ಜಿಲ್ಲೆಗಳು

ರಮಾಬಾಯಿನಗರ ನೀರಿನ ಬಿಲ್ ಪರಿಷ್ಕರಣೆಗೆ ಸಿಎಂ ಆದೇಶ

 

ಸ್ಥಳೀಯ ನಿವಾಸಿಗಳ ಬೇಡಿಕೆ ಆಧರಿಸಿ ಶಾಸಕ ಜಿ.ಟಿ.ದೇವೇಗೌಡರ ಮನವಿ ಮೇರೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ

ಮೈಸೂರು: ಮೈಸೂರು ಹೊರ ವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ರಮಾಬಾಯಿ ನಗರದ ನಿವಾಸಿಗಳ ನೀರಿನ ಬಿಲ್ ಪರಿಷ್ಕರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಮೈಸೂರಿಗೆ ಆಗಮಿಸಿದ್ದ ಸಿಎಂ ಅವರನ್ನು ಭೇಟಿ ಮಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವಗೌಡ ನೀರಿನ ಬಿಲ್ ಪರಿಷ್ಕರಣೆ ಕೋರಿಕೆ ಸಲ್ಲಿಸಿದರು. ಇದಕ್ಕೆ ತತ್‌ಕ್ಷಣವೇ ಸ್ಪಂದಿಸಿದ ಸಿಎಂ, ಮೈಸೂರು ನಗರ ಪಾಲಿಕೆ ಆಯುಕ್ತರು ಹಾಗೂ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಈ ಸೂಚನೆ ನೀಡಿದರು.

ಇತ್ತೀಚಿಗಷ್ಟೇ ಮೇಲ್ದರ್ಜೇಗೇರಿಸಲ್ಪಟ್ಟ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಮಾಬಾಯಿನಗರದ ನಿವಾಸಿಗಳು ಮುಖಂಡರಾದ ಯೋಗಶ್ರೀನಿವಾಸ ರೊಡನೆ ನನ್ನನ್ನು ಸಂಪರ್ಕಿಸಿ ೨೦ ವರ್ಷಗಳಿಂದ ಮಹಾನಗರ ಪಾಲಿಕೆಯವರು ಅವೈಜ್ಞಾನಿಕವಾಗಿ ನೀರಿನ ದರವನ್ನು ನಿಗದಿಪಡಿಸಿದ್ದು ಬಡತನ ರೇಖೆಗಿಂತ ಕೆಳಗಿರುವ ನಾವುಗಳು ರೂ ೪೦-೫೦ಸಾವಿರ ರೂಗಳಷ್ಟು ಬಿಲ್ಲನ್ನು ಪಾವತಿಸಲು ಸಾಧ್ಯವಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದರು. ಇದನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಯಿತು. ಅವೈಜ್ಞಾನಿಕವಾಗಿ ನಿಗದಿ ಪಟಿಡಿಸಿದ್ದ ನೀರಿನ ಬಿಲ್ಲುಗಳನ್ನು ಪರಿಷ್ಕರಿಸಿ ನ್ಯಾಯಬದ್ದವಾಗಿ ಪಾವತಿಸಬೇಕಾದ ಮೊತ್ತವನ್ನು ಸ್ಥಳೀಯ ಸಂಸ್ಥೆಗೆ ಪಾವತಿಸಿ ಖಾತೆ ಮತ್ತು ಕಂದಾಯಗಳನ್ನು ಪಡೆಯಲು ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು ಎಂದು ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಇದಲ್ಲದೇ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ,ಮಹದೇವಪುರ, ಲಿಂಗಾಂಬುಧಿಪಾಳ್ಯ, ಪರಸಯ್ಯನಹುಂಡಿ, ಟೆಂಪಲ್ ಬೆಲ್ ಬಡಾವಣೆ, ವಿಶ್ವವಿದ್ಯಾನಿಲಯ ಬಡಾವಣೆಗಳಿಗೆ ಕಬಿನಿ ನೀರನ್ನು ಸಂಪರ್ಕಿಸುವ ಕಾಮಗಾರಿಯನ್ನು ಕೈಗೊಂಡು, ಆಗಸ್ಟ್ ತಿಂಗಳ ಅಂತ್ಯದೊಳಗೆ ಈ ಬಡಾವಣೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಮುಖ್ಯಮಂತ್ರಿ ಗಳು ಪಾಲಿಕೆ ಆಯುಕ್ತರು ಮತ್ತು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಗಳಿಗೆ ಸೂಚಿಸಿದರು ಎಂದು ವಿವರಿಸಿದ್ದಾರೆ.

ನೀರಿನ ಬಿಲ್ ಪರಿಷ್ಕರಣೆ ಸಂಬಂಧ ಪಾಲಿಕೆ ಮತ್ತು ಪಟ್ಟಣ ಪಂಚಾಯತಿಯಿಂದ ಅಧಿಕೃತ ಆದೇಶವನ್ನು ಶೀಘ್ರವಾಗಿ ಹೊರಡಿಸಲಾಗುವುದು.ರಮಾಬಾಯಿನಗರಸ ನಿವಾಸಿಗಳು ಆತಂಕ ಪಡಬೇಕಾಗಿಲ್ಲ. ಪಟ್ಟಣ ಪಂಚಾಯತಿ ವ್ಯಾಪ್ತಿಯ ಶೀಘ್ರವಾಗಿ ಎಲ್ಲಾ ಬಡಾವಣೆಗಳಲ್ಲಿ ಕಂದಾಯ ಅದಾಲತ್ ನಡೆಸಿ ಖಾತೆ, ಕಂದಾಯವನ್ನು ಸ್ಥಳದಲ್ಲಿಯೇ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

andolanait

Recent Posts

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

4 mins ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

1 hour ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

2 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

2 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

2 hours ago

ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಭದ್ರತಾ ವ್ಯವಸ್ಥೆ ಪರಿಶೀಲನೆ

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

2 hours ago