ಜಿಲ್ಲೆಗಳು

ಸನ್ನಡತೆ ಆಧಾರ : ಮೈಸೂರಿನ ಕಾರಾಗೃಹದಿಂದ 11 ಮಂದಿಗೆ ಬಿಡುಗಡೆ ಭಾಗ್ಯ

ಮೈಸೂರು: ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಅಲ್ಪಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ಈ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಗುರುತಿಸಲಾಗಿತ್ತು. ಗುರುವಾರ ಕೇಂದ್ರ ಕಾರಾಗೃಹ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ೧೧ ಕೈದಿಗಳಿಗೆ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಕೆ.ಸಿ.ದಿವ್ಯಶ್ರೀ ಅವರು ಬಿಡುಗಡೆ ಪತ್ರ ನೀಡಿ, ಉತ್ತಮ ಜೀವನ ನಡೆಸಲು ಶುಭ ಹಾರೈಸಿದರು.

೭೫ನೇ ಸ್ವಾತಂತ್ರ್ಯ ದಿನಾಚರಣೆಯ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಎರಡನೇ ಹಂತದಲ್ಲಿ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಬಿಡುಗಡೆಯಾಗಿದ್ದು, ಮೊದಲ ಹಂತದಲ್ಲಿ ಅಂದರೆ ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆಯಂದು ೨೦ ಮಂದಿ ಕೈದಿಗಳನ್ನು ಬಿಡುಗಡೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಕೇಂದ್ರದ ಸಹಾಯಕ ಅಧೀಕ್ಷಕ ವಿಜಯ ಎಸ್. ರೋಡರ್, ಜೈಲರ್‌ಗಳಾದ ಕೆ.ಎಚ್.ವರದರಾಜು, ಎಂ.ಡಿ.ಧರಣೇಶ, ಅಮರ್ ಹುಲ್ಲೋಳಿ, ಗೀತಾ ಮಾಲಗಾರ ಇದ್ದರು.

ಬಿಡುಗಡೆಯಾದವರು: ಚಾಮರಾಜನಗರದ ಎಂ. ನಾಗರಾಜಪ್ಪ, ಹಾಸನದ ದೊರೆಸ್ವಾಮಿ, ಮಡಿಕೇರಿಯ ರಘು, ಬಿ.ಕೆ.ಜಗದೀಶ, ಹುಣಸೂರಿನ ಸ್ವಾಮಿ ಗೌಡ, ಚಿತ್ರದುರ್ಗದ ಮಹಾಂತೇಶ್, ಮದ್ದೂರಿನ ಲಂಕೇಶ, ಶ್ರೀರಂಗಪಟ್ಟಣದ ನಾಗರಾಜು, ಸೋಮವಾರಪೇಟೆಯ ಸಿ.ಟಿ.ಜೇಮ್ಸ್, ಮೈಸೂರಿನ ಶ್ರೀಕಂಠಾರಾಧ್ಯ, ತೆಂಜಿನ್ ಬಿಡುಗಡೆಯಾಗಿದ್ದಾರೆ.

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

3 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

3 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

3 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

6 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

6 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

6 hours ago