ಜಿಲ್ಲೆಗಳು

ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯ : ದೀಪದ ವ್ಯವಸ್ಥೆ, ಕೆಲಸದ ಸಮಯ ವಿಸ್ತರಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಪ್ರಕಾಶಮಾನ ದೀಪದ ವ್ಯವಸ್ಥೆ ಮತ್ತು ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ.

ನೈರುತ್ಯ ರೈಲ್ವೆಯ ಕೆ ಆರ್ ಎಸ್ ರಸ್ತೆಯಲ್ಲಿರುವ ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯವನ್ನು ಇದೇ ತಿಂಗಳ 26ರಿಂದ ಅಕ್ಟೋಬರ್ 5ರವರೆಗೆ ನಡೆಯುವ ದಸರಾ ಉತ್ಸವಗಳ ಸಮಯದಲ್ಲಿ ಪ್ರಕಾಶಮಾನ ದೀಪದ ವ್ಯವಸ್ಥೆಯೊಂದಿಗೆ ಬೆಳಗಿಸುವುದರ ಜೊತೆಗೆ ಕೆಲಸದ ಸಮಯವನ್ನು ಎರಡು ಗಂಟೆಗಳವರೆಗೆ ವಿಸ್ತರಿಸಲಾಗಿದೆ.

ವಸ್ತು ಸಂಗ್ರಹಾಲಯದ ವಿoಟೇಜ್ ಸ್ಟೀಮ್ ಲೋಕೋಮೋಟಿವೆಟ್, ಕೋಚ್ಗಳು, ವ್ಯಾಗನ್ಗಳು,ಆಟಿಕೆ, ರೈಲು ಕೈಯಿಂದ ಚಾರಿತ ಕ್ರೇನ್, ರೈಲ್ ಬಸ್ ಮತ್ತು ಸ್ಟೀಮ್ ಪೈರ್ ಪಂಪ್ ನಂತಹ ಹೊರಾಂಗಣ ಪ್ರದರ್ಶನಗಳ ಅದ್ಭುತ ಪ್ರಕಾಶಿತ ನೋಟವನ್ನು ಪ್ರವಾಸಿಗರು ಈ ಬಾರಿ ನೋಡಬಹುದಾಗಿದೆ.

ರೈಲ್ವೆ ವಸ್ತು ಸಂಗ್ರಹಾಲಯವು ರಾಜಾ ದಿನಗಳಾದ ಇದೆ ತಿಂಗಳ 27 ಮತ್ತು ಅಕ್ಟೋಬರ್ 4ರಂದು ದಸರಾ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ತೆರೆದಿರುತ್ತದೆ.

ನಿಗದಿತ ಶುಲ್ಕ ಪಾವತಿಯೊಂದಿಗೆ ಎಸ್ ಎಲ್ ಆರ್, ಡಿಎಸ್ಎಲ್ಆರ್ ಕ್ಯಾಮೆರಾ ಗಳನ್ನು ಛಾಯಾಗ್ರಹಣಕ್ಕೆ ಬಳಸುವ ಅವಕಾಶವಿರುತ್ತದೆ. ಇದರ ಜೊತೆಗೆ ರೈಲು ವಸ್ತು ಸಂಗ್ರಹಾಲಯದ ಆವರಣದೊಳಗೆ ತಿಂಡಿ ತಿನಿಸುಗಳನ್ನು ನಿಷೇಧಿಸಲಾಗಿದೆ ಎಂದು ಮೈಸೂರು ರೈಲು ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ಅವರು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಸೋಲಾರ್ ಕೃಷಿ ಪಂಪ್ ಸೆಟ್ ಸಬ್ಸಿಡಿ ಸದ್ಬಳಕೆಯಾಗಲಿ

ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…

2 mins ago

ಕಾಡುಪ್ರಾಣಿಗಳಿಗೆ ಪ್ರತಿನಿತ್ಯ ಒಂದು ಹಸು ಬಲಿ!

ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…

28 mins ago

ಇದ್ದೂ ಇಲ್ಲದಂತಿರುವ ಟರ್ಷಿಯರಿ ಕ್ಯಾನ್ಸರ್‌ ಕೇರ್‌

ರಾಜ್ಯ ಸರ್ಕಾರದಿಂದ ಅನುದಾನ ವಿಳಂಬ; ಚಿಕಿತ್ಸೆಗಾಗಿ ಬೆಂಗಳೂರು, ಮೈಸೂರಿನ ಆಸ್ಪತ್ರೆಗೆ ಅಲೆಯುತ್ತಿರುವ ರೋಗಿಗಳು ಮಂಡ್ಯ: ಕ್ಯಾನ್ಸರ್ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ…

60 mins ago

ಸಿಎಂಗೆ ವಿದ್ಯಾರ್ಥಿಗಳು ಪತ್ರ ಬರೆದ ಪ್ರಕರಣ: ಪಚ್ಚೆದೊಡ್ಡಿ ಸರ್ಕಾರಿ ಶಾಲೆಗೆ ಬಿಇಒ ಭೇಟಿ

ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್‌ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…

3 hours ago

ಕೋಟೆ ಪುರಸಭೆ ಪೌರಕಾರ್ಮಿಕರು, ನೌಕರರಿಗೆ ೫ ತಿಂಗಳಿಂದ ಸಂಬಳವಿಲ್ಲ

ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…

3 hours ago

ಕೈಬೀಸಿ ಕರೆಯುತ್ತಿದೆ ‘ಪ್ರಸಾರಾಂಗ ಪುಸ್ತಕೋತ್ಸವ’

ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…

3 hours ago