ಮೈಸೂರು : ನಗರದ ರಾಮಕೃಷ್ಣ ವಿದ್ಯಾ ಶಾಲೆಯಲ್ಲಿ ಇಂದು “ಮೀಟ್ ದಿ ಚಾಂಪಿಯನ್ ” ಸಂಭ್ರಮದ ಆಚರಣೆ ಬೆಳಿಗ್ಗೆ ಹಾಕಿ ಆಟಗಾರರಾದ ಮೇಜರ್ ಧ್ಯಾನ್ ಚಂದ್ ಸ್ಮರಣಾರ್ಥವಾಗಿ ರಾಷ್ಟ್ರೀಯ ಕ್ರೀಡಾ ದಿನದ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಚಾಂಪಿಯನ್ ಕ್ರೀಡಾಪಟು ಮತ್ತು ಅಂತರರಾಷ್ಟ್ರೀಯ ಪ್ಯಾರಾ ಈಜುಗಾರರಾದ ನಿರಂಜನ್ ಮುಕುಂದನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಭಾರತೀಯ ಕ್ರೀಡಾ ಪ್ರಾಧಿಕಾರದ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ದ ಸಹಾಯಕ ನಿರ್ದೇಶಕರಾದ ಡಾ. ಮೋನಿಕಾ ಅವರು ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿಶೇಷ ಈಜು ಮೂಲಕ ಅತಿಥಿಗಳಿಗೆ ಸ್ವಾಗತ :
ವಿದ್ಯಾಶಾಲೆಯ ಈಜುಕೊಳದ ಬಳಿ ಆರಂಭವಾದ ಕಾರ್ಯಕ್ರಮದಲ್ಲಿ ಹಲವಾರು ವಿದ್ಯಾರ್ಥಿಗಳು ವಿಶೇಷವಾದ ಈಜು ಕೌಶಲ್ಯಗಳನ್ನು ಪ್ರದರ್ಶಿಸಿ ಕವಾಯತು ಮಾಡಿ ಮುಖ್ಯ ಅತಿಥಿಗಳಿಗೆ ಸ್ವಾಗತ ಕೋರಿದರು. ಕೆಲವು ವಿದ್ಯಾರ್ಥಿಗಳನ್ನು ನಿರಂಜನ್ ಮುಕುಂದನ್ ಅವರನ್ನು ಟೇಬಲ್ ಟೆನಿಸ್ ಆಡಿ ಸಭಾ ಕಾರ್ಯಕ್ರಮದ ಸಾಂಕೇತಿಕ ಉದ್ಘಾಟನೆ ಮಾಡಿದರು.
ನಂತರ ಶಾಲೆಯ ಸಭಾಂಗಣದ ಒಳಗೆ ನಡೆದ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ನಿರಂಜನ್ ಮುಕುಂದನ್ ಮಾತನಾಡಿದರು.
ಸಮತೋಲನದ ಆಹಾರ, ಉನ್ನತವಾದ ಗುರಿಯನ್ನು ಕ್ರೀಡಾ ಕ್ಷೇತ್ರದಲ್ಲಿ ಇಟ್ಟುಕೊಳ್ಳುವ ಅಗತ್ಯ, ದಿನನಿತ್ಯದ ಸಾಧನೆ, ಪ್ರತಿಕೂಲ ಪರಿಸ್ಥಿತಿಯನ್ನು ಲೆಕ್ಕಿಸದೆ ಮುನ್ನುಗ್ಗುವ ಧೈರ್ಯದ ಮಹತ್ವವನ್ನು ಕುರಿತು ಅವರು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರಣೆ ನೀಡಿದ ಅವರು ಕಷ್ಟ ಬಂದಾಗ ಕುಗ್ಗದೆ, ಧೈರ್ಯದಿಂದ ಪ್ರಯತ್ನಶೀಲರಾಗವುದರ ಮೂಲಕ ಜಯಶಾಲಿಯಾಗಬಹುದು ಎಂದು ವಿದ್ಯಾರ್ಥಿಗಳಿಗೆ ಯಶಸ್ಸಿನ ಗುಟ್ಟು ಹೇಳಿದರು
ರಸಪ್ರಶ್ನೆ ವಿಜೇತರಿಗೆ ಒಲಂಪಿಕ್ ಜರ್ಸಿ ಬಹುಮಾನ :
ಪ್ರಧಾನಮಂತ್ರಿಯವರ ಸಂದೇಶವಿದ್ದ ವಿಡಿಯೋವನ್ನು ವಿದ್ಯಾರ್ಥಿಗಳಿಗಾಗಿ ಪ್ರದರ್ಶಿಸಲಾಯಿತು. ನಂತರ ಕ್ರೀಡೆಗೆ ಸಂಬಂಧಿಸಿದಂತೆ ನಡೆದ ಒಂದು ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತ ಐದು ವಿದ್ಯಾರ್ಥಿಗಳಿಗೆ ಒಲಂಪಿಕ್ ಜರ್ಸಿಯನ್ನು ಬಹುಮಾನವಾಗಿ ವಿತರಿಸಲಾಯಿತು. ಹಲವಾರು ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಸ್ಪೂರ್ತಿದಾಯಕ ಉತ್ತರವನ್ನು ನೀಡುತ್ತಾ ಅವರು ಸಂವಾದವನ್ನು ನಡೆಸಿದರು.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದ ಜಿ, ವಿದ್ಯಾಶಾಲೆಯ ಮುಖ್ಯಸ್ಥರಾದ ಸ್ವಾಮಿ ಯುಕ್ತೇಶಾನಂದ ಜಿ , ಪ್ರಾಂಶುಪಾಲರಾದ ಶ್ರೀ ಎಸ್ ಬಾಲಾಜಿ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರದ ಉಪನಿರ್ದೇಶಕರಾದ ಡಾ. ಮೋನಿಕಾ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ವಿದ್ಯಾಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕರಾದ ಡಿ.ಸುದರ್ಶನ್ ಮತ್ತು ಬಿ.ಆರ್.ರವಿ ಅವರು ಉಪಸ್ಥಿತರಿದ್ದರು. ಹಲವಾರು ಶಿಕ್ಷಕರು ಮತ್ತು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದು ವಿಶೇಷವಾಗಿತ್ತು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…