ಜಿಲ್ಲೆಗಳು

ಅರಮನೆ ಆವರಣದಲ್ಲಿ ದಸರೆ ಆನೆಗಳ ಸಮ್ಮುಖ ಫಿರಂಗಿ ಸಿಡಿಸಿ ತಾಲೀಮು


ಮೈಸೂರು
: ನಾಡಹಬ್ಬ ದಸರೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ. ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಸಿದ್ದಗೊಳಿಸುವ ನಿಟ್ಟಿನಲ್ಲಿ ಇಂದು ನಗರ ಸಶಸ್ತ್ರ ಮೀಸಲು ಪಡೆ (City armed reserve police force) ಪೊಲೀಸರು ಆನೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು (Cannon firing rehearsal) ನಡೆಸಿದರು. 14 ಆನೆಗಳು ಮತ್ತು 43 ಅಶ್ವಗಳು ತಾಲೀಮಿನಲ್ಲಿ ಭಾಗವಹಿಸಿದ್ದವು. ಇದೇ ಮೊದಲ ಬಾರಿಗೆ ದಸರೆ ಗಜೆ ಪಡೆಗೆ ಸೇರಿರುವ 18 ವರ್ಷದ ಕಿರಿಯ ಆನೆ ಪಾರ್ಥಸಾರಥಿ ಫಿರಂಗಿ ಸಿಡಿದಾಗ ಬೆಚ್ಚಿ ಹಿಂದಕ್ಕೆ ಸರಿದ. ಆತನನ್ನು ಮಾವುತರು ನಿಯಂತ್ರಣಕ್ಕೆ ತಂದರು. ಇದೇ ರೀತಿ ಮೊದಲ ಬಾರಿ ದಸರೆ ತಂಡಕ್ಕೆ ಸೇರಿಕೊಂಡಿರುವ ಶ್ರೀ ರಾಮ, ಸುಗ್ರೀವ ಹೆಸರಿನ ಆನೆಗಳೂ ಸ್ವಲ್ಪ ಮಟ್ಟಿಗೆ ಭಯಗೊಂಡವು. ಭೀಮ ಮತ್ತು ತಂಡದ ಹಿರಿಯ ಸದಸ್ಯೆಯಾಗಿರುವ ವಿಜಯಾ ಕೂಡ ಬೆದರಿದಂತೆ ಕಂಡು ಬಂದವು. ಈ ನಡುವೆ ತಾಲೀಮಿಗೆ ಮುನ್ನವೇ ಎರ್ಟನ್‌ ಬೋಲ್ಟ್‌ ಹೆಸರಿನ ಕುದುರೆಯೊಂದು ಗದ್ದಲ ಎಬ್ಬಿಸಿತು. ಅದನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗದಿದ್ದಾಗ ತಾಲೀಮು ತಂಡದಿಂದ ಹೊರಗೆ ಕಳುಹಿಸಲಾಯಿತು. ಅನುಭವಿ ಆನೆಗಳಾದ ದಸರೆ ಪಡೆಯ ಮಾಜಿ ನಾಯಕ ಅರ್ಜುನ ಮತ್ತು ಹಾಲಿ ನಾಯಕ ಅಭಿಮನ್ಯು ಸೇರಿದಂತೆ ಈ ಹಿಂದೆ ದಸರೆ ಜಂಬೂ ಸವಾರಿಯಲ್ಲಿ ಭಾಗವಹಿಸಿದ ಇತರ ಆನೆಗಳು ಯಾವುದೇ ಅಳುಕು ತೋರಿಸದೆ ತಾಲೀಮಿನಲ್ಲಿ ಪಾಲ್ಗೊಂಡವು. ಮೂರು ಸುತ್ತಿನಲ್ಲಿ 21 ಫಿರಂಗಿ ಸಿಡಿಸಲಾಯಿತು ನಗರ ಪೊಲೀಸ್‌ ಆಯುಕ್ತ ಡಾ. ಚಂದ್ರಗುಪ್ತ ಡಿಸಿಎಫ್‌ ಡಾ. ವಿ. ಕರಿಕಾಳನ್, ಡಿಸಿಪಿ ಪ್ರದೀಪ್‌ ಗುಂಟಿ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

andolanait

Recent Posts

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

11 mins ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

16 mins ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

20 mins ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

28 mins ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

32 mins ago

ಸರ್ಕಾರವನ್ನು ಉರುಳಿಸಲು…” ಪತ್ರವೊಂದರಲ್ಲಿ ಸಜೀವವಾಗಿರುವ ಒಂದು ಪೀಳಿಗೆಯ ಕಥೆ

ಚಿತ್ರ,ಲೇಖನ: ರಶ್ಮಿ ಕೋಟಿ “ನಿನ್ನೆ ಹುಬ್ಬಳ್ಳಿಯಲ್ಲಿ ಬಹಿರಂಗ ಸಭೆ ಇತ್ತು. ಎಲ್ಲ ಕಾಲೇಜುಗಳ ಬಂದ್ ಆಗಿತ್ತು. ಸುಮಾರು ೫,೦೦೦ ಜನರ…

36 mins ago