ಜಿಲ್ಲೆಗಳು

ಮೈಸೂರಿನಲ್ಲಿ ಪ್ಲಾಸ್ಟಿಕ್ ಹಾವಳಿಗೆ ಬ್ರೇಕ್; ಕೆಎಎಸ್ ಅಧಿಕಾರಿಗೆ ವರ್ಗ ಶಾಕ್

ಮೈಸೂರು ನಗರಪಾಲಿಕೆ ಆರಂಭಿಸಿದ್ದ ಪ್ಲಾಸ್ಟಿಕ್ ನಿಯಂತ್ರಣದ ಭಯ ಈಗ ಮಾಯ, ಮತ್ತೆ ಎಗ್ಗಿಲ್ಲದೇ ನಡೆದಿದೆ ವಹಿವಾಟು

ಎಚ್.ಎಸ್.ದಿನೇಶ್‌ಕುಮಾರ್
ಮೈಸೂರು: ಮೈಸೂರಿನಲ್ಲಿ ಮಿತಿ ಮೀರಿರುವ ಪ್ಲಾಸ್ಟಿಕ್ ಹಾವಳಿ ನಿಯಂತ್ರಿಸಿ ಲಕ್ಷಾಂತರ ದಂಡ ವಸೂಲಿ ಮಾಡಿದ್ದ ಹಿರಿಯ ಕೆಎಎಸ್ ಅಧಿಕಾರಿಯನ್ನು ವಾರದ ಹಿಂದೆ ವರ್ಗಗೊಳಿಸಲಾಗಿದ್ದು, ವ್ಯಾಪಾರಿಗಳ ಪ್ಲಾಸ್ಟಿಕ್ ಲಾಬಿ ಕೈವಾಡವಿರುವ ಚರ್ಚೆಗಳು ಪಾಲಿಕೆ ಅಂಗಳದಲ್ಲಿ ನಡೆದಿವೆ.
ಐದು ತಿಂಗಳ ಹಿಂದಿನ ಮಾತು. ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆಉಲ್ಲಿ ನಗರಪಾಲಿಕೆ ವ್ಯಾಪ್ತಿಯ ಸಂತೇಪೇಟೆ, ಶಿವರಾಂಪೇಟೆ ಮತ್ತಿತರ ಕಡೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ದಾಳಿ ಮಾಡಿದ್ದ ನಗರಪಾಲಿಕೆ ಅಧಿಕಾರಿಗಳು ಟನ್‌ಗಟ್ಟಲೇ ಪ್ಲಾಸ್ಟಿಕ್ ವಸ್ತುಗಳನ್ನು ವಶಕ್ಕೆ ಪಡೆದಿದ್ದರು. ಅಲ್ಲದೇ ಭಾರೀ ದಂಡ ವಿಧಿಸಿ ವ್ಯಾಪಾರಸ್ಥರಿಗೆ ಬಿಸಿಮುಟ್ಟಿಸಿದ್ದರು.
ಪ್ರತೀದಿನ ಒಂದಲ್ಲಾ ಒಂದು ಬಡಾವಣೆಗಳಲ್ಲಿ ಪ್ಲಾಸ್ಟಿಕ್ ವಶ ಕಾರ್ಯಚರಣೆ ನಡೆಸಲಾಗುತ್ತಿತ್ತು. ಇದರಿಂದಾಗಿ ಕದ್ದುಮುಚ್ಚಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರು ಲಕ್ಷಾಂತರ ರೂ. ನಷ್ಟ ಅನುಭವಿಸಿದರು. ಇದು ಸಹಜವಾಗಿ ನಗರಪಾಲಿಕೆ ಅಧಿಕಾರಿಗಳ ವಿರುದ್ಧ ಅವರನ್ನು ಕೆರಳಿಸಿತು.
ನಿಷೇಧಿತ ಪ್ಲಾಸಿಕ್ ವಸ್ತುಗಳ ಮಾರಾಟ ಮಳಿಗೆಯ ಮೇಲೆ ದಾಳಿ ನಡೆಸುವ ನೇತೃತ್ವವನ್ನು ಹಿರಿಯ ಕೆಎಎಸ್ ಅಧಿಕಾರಿ ಡಾ.ಎಂ.ಜೆ.ರೂಪ ಅವರು ವಹಿಸಿದ್ದರು. ಯಾವುದೇ ಲಾಬಿಗೆ ಮಣಿಯದೆ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಅವರ ಕೈಕೆಳಗಿನ ಸಿಬ್ಬಂದಿಯೇ ಹೇಳುತ್ತಾರೆ. ಹೀಗಾಗಿ ಅವರ ವಿರುದ್ಧ ಕೆಲಸ ಆರಂಭಿಸಿದ ಪ್ಲಾಸ್ಟಿಕ್ ವಸ್ತುಗಳ ಮಾರಾಟಗಾರರ ಲಾಬಿ, ಸ್ಥಳೀಯ ಜನಪ್ರತಿನಿಧಿಗಳ ಸಹಕಾರದೊಂದಿಗೆ ಅಧಿಕಾರಿಯ ವರ್ಗಾವಣೆಗೆ ಯತ್ನ ಆರಂಭಿಸಿತು.ಕೊನೆಗೂ ವ್ಯಾಪಾರಸ್ಥರ ಲಾಬಿಗೆ ಮಣಿದ ಸರ್ಕಾರ ರೂಪ ಅವರನ್ನು ಸ್ಥಳವನ್ನೂ ತೋರಿಸದೆ ವರ್ಗಾವಣೆ ಮಾಡಿದೆ ಎಂದು ಪಾಲಿಕೆಯ ಆವರಣದಲ್ಲಿ ಚರ್ಚೆಗಳು ನಡೆದಿವೆ. ಆದರೆ ಯಾವುದೇ ಅಧಿಕಾರಿ, ಸಿಬ್ಬಂದಿ ಬಹಿರಂಗವಾಗಿ ಮಾತನಾಡಲು ಹಿಂಜರಿಯುತ್ತಿದ್ದಾರೆ.

ನಿಂತ ಪ್ಲಾಸ್ಟಿಕ್ ದಾಳಿ!

ರೂಪ ಅವರು ಇದೀಗ ಅವರು ಕೆಎಟಿ ಯಲ್ಲಿ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾರೆ. ಹೀಗಾಗಿ ನಮಗೇಕಪ್ಪಾ ಬೇಡದ ಉಸಾಬರಿ ಎಂದು ನಗರಪಾಲಿಕೆ ಸಿಬ್ಬಂದಿ ಹಾಗೂ ಕಿರಿಯ ಅಧಿಕಾರಿಗಳು ಪ್ಲಾಸ್ಟಿಕ್ ವಶ ಕಾರ್ಯಚರಣೆಯನ್ನು ಕೈಬಿಟ್ಟಿದ್ದಾರೆ ಎನ್ನಲಾಗಿದೆ.
ಅದಕ್ಕೆ ಪೂರಕವೆಂಬಂತೆ. ಕಳೆದ ಒಂದು ತಿಂಗಳಿನಿಂದ ನಗರಪಾಲಿಕೆ ಅಧಿಕಾರಿಗಳು ಅಥವಾ ಸಿಬ್ಬಂದಿ ಪ್ಲಾಸ್ಟಿಕ್ ಮಾರಾಟಗಾರರ ಮಳಿಗೆಯತ್ತ ತಿರುಗಿಯೂ ನೋಡುತ್ತಿಲ್ಲ. ಹೀಗಾಗಿ ಶಿವರಾಂಪೇಟೆ, ಸಂತೇಪೇಟೆ, ಬಂಡೀಪಾಳ್ಯದ ಮಾರಾಟ ಮಳಿಗೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್, ತಟ್ಟೆ, ಲೋಟ, ಪ್ಲಾಸ್ಟಿಕ್ ಹಾಳೆಗಳು ಈಗ ಎಗ್ಗಿಲ್ಲದೆ ಮಾರಾಟವಾಗುತ್ತಿವೆ.
ಇದರ ಜೊತೆಗೆ ನಗರಪಾಲಿಕೆ ಅಧಿಕಾರಿಗಳ ಕಣ್ತಪ್ಪಿಸಿ ಕವರ್, ಲೋಟ, ಪ್ಲೇಟ್ ಹಾಗೂ ಇನ್ನಿತರ ಪ್ಲಾಸ್ಟಿಕ್ ವಸ್ತುಗಳನ್ನು ಕದ್ದುಮುಚ್ಚಿ ಮಾರಾಟ ಮಾಡಬೇಕು ಎಂದು ಹೇಳಿಕೊಂಡು ಹೋಟೆಲ್, ದಿನಸಿ ಮಾರಾಟ ಮಳಿಗೆಯವರಿಂದ ದುಪ್ಪಟ್ಟು ಹಣವನ್ನು ಪಡೆದು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ.
ಸರ್ಕಾರ ರೂಪಿಸುವ ಕಾಯ್ದೆಗಳ ಜಾರಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಇದೇ ವೇಳೆ ಲಾಬಿಗೆ ಮಣಿದು ಅಧಿಕಾರಿ ವರ್ಗಕ್ಕೆ ಕಿರುಕುಳ ನೀಡಿದಲ್ಲಿ ನಿಯಮ ಉಲ್ಲಂಘಿಸಿ ಹಣ ಮಾಡುವವರಿಗೆ ಹೇಳುವವರು, ಕೇಳುವವರು ಇಲ್ಲದಂತಾಗುತ್ತದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇಂತಹ ಲಾಬಿಯ ವಿರುದ್ಧ ಎಚ್ಚರಿಕೆಯಿಂದ ಇರಬೇಕು ಎಂಬುದು ಸಾರ್ವಜನಿಕರ ಅಭಿಪ್ರಾಯ.

ಲಾಬಿಗೆ ಮಣಿಯೋಲ್ಲ: ಪುನಾರಂಭಿಸುತ್ತೇವೆ
ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ ತಡೆಯುವ ಉದ್ದೇಶದಿಂದ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು. ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರ ಮೇಲೆ ಇದುವರೆವಿಗೂ ೨೪ ಲಕ್ಷ ರೂ. ದಂಡ ವಿಧಿಸಿ ವಸೂಲು ಮಾಡಲಾಗಿದೆ. ಇತ್ತೀಚೆಗೆ ಕಾರ್ಯಾಚರಣೆ ಕುಂಠಿತಗೊಂಡಿರುವುದು ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಮತ್ತೆ ಕಾರ್ಯಾಚರಣೆ ಆರಂಭಿಸಲಾಗುವುದು. ಯಾವುದೇ ಲಾಬಿಗೂ ಮಣಿಯುವ ಪ್ರಶ್ನೆೆಯೇ ಇಲ್ಲ.
-ಲಕ್ಷ್ಮೀಕಾಂತರೆಡ್ಡಿ, ನಗರಪಾಲಿಕೆ ಆಯುಕ್ತರು.

andolanait

Recent Posts

ಶಕ್ತಿ ಯೋಜನೆ ಟಿಕೆಟ್ ದುರ್ಬಳಕೆ : ಬಿಎಂಟಿಸಿ ಐವರು ಕಂಡಕ್ಟರ್‌ ಅಮಾನತು

ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…

17 mins ago

ಕೃಷಿ ಪದವಿ ಪಡೆಯಲು ಸುವರ್ಣ ಅವಕಾಶ : 50% ಮೀಸಲು, ಏಪ್ರಿಲ್ 29ಕ್ಕೆ ಪ್ರಾಯೋಗಿಕ ಪರೀಕ್ಷೆ

ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ…

29 mins ago

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…

1 hour ago

ಸಚಿವ ಸಂಪುಟ ಪುನರಾಚನೆಗೆ ಒತ್ತಡ ; ಕಾಂಗ್ರೆಸ್ ಶಾಸಕರು ಇಂದು ದೆಹಲಿಗೆ.

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…

1 hour ago

ಓದುಗರ ಪತ್ರ | ಕಿಕ್ಕೇರಿ ಕೆರೆಗೆ ಕೆಎಸ್‌ನ ಹೆಸರು ನಾಮಕರಣ ಶ್ಲಾಘನೀಯ

ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…

2 hours ago

ಓದುಗರ ಪತ್ರ | ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಿ

ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…

2 hours ago