ಜಿಲ್ಲೆಗಳು

ಮೈಸೂರು ರೈಲ್ವೆ ನಿಲ್ದಾಣಕ್ಕೆ ಡಿ. ದೇವರಾಜ ಅರಸು ಹೆಸರಿಡಲು ಮನವಿ

ಮೈಸೂರು :  ಮೈಸೂರು ರೈಲ್ವೆ ನಿಲ್ದಾಣಕ್ಕೆ ಮಾಜಿ ಸಿಎಂ ಡಿ. ದೇವರಾಜ ಅರಸು ಅವರ ಹೆಸರನ್ನು ನಾಮಕರಣ ಮಾಡಲು ಮನವಿ. ಮೈಸೂರಿನ ಡಿ.ದೇವರಾಜ ಅರಸು ಪ್ರತಿಮೆ ಪ್ರತಿಷ್ಠಾನ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಲಾಯಿತು.
ಡಿ. ದೇವರಾಜ ಅರಸು ರವರು ಮೈಸೂರು ರಾಜ್ಯ ೧೯೭೩ ನವೆಂಬರ್ ೧ ರಂದು ಕರ್ನಾಟಕ ಎಂದು ಮರುನಾಮಕರಣಗೊಂಡ ಅವದಿಯಲ್ಲಿ ಮುಖ್ಯಮಂತ್ರಿಯಾಗಿದ್ದರು. ದಿವಂಗತ ದೇವರಾಜು ಅರಸು ಅವರ ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು. ಗೇಣಿ ಶಾಸನ, ಹಾವನೂರು ಆಯೋಗದಂತಹ ಪ್ರಮುಖ ನಿರ್ಧಾರಗಳನ್ನು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ತೆಗೆದುಕೊಂಡ ಹಿನ್ನೆಲೆಯಲ್ಲಿ ಅದರ ಪ್ರತಿಫಲ ಇಂದಿನ ಪೀಳಿಗೆಗೆ ಆಗುತ್ತಿದೆ. ಗೇಣಿ ಹೋರಾಟದ ಅನುಷ್ಠಾನ ಆಗದಿದ್ದರೆ, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಾವನೂರು ಆಯೋಗ ರಚಿಸದಿದ್ದರೆ ಈವರೆವಿಗೂ ಬಹುಸಂಖ್ಯಾತರಿಗೆ ನ್ಯಾಯ ಸಿಗುತ್ತಿರಲಿಲ್ಲ. ಆದರೆ ದೇವರಾಜ ಅರಸು ಅವರು ತಮ್ಮ ಕಟು ನಿರ್ಧಾರದಿಂದ ಮುಂದಿನ ಪೀಳಿಗೆಯ ಬದುಕಿನ ದೂರದೃಷ್ಠಿಯಿಂದ ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟಿದ್ದರು.
ದೇವರಾಜ್ ಅರಸ್ (೨೦ ಆಗಸ್ಟ್ ೧೯೧೫ – ೧೮ ಮೇ ೧೯೮೨) ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಅವರು ದಕ್ಷಿಣ ಭಾರತದ ರಾಜ್ಯವಾದ ಕರ್ನಾಟಕದ ೮ ನೇ ಮುಖ್ಯಮಂತ್ರಿಯಾಗಿ (೧೯೭೨-೭೭, ೧೯೭೮-೮೦) ಎರಡು ಅವಧಿಗೆ ಸೇವೆ ಸಲ್ಲಿಸಿದರು.
೧೯೫೨ರಲ್ಲಿ ಸ್ವಾತಂತ್ರ್ಯ ಪಡೆದ ನಂತರ ದೇಶದಲ್ಲಿ ನಡೆದ ಮೊದಲ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ದೇವರಾಜ ಅರಸು ರಾಜಕೀಯ ಪ್ರವೇಶಿಸಿದರು. ಈ ಸಮಯದಲ್ಲಿ, ಮಹಾರಾಜರು ಇನ್ನೂ ಮೈಸೂರಿನಲ್ಲಿ ರಾಜ್ಯ ಮುಖ್ಯಸ್ಥರಾಗಿದ್ದರು (೧೯೫೬ ರವರೆಗೆ), ರಾಜ್ಯವು ಸ್ವಾತಂತ್ರ್ಯದ ಮೊದಲು ಅದೇ ಗಡಿಗಳನ್ನು ಉಳಿಸಿಕೊಂಡಿತು ಮತ್ತು ಗ್ರಾಮ ಸಮುದಾಯಗಳೊಂದಿಗೆ ಶತಮಾನಗಳ ಸಂಬಂಧದಿಂದಾಗಿ ಅರಸು ಸಮುದಾಯವು ಗ್ರಾಮಾಂತರದಲ್ಲಿ ಬೇರೂರಿದೆ.
ದೇವರಾಜ್ ಅರಸ್ ಅವರು ರಾಜ್ಯ ಶಾಸಕಾಂಗಕ್ಕೆ ಸುಲಭವಾಗಿ ಸ್ಥಾನವನ್ನು ಪಡೆದರು ಮತ್ತು ೧೦ ವರ್ಷಗಳ ಕಾಲ (ಎರಡು ಸತತ ಅವಧಿ) ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು ಜೊತೆಗೆ  ದೇವರಾಜ್ ಅರಸು ಅವರ ಮಹತ್ವದ ನಿರ್ಧಾರಗಳಾದ ಡಿ. ದೇವರಾಜ್ ಅರಸ್ ಅವರು ಕರ್ನಾಟಕದ ಶ್ರೇಷ್ಠ ಸಮಾಜ ಸುಧಾರಕರು ಎಂದು ಪ್ರಸಿದ್ಧರಾಗಿದ್ದಾರೆ. ಅವರು ಹಲವಾರು ಪ್ರಮುಖ ಬದಲಾವಣೆಗಳನ್ನು ಮಾಡಿದರು, ಅದು ಕೇವಲ ಪರಿಹಾರವನ್ನು ತಂದಿತು, ಆದರೆ ಕರ್ನಾಟಕದ ಜನರಿಗೆ ಘನತೆಯ ಪ್ರಜ್ಞೆಯನ್ನು ಪುನಃಸ್ಥಾಪಿಸಿತು. ಉರ್ಸ್ ತೆಗೆದುಕೊಂಡ ಹಲವಾರು ನಿರ್ಧಾರಗಳು ಅಪನಂಬಿಕೆ ಮತ್ತು ಸಮಾಜದ ಸದಸ್ಯರು ಮತ್ತು ಅವರ ಸ್ವಂತ ಪಕ್ಷದ ಸದಸ್ಯರು ಮತ್ತು ವಿರೋಧ ಪಕ್ಷದವರಿಂದ ಬಲವಾದ ವಿರೋಧವನ್ನು ಎದುರಿಸಿದವು.
ಅವರ ಭೂಸುಧಾರಣೆಗಳು ರಾಜ್ಯದಾದ್ಯಂತ ಭೂ ಹಂಚಿಕೆಯನ್ನು ಸಮೀಕರಿಸುವಲ್ಲಿ ಮೊದಲ ಹೆಜ್ಜೆಯಾಗಿತ್ತು. ವಲಸೆ ಕಾರ್ಮಿಕರಿಗೆ ಆಶ್ರಯ, ಗ್ರಾಮೀಣ ಸಾಲ ಮನ್ನಾ ಮತ್ತು ರಾಜ್ಯದಾದ್ಯಂತ ಪ್ರತಿ ಮನೆಗೆ ವಿದ್ಯುತ್ ರಾಜ್ಯದ ಇತರ ಕೆಲವು ಸುಧಾರಣೆಗಳು.
ದೇವರಾಜ್ ಅರಸ್ ಅವರು ಮಾಡಿದ ಪ್ರಮುಖ ಬದಲಾವಣೆಯು ಬೆಂಗಳೂರಿನ ಭೂದೃಶ್ಯವನ್ನು ಬದಲಾಯಿಸಿದೆ. ಎಲೆಕ್ಟ್ರಾನಿಕ್ ಸಿಟಿಯ ಆರಂಭಿಕ ಯೋಜನೆಗಳನ್ನು ಅವರ ಅಧಿಕಾರಾವಧಿಯಲ್ಲಿ ರಚಿಸಲಾಯಿತು. ಯೋಜನೆಗಳು ಸಂದೇಹ ಮತ್ತು ಸ್ಪಷ್ಟ ವಿರೋಧವನ್ನು ಎದುರಿಸಿದರೂ, ದೇವರಾಜ್ ಅರಸ್ ಯೋಜನೆಗಳನ್ನು ನಂಬಿ ಅವುಗಳನ್ನು ಅನುಮೋದಿಸಿದರು.
ಡಿ.ದೇವರಾಜ ಅರಸರು ರಾಜ್ಯ ಕಂಡ ಶ್ರೇಷ್ಠ ಸಮಾಜ ಸುಧಾರಕರಲ್ಲಿ ಒಬ್ಬರು. ಅವರ ನೇತೃತ್ವದ ಭೂಸುಧಾರಣೆಗಳು, ಅದರಲ್ಲಿ ಭೂಮಿಯನ್ನು ಉಳುವವನೇ ಮಾಲೀಕನಾಗುವುದು ಮಾದರಿಯಾಗಿದೆ. ಇದು ಶ್ರೀಮಂತರು ಮತ್ತು ಬಡವರ ನಡುವಿನ ಕಂದಕವನ್ನು ಕಡಿಮೆ ಮಾಡಿದೆ, ಸಾಮಾಜಿಕ ಅಸಮಾನತೆಯನ್ನು ಹೋಗಲಾಡಿಸಿದೆ.
ಇದರ ಜೊತೆಗೆ ಮೈಸೂರು ದಸರಾ ಹಬ್ಬವನ್ನು ನಾಡಹಬ್ಬವೆಂದು ಅಧಿಕೃತವಾಗಿ ಘೋಷಣೆ ಮಾಡಿದ ಕೀರ್ತಿ ದಿವಂಗತ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಇಷ್ಟೆಲ್ಲಾ ರಾಜಕೀಯ ಮತ್ತು ಸಾಮಾಜಿಕ ಬದ್ಧತೆಯುಳ್ಳ ಆದರ್ಶ ವ್ಯಕ್ತಿಯಾದ ಮಾಜಿ ಮುಖ್ಯಮಂತ್ರಿಗಳು ದಿ. ಡಿ. ದೇವರಾಜ ಅರಸು ಅವರನ್ನು ನಾವೆಲ್ಲರು ಸ್ಮರಸಿಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ಮತ್ತು ಸಾಂಸ್ಕೃತಿಕ ನಗರಿ ಮೈಸೂರು ಜನತೆ ಈ ಮಹಾನ್ ವ್ಯಕ್ತಿಯ ಹೆಸರು ಸ್ಥಿರಸ್ಥಾಯಿಯಾಗಿ ಉಳಿಯುವ ನಿಟ್ಟಿನಲ್ಲಿ ಮೈಸೂರು ರೈಲ್ವೆ ನಿಲ್ದಾಣಕ್ಕೆ ಅವರ ಹೆಸರನ್ನು ನಾಮಕರಣ ಮಾಡುವುದರ ಮೂಲಕ ಅವರಿಗೆ ಸಲ್ಲಿಸುವ ಹೃತ್ಪೂರ್ವಕ ಗೌರವವೆಂದು ಕನ್ನಡಿಗರಾದ ನಾವು ಭಾವಿಸುತ್ತೇವೆ. ಈ ನಮ್ಮ ಮನವಿಯನ್ನು ಮಾನ್ಯ ಕೇಂದ್ರ ರೈಲ್ವೆ ಸಚಿವರು ಪ್ರೀತಿ ಪೂರ್ವಕವಾಗಿ ಸ್ವೀಕರಿಸಿ ನಮ್ಮ ಒತ್ತಾಸೆಗೆ ಧ್ವನಿಗೂಡಿಸುವಂತೆ ಮನವಿ ಲಿಖಿತ ರೂಪವಾಗಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ  ಮೈಸೂರು ದೇವರಾಜ ಅರಸು ಪ್ರತಿಮೆ ಅಧ್ಯಕ್ಷರಾದ ಜಾಕೀರ್ ಹುಸೇನ್, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಪುರುಷೋತ್ತಮ್, ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಪ್ರಶಾಂತ್ ಆರ್ಯ, ಮೈಸೂರು ದಲಿತ ಪ್ರಗತಿಪರ ಒಕ್ಕೂಟಗಳ ಸಂಚಾಲರಾದ ಪಿ. ರಾಜು, ಮೈಸೂರು ದೇವರಾಜ ಅರಸು ಪ್ರತಿಮೆ
ಪ್ರತಿಷ್ಠಾಪನಾ ಸಮಿತಿ ಪ್ರಧಾನ ಸಂಚಾಲಕರಾದ ಅರವಿಂದ ಶರ್ಮ, ಮೈಸೂರು ದೇವರಾಜ ಅರಸು ಪ್ರತಿಮೆ
ಪ್ರತಿಷ್ಠಾಪನಾ ಸಮಿತಿಯ ಪ್ರಧಾನ ಸಂಚಾಲಕರಾದ ರದಿವುಲ್ಲ ಖಾನ್ ಇದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago