ಸ್ಥಳೀಯ ನಿವಾಸಿಗಳ ಬೇಡಿಕೆ ಆಧರಿಸಿ ಶಾಸಕ ಜಿ.ಟಿ.ದೇವೇಗೌಡರ ಮನವಿ ಮೇರೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ
ಮೈಸೂರು: ಮೈಸೂರು ಹೊರ ವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ರಮಾಬಾಯಿ ನಗರದ ನಿವಾಸಿಗಳ ನೀರಿನ ಬಿಲ್ ಪರಿಷ್ಕರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಮೈಸೂರಿಗೆ ಆಗಮಿಸಿದ್ದ ಸಿಎಂ ಅವರನ್ನು ಭೇಟಿ ಮಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವಗೌಡ ನೀರಿನ ಬಿಲ್ ಪರಿಷ್ಕರಣೆ ಕೋರಿಕೆ ಸಲ್ಲಿಸಿದರು. ಇದಕ್ಕೆ ತತ್ಕ್ಷಣವೇ ಸ್ಪಂದಿಸಿದ ಸಿಎಂ, ಮೈಸೂರು ನಗರ ಪಾಲಿಕೆ ಆಯುಕ್ತರು ಹಾಗೂ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಈ ಸೂಚನೆ ನೀಡಿದರು.
ಇತ್ತೀಚಿಗಷ್ಟೇ ಮೇಲ್ದರ್ಜೇಗೇರಿಸಲ್ಪಟ್ಟ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಮಾಬಾಯಿನಗರದ ನಿವಾಸಿಗಳು ಮುಖಂಡರಾದ ಯೋಗಶ್ರೀನಿವಾಸ ರೊಡನೆ ನನ್ನನ್ನು ಸಂಪರ್ಕಿಸಿ ೨೦ ವರ್ಷಗಳಿಂದ ಮಹಾನಗರ ಪಾಲಿಕೆಯವರು ಅವೈಜ್ಞಾನಿಕವಾಗಿ ನೀರಿನ ದರವನ್ನು ನಿಗದಿಪಡಿಸಿದ್ದು ಬಡತನ ರೇಖೆಗಿಂತ ಕೆಳಗಿರುವ ನಾವುಗಳು ರೂ ೪೦-೫೦ಸಾವಿರ ರೂಗಳಷ್ಟು ಬಿಲ್ಲನ್ನು ಪಾವತಿಸಲು ಸಾಧ್ಯವಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದರು. ಇದನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಯಿತು. ಅವೈಜ್ಞಾನಿಕವಾಗಿ ನಿಗದಿ ಪಟಿಡಿಸಿದ್ದ ನೀರಿನ ಬಿಲ್ಲುಗಳನ್ನು ಪರಿಷ್ಕರಿಸಿ ನ್ಯಾಯಬದ್ದವಾಗಿ ಪಾವತಿಸಬೇಕಾದ ಮೊತ್ತವನ್ನು ಸ್ಥಳೀಯ ಸಂಸ್ಥೆಗೆ ಪಾವತಿಸಿ ಖಾತೆ ಮತ್ತು ಕಂದಾಯಗಳನ್ನು ಪಡೆಯಲು ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು ಎಂದು ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಇದಲ್ಲದೇ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ,ಮಹದೇವಪುರ, ಲಿಂಗಾಂಬುಧಿಪಾಳ್ಯ, ಪರಸಯ್ಯನಹುಂಡಿ, ಟೆಂಪಲ್ ಬೆಲ್ ಬಡಾವಣೆ, ವಿಶ್ವವಿದ್ಯಾನಿಲಯ ಬಡಾವಣೆಗಳಿಗೆ ಕಬಿನಿ ನೀರನ್ನು ಸಂಪರ್ಕಿಸುವ ಕಾಮಗಾರಿಯನ್ನು ಕೈಗೊಂಡು, ಆಗಸ್ಟ್ ತಿಂಗಳ ಅಂತ್ಯದೊಳಗೆ ಈ ಬಡಾವಣೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಮುಖ್ಯಮಂತ್ರಿ ಗಳು ಪಾಲಿಕೆ ಆಯುಕ್ತರು ಮತ್ತು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಗಳಿಗೆ ಸೂಚಿಸಿದರು ಎಂದು ವಿವರಿಸಿದ್ದಾರೆ.
ನೀರಿನ ಬಿಲ್ ಪರಿಷ್ಕರಣೆ ಸಂಬಂಧ ಪಾಲಿಕೆ ಮತ್ತು ಪಟ್ಟಣ ಪಂಚಾಯತಿಯಿಂದ ಅಧಿಕೃತ ಆದೇಶವನ್ನು ಶೀಘ್ರವಾಗಿ ಹೊರಡಿಸಲಾಗುವುದು.ರಮಾಬಾಯಿನಗರಸ ನಿವಾಸಿಗಳು ಆತಂಕ ಪಡಬೇಕಾಗಿಲ್ಲ. ಪಟ್ಟಣ ಪಂಚಾಯತಿ ವ್ಯಾಪ್ತಿಯ ಶೀಘ್ರವಾಗಿ ಎಲ್ಲಾ ಬಡಾವಣೆಗಳಲ್ಲಿ ಕಂದಾಯ ಅದಾಲತ್ ನಡೆಸಿ ಖಾತೆ, ಕಂದಾಯವನ್ನು ಸ್ಥಳದಲ್ಲಿಯೇ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…