ಜಿಲ್ಲೆಗಳು

ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯ : ದೀಪದ ವ್ಯವಸ್ಥೆ, ಕೆಲಸದ ಸಮಯ ವಿಸ್ತರಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಪ್ರಕಾಶಮಾನ ದೀಪದ ವ್ಯವಸ್ಥೆ ಮತ್ತು ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ.

ನೈರುತ್ಯ ರೈಲ್ವೆಯ ಕೆ ಆರ್ ಎಸ್ ರಸ್ತೆಯಲ್ಲಿರುವ ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯವನ್ನು ಇದೇ ತಿಂಗಳ 26ರಿಂದ ಅಕ್ಟೋಬರ್ 5ರವರೆಗೆ ನಡೆಯುವ ದಸರಾ ಉತ್ಸವಗಳ ಸಮಯದಲ್ಲಿ ಪ್ರಕಾಶಮಾನ ದೀಪದ ವ್ಯವಸ್ಥೆಯೊಂದಿಗೆ ಬೆಳಗಿಸುವುದರ ಜೊತೆಗೆ ಕೆಲಸದ ಸಮಯವನ್ನು ಎರಡು ಗಂಟೆಗಳವರೆಗೆ ವಿಸ್ತರಿಸಲಾಗಿದೆ.

ವಸ್ತು ಸಂಗ್ರಹಾಲಯದ ವಿoಟೇಜ್ ಸ್ಟೀಮ್ ಲೋಕೋಮೋಟಿವೆಟ್, ಕೋಚ್ಗಳು, ವ್ಯಾಗನ್ಗಳು,ಆಟಿಕೆ, ರೈಲು ಕೈಯಿಂದ ಚಾರಿತ ಕ್ರೇನ್, ರೈಲ್ ಬಸ್ ಮತ್ತು ಸ್ಟೀಮ್ ಪೈರ್ ಪಂಪ್ ನಂತಹ ಹೊರಾಂಗಣ ಪ್ರದರ್ಶನಗಳ ಅದ್ಭುತ ಪ್ರಕಾಶಿತ ನೋಟವನ್ನು ಪ್ರವಾಸಿಗರು ಈ ಬಾರಿ ನೋಡಬಹುದಾಗಿದೆ.

ರೈಲ್ವೆ ವಸ್ತು ಸಂಗ್ರಹಾಲಯವು ರಾಜಾ ದಿನಗಳಾದ ಇದೆ ತಿಂಗಳ 27 ಮತ್ತು ಅಕ್ಟೋಬರ್ 4ರಂದು ದಸರಾ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ತೆರೆದಿರುತ್ತದೆ.

ನಿಗದಿತ ಶುಲ್ಕ ಪಾವತಿಯೊಂದಿಗೆ ಎಸ್ ಎಲ್ ಆರ್, ಡಿಎಸ್ಎಲ್ಆರ್ ಕ್ಯಾಮೆರಾ ಗಳನ್ನು ಛಾಯಾಗ್ರಹಣಕ್ಕೆ ಬಳಸುವ ಅವಕಾಶವಿರುತ್ತದೆ. ಇದರ ಜೊತೆಗೆ ರೈಲು ವಸ್ತು ಸಂಗ್ರಹಾಲಯದ ಆವರಣದೊಳಗೆ ತಿಂಡಿ ತಿನಿಸುಗಳನ್ನು ನಿಷೇಧಿಸಲಾಗಿದೆ ಎಂದು ಮೈಸೂರು ರೈಲು ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ಅವರು ತಿಳಿಸಿದ್ದಾರೆ.

andolanait

Recent Posts

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

2 mins ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

15 mins ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

25 mins ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

38 mins ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

45 mins ago

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…

2 hours ago