ಮೈಸೂರು: ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಅಲ್ಪಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ಈ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಗುರುತಿಸಲಾಗಿತ್ತು. ಗುರುವಾರ ಕೇಂದ್ರ ಕಾರಾಗೃಹ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ೧೧ ಕೈದಿಗಳಿಗೆ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಕೆ.ಸಿ.ದಿವ್ಯಶ್ರೀ ಅವರು ಬಿಡುಗಡೆ ಪತ್ರ ನೀಡಿ, ಉತ್ತಮ ಜೀವನ ನಡೆಸಲು ಶುಭ ಹಾರೈಸಿದರು.
೭೫ನೇ ಸ್ವಾತಂತ್ರ್ಯ ದಿನಾಚರಣೆಯ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಎರಡನೇ ಹಂತದಲ್ಲಿ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಬಿಡುಗಡೆಯಾಗಿದ್ದು, ಮೊದಲ ಹಂತದಲ್ಲಿ ಅಂದರೆ ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆಯಂದು ೨೦ ಮಂದಿ ಕೈದಿಗಳನ್ನು ಬಿಡುಗಡೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಕೇಂದ್ರದ ಸಹಾಯಕ ಅಧೀಕ್ಷಕ ವಿಜಯ ಎಸ್. ರೋಡರ್, ಜೈಲರ್ಗಳಾದ ಕೆ.ಎಚ್.ವರದರಾಜು, ಎಂ.ಡಿ.ಧರಣೇಶ, ಅಮರ್ ಹುಲ್ಲೋಳಿ, ಗೀತಾ ಮಾಲಗಾರ ಇದ್ದರು.
ಬಿಡುಗಡೆಯಾದವರು: ಚಾಮರಾಜನಗರದ ಎಂ. ನಾಗರಾಜಪ್ಪ, ಹಾಸನದ ದೊರೆಸ್ವಾಮಿ, ಮಡಿಕೇರಿಯ ರಘು, ಬಿ.ಕೆ.ಜಗದೀಶ, ಹುಣಸೂರಿನ ಸ್ವಾಮಿ ಗೌಡ, ಚಿತ್ರದುರ್ಗದ ಮಹಾಂತೇಶ್, ಮದ್ದೂರಿನ ಲಂಕೇಶ, ಶ್ರೀರಂಗಪಟ್ಟಣದ ನಾಗರಾಜು, ಸೋಮವಾರಪೇಟೆಯ ಸಿ.ಟಿ.ಜೇಮ್ಸ್, ಮೈಸೂರಿನ ಶ್ರೀಕಂಠಾರಾಧ್ಯ, ತೆಂಜಿನ್ ಬಿಡುಗಡೆಯಾಗಿದ್ದಾರೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…