ಜಿಲ್ಲೆಗಳು

ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯ : ದೀಪದ ವ್ಯವಸ್ಥೆ, ಕೆಲಸದ ಸಮಯ ವಿಸ್ತರಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಪ್ರಕಾಶಮಾನ ದೀಪದ ವ್ಯವಸ್ಥೆ ಮತ್ತು ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ.

ನೈರುತ್ಯ ರೈಲ್ವೆಯ ಕೆ ಆರ್ ಎಸ್ ರಸ್ತೆಯಲ್ಲಿರುವ ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯವನ್ನು ಇದೇ ತಿಂಗಳ 26ರಿಂದ ಅಕ್ಟೋಬರ್ 5ರವರೆಗೆ ನಡೆಯುವ ದಸರಾ ಉತ್ಸವಗಳ ಸಮಯದಲ್ಲಿ ಪ್ರಕಾಶಮಾನ ದೀಪದ ವ್ಯವಸ್ಥೆಯೊಂದಿಗೆ ಬೆಳಗಿಸುವುದರ ಜೊತೆಗೆ ಕೆಲಸದ ಸಮಯವನ್ನು ಎರಡು ಗಂಟೆಗಳವರೆಗೆ ವಿಸ್ತರಿಸಲಾಗಿದೆ.

ವಸ್ತು ಸಂಗ್ರಹಾಲಯದ ವಿoಟೇಜ್ ಸ್ಟೀಮ್ ಲೋಕೋಮೋಟಿವೆಟ್, ಕೋಚ್ಗಳು, ವ್ಯಾಗನ್ಗಳು,ಆಟಿಕೆ, ರೈಲು ಕೈಯಿಂದ ಚಾರಿತ ಕ್ರೇನ್, ರೈಲ್ ಬಸ್ ಮತ್ತು ಸ್ಟೀಮ್ ಪೈರ್ ಪಂಪ್ ನಂತಹ ಹೊರಾಂಗಣ ಪ್ರದರ್ಶನಗಳ ಅದ್ಭುತ ಪ್ರಕಾಶಿತ ನೋಟವನ್ನು ಪ್ರವಾಸಿಗರು ಈ ಬಾರಿ ನೋಡಬಹುದಾಗಿದೆ.

ರೈಲ್ವೆ ವಸ್ತು ಸಂಗ್ರಹಾಲಯವು ರಾಜಾ ದಿನಗಳಾದ ಇದೆ ತಿಂಗಳ 27 ಮತ್ತು ಅಕ್ಟೋಬರ್ 4ರಂದು ದಸರಾ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ತೆರೆದಿರುತ್ತದೆ.

ನಿಗದಿತ ಶುಲ್ಕ ಪಾವತಿಯೊಂದಿಗೆ ಎಸ್ ಎಲ್ ಆರ್, ಡಿಎಸ್ಎಲ್ಆರ್ ಕ್ಯಾಮೆರಾ ಗಳನ್ನು ಛಾಯಾಗ್ರಹಣಕ್ಕೆ ಬಳಸುವ ಅವಕಾಶವಿರುತ್ತದೆ. ಇದರ ಜೊತೆಗೆ ರೈಲು ವಸ್ತು ಸಂಗ್ರಹಾಲಯದ ಆವರಣದೊಳಗೆ ತಿಂಡಿ ತಿನಿಸುಗಳನ್ನು ನಿಷೇಧಿಸಲಾಗಿದೆ ಎಂದು ಮೈಸೂರು ರೈಲು ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ಅವರು ತಿಳಿಸಿದ್ದಾರೆ.

andolanait

Recent Posts

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

2 hours ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

2 hours ago

ಒಂದು ಹಸಿ ಅಸಹ್ಯ ಹಾಡಿನ ಕುರಿತು ಇಬ್ಬರು ಬರಹಗಾರ್ತಿಯರು

ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…

2 hours ago

ಕೆಟ್ಟ ಯುದ್ಧವೊಂದರ ಕೆಲವು ಒಳ್ಳೆಯ ಅಡ್ಡ ಪರಿಣಾಮಗಳು

ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…

2 hours ago

ಮಾನವ-ವನ್ಯಪ್ರಾಣಿ ಸಂಘರ್ಷ ನಿವಾರಣೆಗೆ ಕಾರ್ಯತಂತ್ರ

ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…

2 hours ago