಯ ಸದಸ್ಯೆಯಾಗಿರುವ ವಿಜಯಾ ಕೂಡ ಬೆದರಿದಂತೆ ಕಂಡು ಬಂದವು. ಈ ನಡುವೆ ತಾಲೀಮಿಗೆ ಮುನ್ನವೇ ಎರ್ಟನ್ ಬೋಲ್ಟ್ ಹೆಸರಿನ ಕುದುರೆಯೊಂದು ಗದ್ದಲ ಎಬ್ಬಿಸಿತು. ಅದನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗದಿದ್ದಾಗ ತಾಲೀಮು ತಂಡದಿಂದ ಹೊರಗೆ ಕಳುಹಿಸಲಾಯಿತು. ಅನುಭವಿ ಆನೆಗಳಾದ ದಸರೆ ಪಡೆಯ ಮಾಜಿ ನಾಯಕ ಅರ್ಜುನ ಮತ್ತು ಹಾಲಿ ನಾಯಕ ಅಭಿಮನ್ಯು ಸೇರಿದಂತೆ ಈ ಹಿಂದೆ ದಸರೆ ಜಂಬೂ ಸವಾರಿಯಲ್ಲಿ ಭಾಗವಹಿಸಿದ ಇತರ ಆನೆಗಳು ಯಾವುದೇ ಅಳುಕು ತೋರಿಸದೆ ತಾಲೀಮಿನಲ್ಲಿ ಪಾಲ್ಗೊಂಡವು. ಮೂರು ಸುತ್ತಿನಲ್ಲಿ 21 ಫಿರಂಗಿ ಸಿಡಿಸಲಾಯಿತು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಡಿಸಿಎಫ್ ಡಾ. ವಿ. ಕರಿಕಾಳನ್, ಡಿಸಿಪಿ ಪ್ರದೀಪ್ ಗುಂಟಿ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…