ಜಿಲ್ಲೆಗಳು

ಅರಮನೆ ಆವರಣದಲ್ಲಿ ದಸರೆ ಆನೆಗಳ ಸಮ್ಮುಖ ಫಿರಂಗಿ ಸಿಡಿಸಿ ತಾಲೀಮು


ಮೈಸೂರು
: ನಾಡಹಬ್ಬ ದಸರೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ. ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಸಿದ್ದಗೊಳಿಸುವ ನಿಟ್ಟಿನಲ್ಲಿ ಇಂದು ನಗರ ಸಶಸ್ತ್ರ ಮೀಸಲು ಪಡೆ (City armed reserve police force) ಪೊಲೀಸರು ಆನೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು (Cannon firing rehearsal) ನಡೆಸಿದರು. 14 ಆನೆಗಳು ಮತ್ತು 43 ಅಶ್ವಗಳು ತಾಲೀಮಿನಲ್ಲಿ ಭಾಗವಹಿಸಿದ್ದವು. ಇದೇ ಮೊದಲ ಬಾರಿಗೆ ದಸರೆ ಗಜೆ ಪಡೆಗೆ ಸೇರಿರುವ 18 ವರ್ಷದ ಕಿರಿಯ ಆನೆ ಪಾರ್ಥಸಾರಥಿ ಫಿರಂಗಿ ಸಿಡಿದಾಗ ಬೆಚ್ಚಿ ಹಿಂದಕ್ಕೆ ಸರಿದ. ಆತನನ್ನು ಮಾವುತರು ನಿಯಂತ್ರಣಕ್ಕೆ ತಂದರು. ಇದೇ ರೀತಿ ಮೊದಲ ಬಾರಿ ದಸರೆ ತಂಡಕ್ಕೆ ಸೇರಿಕೊಂಡಿರುವ ಶ್ರೀ ರಾಮ, ಸುಗ್ರೀವ ಹೆಸರಿನ ಆನೆಗಳೂ ಸ್ವಲ್ಪ ಮಟ್ಟಿಗೆ ಭಯಗೊಂಡವು. ಭೀಮ ಮತ್ತು ತಂಡದ ಹಿರಿಯ ಸದಸ್ಯೆಯಾಗಿರುವ ವಿಜಯಾ ಕೂಡ ಬೆದರಿದಂತೆ ಕಂಡು ಬಂದವು. ಈ ನಡುವೆ ತಾಲೀಮಿಗೆ ಮುನ್ನವೇ ಎರ್ಟನ್‌ ಬೋಲ್ಟ್‌ ಹೆಸರಿನ ಕುದುರೆಯೊಂದು ಗದ್ದಲ ಎಬ್ಬಿಸಿತು. ಅದನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗದಿದ್ದಾಗ ತಾಲೀಮು ತಂಡದಿಂದ ಹೊರಗೆ ಕಳುಹಿಸಲಾಯಿತು. ಅನುಭವಿ ಆನೆಗಳಾದ ದಸರೆ ಪಡೆಯ ಮಾಜಿ ನಾಯಕ ಅರ್ಜುನ ಮತ್ತು ಹಾಲಿ ನಾಯಕ ಅಭಿಮನ್ಯು ಸೇರಿದಂತೆ ಈ ಹಿಂದೆ ದಸರೆ ಜಂಬೂ ಸವಾರಿಯಲ್ಲಿ ಭಾಗವಹಿಸಿದ ಇತರ ಆನೆಗಳು ಯಾವುದೇ ಅಳುಕು ತೋರಿಸದೆ ತಾಲೀಮಿನಲ್ಲಿ ಪಾಲ್ಗೊಂಡವು. ಮೂರು ಸುತ್ತಿನಲ್ಲಿ 21 ಫಿರಂಗಿ ಸಿಡಿಸಲಾಯಿತು ನಗರ ಪೊಲೀಸ್‌ ಆಯುಕ್ತ ಡಾ. ಚಂದ್ರಗುಪ್ತ ಡಿಸಿಎಫ್‌ ಡಾ. ವಿ. ಕರಿಕಾಳನ್, ಡಿಸಿಪಿ ಪ್ರದೀಪ್‌ ಗುಂಟಿ ಮತ್ತಿತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

andolanait

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

11 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

12 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

12 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

12 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

13 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

22 hours ago