ಮೈಸೂರು: ನಾಡಹಬ್ಬ ದಸರೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ. ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಸಿದ್ದಗೊಳಿಸುವ ನಿಟ್ಟಿನಲ್ಲಿ ಇಂದು ನಗರ ಸಶಸ್ತ್ರ ಮೀಸಲು ಪಡೆ (City armed reserve police force) ಪೊಲೀಸರು ಆನೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು (Cannon firing rehearsal) ನಡೆಸಿದರು. 14 ಆನೆಗಳು ಮತ್ತು 43 ಅಶ್ವಗಳು ತಾಲೀಮಿನಲ್ಲಿ ಭಾಗವಹಿಸಿದ್ದವು. ಇದೇ ಮೊದಲ ಬಾರಿಗೆ ದಸರೆ ಗಜೆ ಪಡೆಗೆ ಸೇರಿರುವ 18 ವರ್ಷದ ಕಿರಿಯ ಆನೆ ಪಾರ್ಥಸಾರಥಿ ಫಿರಂಗಿ ಸಿಡಿದಾಗ ಬೆಚ್ಚಿ ಹಿಂದಕ್ಕೆ ಸರಿದ. ಆತನನ್ನು ಮಾವುತರು ನಿಯಂತ್ರಣಕ್ಕೆ ತಂದರು. ಇದೇ ರೀತಿ ಮೊದಲ ಬಾರಿ ದಸರೆ ತಂಡಕ್ಕೆ ಸೇರಿಕೊಂಡಿರುವ ಶ್ರೀ ರಾಮ, ಸುಗ್ರೀವ ಹೆಸರಿನ ಆನೆಗಳೂ ಸ್ವಲ್ಪ ಮಟ್ಟಿಗೆ ಭಯಗೊಂಡವು. ಭೀಮ ಮತ್ತು ತಂಡದ ಹಿರಿಯ ಸದಸ್ಯೆಯಾಗಿರುವ ವಿಜಯಾ ಕೂಡ ಬೆದರಿದಂತೆ ಕಂಡು ಬಂದವು. ಈ ನಡುವೆ ತಾಲೀಮಿಗೆ ಮುನ್ನವೇ ಎರ್ಟನ್ ಬೋಲ್ಟ್ ಹೆಸರಿನ ಕುದುರೆಯೊಂದು ಗದ್ದಲ ಎಬ್ಬಿಸಿತು. ಅದನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗದಿದ್ದಾಗ ತಾಲೀಮು ತಂಡದಿಂದ ಹೊರಗೆ ಕಳುಹಿಸಲಾಯಿತು. ಅನುಭವಿ ಆನೆಗಳಾದ ದಸರೆ ಪಡೆಯ ಮಾಜಿ ನಾಯಕ ಅರ್ಜುನ ಮತ್ತು ಹಾಲಿ ನಾಯಕ ಅಭಿಮನ್ಯು ಸೇರಿದಂತೆ ಈ ಹಿಂದೆ ದಸರೆ ಜಂಬೂ ಸವಾರಿಯಲ್ಲಿ ಭಾಗವಹಿಸಿದ ಇತರ ಆನೆಗಳು ಯಾವುದೇ ಅಳುಕು ತೋರಿಸದೆ ತಾಲೀಮಿನಲ್ಲಿ ಪಾಲ್ಗೊಂಡವು. ಮೂರು ಸುತ್ತಿನಲ್ಲಿ 21 ಫಿರಂಗಿ ಸಿಡಿಸಲಾಯಿತು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಡಿಸಿಎಫ್ ಡಾ. ವಿ. ಕರಿಕಾಳನ್, ಡಿಸಿಪಿ ಪ್ರದೀಪ್ ಗುಂಟಿ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…