ಜಿಲ್ಲೆಗಳು

ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯ : ದೀಪದ ವ್ಯವಸ್ಥೆ, ಕೆಲಸದ ಸಮಯ ವಿಸ್ತರಣೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022ರ ಅಂಗವಾಗಿ ಪ್ರಕಾಶಮಾನ ದೀಪದ ವ್ಯವಸ್ಥೆ ಮತ್ತು ಕೆಲಸದ ಸಮಯವನ್ನು ವಿಸ್ತರಣೆ ಮಾಡಲಾಗಿದೆ.

ನೈರುತ್ಯ ರೈಲ್ವೆಯ ಕೆ ಆರ್ ಎಸ್ ರಸ್ತೆಯಲ್ಲಿರುವ ಮೈಸೂರು ರೈಲ್ವೆ ವಸ್ತು ಸಂಗ್ರಹಾಲಯವನ್ನು ಇದೇ ತಿಂಗಳ 26ರಿಂದ ಅಕ್ಟೋಬರ್ 5ರವರೆಗೆ ನಡೆಯುವ ದಸರಾ ಉತ್ಸವಗಳ ಸಮಯದಲ್ಲಿ ಪ್ರಕಾಶಮಾನ ದೀಪದ ವ್ಯವಸ್ಥೆಯೊಂದಿಗೆ ಬೆಳಗಿಸುವುದರ ಜೊತೆಗೆ ಕೆಲಸದ ಸಮಯವನ್ನು ಎರಡು ಗಂಟೆಗಳವರೆಗೆ ವಿಸ್ತರಿಸಲಾಗಿದೆ.

ವಸ್ತು ಸಂಗ್ರಹಾಲಯದ ವಿoಟೇಜ್ ಸ್ಟೀಮ್ ಲೋಕೋಮೋಟಿವೆಟ್, ಕೋಚ್ಗಳು, ವ್ಯಾಗನ್ಗಳು,ಆಟಿಕೆ, ರೈಲು ಕೈಯಿಂದ ಚಾರಿತ ಕ್ರೇನ್, ರೈಲ್ ಬಸ್ ಮತ್ತು ಸ್ಟೀಮ್ ಪೈರ್ ಪಂಪ್ ನಂತಹ ಹೊರಾಂಗಣ ಪ್ರದರ್ಶನಗಳ ಅದ್ಭುತ ಪ್ರಕಾಶಿತ ನೋಟವನ್ನು ಪ್ರವಾಸಿಗರು ಈ ಬಾರಿ ನೋಡಬಹುದಾಗಿದೆ.

ರೈಲ್ವೆ ವಸ್ತು ಸಂಗ್ರಹಾಲಯವು ರಾಜಾ ದಿನಗಳಾದ ಇದೆ ತಿಂಗಳ 27 ಮತ್ತು ಅಕ್ಟೋಬರ್ 4ರಂದು ದಸರಾ ಸಂದರ್ಭದಲ್ಲಿ ಸಾರ್ವಜನಿಕರಿಗಾಗಿ ತೆರೆದಿರುತ್ತದೆ.

ನಿಗದಿತ ಶುಲ್ಕ ಪಾವತಿಯೊಂದಿಗೆ ಎಸ್ ಎಲ್ ಆರ್, ಡಿಎಸ್ಎಲ್ಆರ್ ಕ್ಯಾಮೆರಾ ಗಳನ್ನು ಛಾಯಾಗ್ರಹಣಕ್ಕೆ ಬಳಸುವ ಅವಕಾಶವಿರುತ್ತದೆ. ಇದರ ಜೊತೆಗೆ ರೈಲು ವಸ್ತು ಸಂಗ್ರಹಾಲಯದ ಆವರಣದೊಳಗೆ ತಿಂಡಿ ತಿನಿಸುಗಳನ್ನು ನಿಷೇಧಿಸಲಾಗಿದೆ ಎಂದು ಮೈಸೂರು ರೈಲು ವಿಭಾಗದ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ್ ಕನಮಡಿ ಅವರು ತಿಳಿಸಿದ್ದಾರೆ.

andolanait

Recent Posts

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

22 mins ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

30 mins ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

36 mins ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

1 hour ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

10 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

10 hours ago