ಮೈಸೂರು: ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ. ರಾಷ್ಟ್ರಪತಿಯವರಿಗಾಗಿಯೇ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆಯನ್ನು ಅಧಿಕೃತ ಆಹ್ವಾನದ ವೇಳೆ ಉಡುಗೊರೆಯಾಗಿ ಕೊಡಲಾಗಿತ್ತು.
ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವಸೂಚಕವಾಗಿ ಈ ಮೈಸೂರು ರೇಶ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು. ಇದೇ ಉಡುಪು ಧರಿಸಿ ರಾಷ್ಟ್ರಪತಿಯವರು ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದು ಮೈಸೂರಿಗರಿಗೆ ಸಂತಸ ತಂದಿದೆ.
ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿ, ಸಿದ್ಧಪಡಿಸಿದ್ದರು. ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ಸ್ಥಾಪಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ. ಮೈಸೂರು ಸಿಲ್ಕ್ ಸೀರೆ ಬ್ರಾಂಡ್ ವಿಶ್ವಪ್ರಸಿದ್ಧ ಬ್ರಾಂಡ್ ಆಗಿದೆ. ನೂರಾರು ವರ್ಷಗಳಿಂದ ಮಹಿಳೆಯರಿಗೆ ಮೈಸೂರು ಸಿಲ್ಕ್ ಸೀರೆ ಎಂದರೆ ಎಲ್ಲಿಲ್ಲದ ಅಚ್ಚುಮೆಚ್ಚು. ಹಾಗಾಗಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಅಪ್ಪಟ ರೇಶ್ಮೆ ಮತ್ತು ಅಪ್ಪಟ ಚಿನ್ನದ ಎಳೆಗಳನ್ನು ಬಳಸಿ ತಯಾರಿಸಿದ ಈ ಉಡುಪನ್ನು ಗೌರವಸೂಚಕವಾಗಿ ಅವರಿಗೆ ಸಮರ್ಪಿಸಲಾಗಿತ್ತು.
ಮೈಸೂರು ಸೀರೆ ಉಟ್ಟು ಮೈಸೂರು ದಸರೆಯನ್ನು ಉದ್ಘಾಟಿಸಿದ ರಾಷ್ಟ್ರಪತಿಯವರ ನಡೆ ಮೈಸೂರಿಗರು ಮಾತ್ರವಲ್ಲ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ.
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್ಆರ್ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…
ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ…