ಜಿಲ್ಲೆಗಳು

ರಮಾಬಾಯಿನಗರ ನೀರಿನ ಬಿಲ್ ಪರಿಷ್ಕರಣೆಗೆ ಸಿಎಂ ಆದೇಶ

 

ಸ್ಥಳೀಯ ನಿವಾಸಿಗಳ ಬೇಡಿಕೆ ಆಧರಿಸಿ ಶಾಸಕ ಜಿ.ಟಿ.ದೇವೇಗೌಡರ ಮನವಿ ಮೇರೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ

ಮೈಸೂರು: ಮೈಸೂರು ಹೊರ ವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ ರಮಾಬಾಯಿ ನಗರದ ನಿವಾಸಿಗಳ ನೀರಿನ ಬಿಲ್ ಪರಿಷ್ಕರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಮೈಸೂರಿಗೆ ಆಗಮಿಸಿದ್ದ ಸಿಎಂ ಅವರನ್ನು ಭೇಟಿ ಮಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವಗೌಡ ನೀರಿನ ಬಿಲ್ ಪರಿಷ್ಕರಣೆ ಕೋರಿಕೆ ಸಲ್ಲಿಸಿದರು. ಇದಕ್ಕೆ ತತ್‌ಕ್ಷಣವೇ ಸ್ಪಂದಿಸಿದ ಸಿಎಂ, ಮೈಸೂರು ನಗರ ಪಾಲಿಕೆ ಆಯುಕ್ತರು ಹಾಗೂ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಈ ಸೂಚನೆ ನೀಡಿದರು.

ಇತ್ತೀಚಿಗಷ್ಟೇ ಮೇಲ್ದರ್ಜೇಗೇರಿಸಲ್ಪಟ್ಟ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ರಮಾಬಾಯಿನಗರದ ನಿವಾಸಿಗಳು ಮುಖಂಡರಾದ ಯೋಗಶ್ರೀನಿವಾಸ ರೊಡನೆ ನನ್ನನ್ನು ಸಂಪರ್ಕಿಸಿ ೨೦ ವರ್ಷಗಳಿಂದ ಮಹಾನಗರ ಪಾಲಿಕೆಯವರು ಅವೈಜ್ಞಾನಿಕವಾಗಿ ನೀರಿನ ದರವನ್ನು ನಿಗದಿಪಡಿಸಿದ್ದು ಬಡತನ ರೇಖೆಗಿಂತ ಕೆಳಗಿರುವ ನಾವುಗಳು ರೂ ೪೦-೫೦ಸಾವಿರ ರೂಗಳಷ್ಟು ಬಿಲ್ಲನ್ನು ಪಾವತಿಸಲು ಸಾಧ್ಯವಿಲ್ಲ ಎಂದು ಅಳಲನ್ನು ತೋಡಿಕೊಂಡಿದ್ದರು. ಇದನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಯಿತು. ಅವೈಜ್ಞಾನಿಕವಾಗಿ ನಿಗದಿ ಪಟಿಡಿಸಿದ್ದ ನೀರಿನ ಬಿಲ್ಲುಗಳನ್ನು ಪರಿಷ್ಕರಿಸಿ ನ್ಯಾಯಬದ್ದವಾಗಿ ಪಾವತಿಸಬೇಕಾದ ಮೊತ್ತವನ್ನು ಸ್ಥಳೀಯ ಸಂಸ್ಥೆಗೆ ಪಾವತಿಸಿ ಖಾತೆ ಮತ್ತು ಕಂದಾಯಗಳನ್ನು ಪಡೆಯಲು ಕ್ರಮ ಕೈಗೊಳ್ಳುವಂತೆ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು ಎಂದು ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.

ಇದಲ್ಲದೇ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ,ಮಹದೇವಪುರ, ಲಿಂಗಾಂಬುಧಿಪಾಳ್ಯ, ಪರಸಯ್ಯನಹುಂಡಿ, ಟೆಂಪಲ್ ಬೆಲ್ ಬಡಾವಣೆ, ವಿಶ್ವವಿದ್ಯಾನಿಲಯ ಬಡಾವಣೆಗಳಿಗೆ ಕಬಿನಿ ನೀರನ್ನು ಸಂಪರ್ಕಿಸುವ ಕಾಮಗಾರಿಯನ್ನು ಕೈಗೊಂಡು, ಆಗಸ್ಟ್ ತಿಂಗಳ ಅಂತ್ಯದೊಳಗೆ ಈ ಬಡಾವಣೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಮುಖ್ಯಮಂತ್ರಿ ಗಳು ಪಾಲಿಕೆ ಆಯುಕ್ತರು ಮತ್ತು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಗಳಿಗೆ ಸೂಚಿಸಿದರು ಎಂದು ವಿವರಿಸಿದ್ದಾರೆ.

ನೀರಿನ ಬಿಲ್ ಪರಿಷ್ಕರಣೆ ಸಂಬಂಧ ಪಾಲಿಕೆ ಮತ್ತು ಪಟ್ಟಣ ಪಂಚಾಯತಿಯಿಂದ ಅಧಿಕೃತ ಆದೇಶವನ್ನು ಶೀಘ್ರವಾಗಿ ಹೊರಡಿಸಲಾಗುವುದು.ರಮಾಬಾಯಿನಗರಸ ನಿವಾಸಿಗಳು ಆತಂಕ ಪಡಬೇಕಾಗಿಲ್ಲ. ಪಟ್ಟಣ ಪಂಚಾಯತಿ ವ್ಯಾಪ್ತಿಯ ಶೀಘ್ರವಾಗಿ ಎಲ್ಲಾ ಬಡಾವಣೆಗಳಲ್ಲಿ ಕಂದಾಯ ಅದಾಲತ್ ನಡೆಸಿ ಖಾತೆ, ಕಂದಾಯವನ್ನು ಸ್ಥಳದಲ್ಲಿಯೇ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

12 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

12 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

12 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

12 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

13 hours ago