ಮೈಸೂರು: ಗಣರಾಜ್ಯೋತ್ಸವದ ಪ್ರಯುಕ್ತ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಜೈಲು ಹಕ್ಕಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಅಲ್ಪಾವಧಿ ಶಿಕ್ಷೆಗೆ ಗುರಿಯಾಗಿ ಕಾರಾಗೃಹ ಶಿಕ್ಷೆ ಅನುಭವಿಸುತ್ತಿದ್ದ ಈ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆಗೆ ಗುರುತಿಸಲಾಗಿತ್ತು. ಗುರುವಾರ ಕೇಂದ್ರ ಕಾರಾಗೃಹ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ೧೧ ಕೈದಿಗಳಿಗೆ ಕಾರಾಗೃಹದ ಮುಖ್ಯ ಅಧೀಕ್ಷಕರಾದ ಕೆ.ಸಿ.ದಿವ್ಯಶ್ರೀ ಅವರು ಬಿಡುಗಡೆ ಪತ್ರ ನೀಡಿ, ಉತ್ತಮ ಜೀವನ ನಡೆಸಲು ಶುಭ ಹಾರೈಸಿದರು.
೭೫ನೇ ಸ್ವಾತಂತ್ರ್ಯ ದಿನಾಚರಣೆಯ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಎರಡನೇ ಹಂತದಲ್ಲಿ ಮೈಸೂರು ಕೇಂದ್ರ ಕಾರಾಗೃಹದಿಂದ ೧೧ ಮಂದಿ ಬಿಡುಗಡೆಯಾಗಿದ್ದು, ಮೊದಲ ಹಂತದಲ್ಲಿ ಅಂದರೆ ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆಯಂದು ೨೦ ಮಂದಿ ಕೈದಿಗಳನ್ನು ಬಿಡುಗಡೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಕೇಂದ್ರದ ಸಹಾಯಕ ಅಧೀಕ್ಷಕ ವಿಜಯ ಎಸ್. ರೋಡರ್, ಜೈಲರ್ಗಳಾದ ಕೆ.ಎಚ್.ವರದರಾಜು, ಎಂ.ಡಿ.ಧರಣೇಶ, ಅಮರ್ ಹುಲ್ಲೋಳಿ, ಗೀತಾ ಮಾಲಗಾರ ಇದ್ದರು.
ಬಿಡುಗಡೆಯಾದವರು: ಚಾಮರಾಜನಗರದ ಎಂ. ನಾಗರಾಜಪ್ಪ, ಹಾಸನದ ದೊರೆಸ್ವಾಮಿ, ಮಡಿಕೇರಿಯ ರಘು, ಬಿ.ಕೆ.ಜಗದೀಶ, ಹುಣಸೂರಿನ ಸ್ವಾಮಿ ಗೌಡ, ಚಿತ್ರದುರ್ಗದ ಮಹಾಂತೇಶ್, ಮದ್ದೂರಿನ ಲಂಕೇಶ, ಶ್ರೀರಂಗಪಟ್ಟಣದ ನಾಗರಾಜು, ಸೋಮವಾರಪೇಟೆಯ ಸಿ.ಟಿ.ಜೇಮ್ಸ್, ಮೈಸೂರಿನ ಶ್ರೀಕಂಠಾರಾಧ್ಯ, ತೆಂಜಿನ್ ಬಿಡುಗಡೆಯಾಗಿದ್ದಾರೆ.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…