ಜಿಲ್ಲೆಗಳು

ಮೈಸೂರು ರೇಷ್ಮೆ ಸೀರೆ ಉಟ್ಟು ದಸರೆಗೆ ಮೆರುಗು ನೀಡಿದ ರಾಷ್ಟ್ರಪತಿ

ಮೈಸೂರು: ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ. ರಾಷ್ಟ್ರಪತಿಯವರಿಗಾಗಿಯೇ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆಯನ್ನು ಅಧಿಕೃತ ಆಹ್ವಾನದ ವೇಳೆ ಉಡುಗೊರೆಯಾಗಿ ಕೊಡಲಾಗಿತ್ತು.

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವಸೂಚಕವಾಗಿ ಈ ಮೈಸೂರು ರೇಶ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು. ಇದೇ ಉಡುಪು ಧರಿಸಿ ರಾಷ್ಟ್ರಪತಿಯವರು ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದು ಮೈಸೂರಿಗರಿಗೆ ಸಂತಸ ತಂದಿದೆ.

ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿ, ಸಿದ್ಧಪಡಿಸಿದ್ದರು. ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ಸ್ಥಾಪಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ. ಮೈಸೂರು ಸಿಲ್ಕ್ ಸೀರೆ ಬ್ರಾಂಡ್ ವಿಶ್ವಪ್ರಸಿದ್ಧ ಬ್ರಾಂಡ್ ಆಗಿದೆ. ನೂರಾರು ವರ್ಷಗಳಿಂದ ಮಹಿಳೆಯರಿಗೆ ಮೈಸೂರು ಸಿಲ್ಕ್ ಸೀರೆ ಎಂದರೆ ಎಲ್ಲಿಲ್ಲದ ಅಚ್ಚುಮೆಚ್ಚು. ಹಾಗಾಗಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಅಪ್ಪಟ ರೇಶ್ಮೆ ಮತ್ತು ಅಪ್ಪಟ ಚಿನ್ನದ ಎಳೆಗಳನ್ನು ಬಳಸಿ ತಯಾರಿಸಿದ ಈ ಉಡುಪನ್ನು ಗೌರವಸೂಚಕವಾಗಿ ಅವರಿಗೆ ಸಮರ್ಪಿಸಲಾಗಿತ್ತು.

ಮೈಸೂರು ಸೀರೆ ಉಟ್ಟು ಮೈಸೂರು ದಸರೆಯನ್ನು ಉದ್ಘಾಟಿಸಿದ ರಾಷ್ಟ್ರಪತಿಯವರ ನಡೆ ಮೈಸೂರಿಗರು ಮಾತ್ರವಲ್ಲ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ.

andolanait

Recent Posts

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

14 mins ago

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಶಾಸಕ ಎಂ.ಆರ್.‌ಮಂಜುನಾಥ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…

22 mins ago

ತಮಿಳುನಾಡು ವಿಧಾನಸಭಾ ಚುನಾವಣೆ: ಗಡಿಭಾಗದ ಚೆಕ್ ಪೋಸ್ಟ್‌ಗಳಿಗೆ ಡಿವೈಎಸ್ಪಿ ಭೇಟಿ, ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು : ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು,…

30 mins ago

ಗಲ್ಲಾಪೆಟ್ಟಿಗೆಯಲ್ಲಿ ಧುರಂಧರ್-‌2 ಅಬ್ಬರ: 800 ಕೋಟಿ ಕ್ಲಬ್‌ ಸೇರುವತ್ತ ಓಟ

ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್-‌2 ದಾಖಲೆಗಳನ್ನು ಮುರಿಯುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್‌ನಲ್ಲಿ…

53 mins ago

ಅಮೇರಿಕಾದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ?

ವಾಷಿಂಗ್ಟನ್:‌ ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…

1 hour ago

ಪಶು ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಸಚಿವ ಈಶ್ವರ್‌ ಖಂಡ್ರೆ ಭರವಸೆ

ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು…

1 hour ago