ಜಿಲ್ಲೆಗಳು

ಮೈಸೂರು : ರಾಮಕೃಷ್ಣ ವಿದ್ಯಾ ಶಾಲೆಯಲ್ಲಿ ಇಂದು ಹಾಕಿ ಮಾಂತ್ರಿಕನ ಧ್ಯಾನ

ಮೈಸೂರು : ನಗರದ  ರಾಮಕೃಷ್ಣ ವಿದ್ಯಾ ಶಾಲೆಯಲ್ಲಿ ಇಂದು “ಮೀಟ್ ದಿ ಚಾಂಪಿಯನ್ ” ಸಂಭ್ರಮದ ಆಚರಣೆ  ಬೆಳಿಗ್ಗೆ  ಹಾಕಿ ಆಟಗಾರರಾದ ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥವಾಗಿ  ರಾಷ್ಟ್ರೀಯ ಕ್ರೀಡಾ ದಿನದ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆ

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಚಾಂಪಿಯನ್ ಕ್ರೀಡಾಪಟು ಮತ್ತು ಅಂತರರಾಷ್ಟ್ರೀಯ ಪ್ಯಾರಾ ಈಜುಗಾರರಾದ  ನಿರಂಜನ್ ಮುಕುಂದನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಭಾರತೀಯ ಕ್ರೀಡಾ ಪ್ರಾಧಿಕಾರದ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದ ಸಹಾಯಕ ನಿರ್ದೇಶಕರಾದ ಡಾ. ಮೋನಿಕಾ ಅವರು ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿಶೇಷ ಈಜು ಮೂಲಕ ಅತಿಥಿಗಳಿಗೆ ಸ್ವಾಗತ : 

ವಿಶೇಷ ಈಜು ಕೌಶಲ್ಯ

ವಿದ್ಯಾಶಾಲೆಯ ಈಜುಕೊಳದ ಬಳಿ ಆರಂಭವಾದ ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ವಿಶೇಷವಾದ ಈಜು ಕೌಶಲ್ಯಗಳನ್ನು ಪ್ರದರ್ಶಿಸಿ ಕವಾಯತು ಮಾಡಿ ಮುಖ್ಯ ಅತಿಥಿಗಳಿಗೆ ಸ್ವಾಗತ ಕೋರಿದರು. ಕೆಲವು ವಿದ್ಯಾರ್ಥಿಗಳನ್ನು ನಿರಂಜನ್ ಮುಕುಂದನ್ ಅವರನ್ನು ಟೇಬಲ್ ಟೆನಿಸ್ ಆಡಿ ಸಭಾ ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನೆ ಮಾಡಿದರು.

ನಂತರ ಶಾಲೆಯ ಸಭಾಂಗಣದ ಒಳಗೆ ನಡೆದ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ  ನಿರಂಜನ್ ಮುಕುಂದನ್ ಮಾತನಾಡಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ

ಸಮತೋಲನದ ಆಹಾರ, ಉನ್ನತವಾದ ಗುರಿಯನ್ನು ಕ್ರೀಡಾ ಕ್ಷೇತ್ರದಲ್ಲಿ ಇಟ್ಟುಕೊಳ್ಳುವ ಅಗತ್ಯ, ದಿನನಿತ್ಯದ ಸಾಧನೆ, ಪ್ರತಿಕೂಲ ಪರಿಸ್ಥಿತಿಯನ್ನು ಲೆಕ್ಕಿಸದೆ ಮುನ್ನುಗ್ಗುವ ಧೈರ್ಯದ ಮಹತ್ವವನ್ನು ಕುರಿತು ಅವರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರಣೆ ನೀಡಿದ ಅವರು ಕಷ್ಟ ಬಂದಾಗ ಕುಗ್ಗದೆ, ಧೈರ್ಯದಿಂದ ಪ್ರಯತ್ನಶೀಲರಾಗವುದರ ಮೂಲಕ ಜಯಶಾಲಿಯಾಗಬಹುದು ಎಂದು ವಿದ್ಯಾರ್ಥಿಗಳಿಗೆ ಯಶಸ್ಸಿನ ಗುಟ್ಟು ಹೇಳಿದರು

ಕಾರ್ಯಕ್ರಮದಲ್ಲಿನ ಗಣ್ಯರು

ರಸಪ್ರಶ್ನೆ  ವಿಜೇತರಿಗೆ ಒಲಂಪಿಕ್ ಜರ್ಸಿ ಬಹುಮಾನ :
ಪ್ರಧಾನಮಂತ್ರಿಯವರ ಸಂದೇಶವಿದ್ದ ವಿಡಿಯೋವನ್ನು ವಿದ್ಯಾರ್ಥಿಗಳಿಗಾಗಿ ಪ್ರದರ್ಶಿಸಲಾಯಿತು. ನಂತರ ಕ್ರೀಡೆಗೆ ಸಂಬಂಧಿಸಿದಂತೆ ನಡೆದ ಒಂದು ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತ ಐದು ವಿದ್ಯಾರ್ಥಿಗಳಿಗೆ ಒಲಂಪಿಕ್ ಜರ್ಸಿಯನ್ನು ಬಹುಮಾನವಾಗಿ ವಿತರಿಸಲಾಯಿತು. ಹಲವಾರು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಸ್ಪೂರ್ತಿದಾಯಕ ಉತ್ತರವನ್ನು ನೀಡುತ್ತಾ ಅವರು ಸಂವಾದವನ್ನು ನಡೆಸಿದರು.

ಸಂವಾದ ನಡೆಸುತ್ತಿರುವುದು

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ  ಸ್ವಾಮಿ ಮುಕ್ತಿದಾನಂದ ಜಿ, ವಿದ್ಯಾಶಾಲೆಯ ಮುಖ್ಯಸ್ಥರಾದ ಸ್ವಾಮಿ ಯುಕ್ತೇಶಾನಂದ ಜಿ , ಪ್ರಾಂಶುಪಾಲರಾದ ಶ್ರೀ ಎಸ್ ಬಾಲಾಜಿ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರದ ಉಪನಿರ್ದೇಶಕರಾದ ಡಾ. ಮೋನಿಕಾ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ವಿದ್ಯಾಶಾಲೆಯ  ದೈಹಿಕ ಶಿಕ್ಷಣ ನಿರ್ದೇಶಕರಾದ  ಡಿ.ಸುದರ್ಶನ್ ಮತ್ತು ಬಿ.ಆರ್.ರವಿ ಅವರು ಉಪಸ್ಥಿತರಿದ್ದರು. ಹಲವಾರು ಶಿಕ್ಷಕರು ಮತ್ತು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದು ವಿಶೇಷವಾಗಿತ್ತು.

andolanait

Recent Posts

ಸೋನ್ ಹಿಲ್ ಬಳಿಯ ಕಸದ ರಾಶಿ ತೆರವು ಕಾರ್ಯ ಶುರು

ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…

3 hours ago

ಗ್ಯಾಂಗ್ರಿನ್‌ಗೆ ಬೇಡ ಭಯ; ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಭಯ

ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…

3 hours ago

ನಂಜನಗೂಡಿಗೆ ಬಸ್ ಹತ್ತಿದರೆ ತಿ.ನರಸೀಪುರದ ಟಿಕೆಟ್!

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…

3 hours ago

ಕೋರ್ಟ್ ಮೆಟ್ಟಿಲೇರಿದ್ದ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ತೆರೆ

ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…

3 hours ago

ಸಿಎಂ ತವರಲ್ಲಿ ಮಾರ್ಚ್‌ನಲ್ಲಿ ಅಕ್ಕ ಕೆಫೆ ಶುರು

ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…

3 hours ago