ಜಿಲ್ಲೆಗಳು

ಮೈಸೂರು ರೇಷ್ಮೆ ಸೀರೆ ಉಟ್ಟು ದಸರೆಗೆ ಮೆರುಗು ನೀಡಿದ ರಾಷ್ಟ್ರಪತಿ

ಮೈಸೂರು: ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ. ರಾಷ್ಟ್ರಪತಿಯವರಿಗಾಗಿಯೇ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆಯನ್ನು ಅಧಿಕೃತ ಆಹ್ವಾನದ ವೇಳೆ ಉಡುಗೊರೆಯಾಗಿ ಕೊಡಲಾಗಿತ್ತು.

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವಸೂಚಕವಾಗಿ ಈ ಮೈಸೂರು ರೇಶ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು. ಇದೇ ಉಡುಪು ಧರಿಸಿ ರಾಷ್ಟ್ರಪತಿಯವರು ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದು ಮೈಸೂರಿಗರಿಗೆ ಸಂತಸ ತಂದಿದೆ.

ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿ, ಸಿದ್ಧಪಡಿಸಿದ್ದರು. ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ಸ್ಥಾಪಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ. ಮೈಸೂರು ಸಿಲ್ಕ್ ಸೀರೆ ಬ್ರಾಂಡ್ ವಿಶ್ವಪ್ರಸಿದ್ಧ ಬ್ರಾಂಡ್ ಆಗಿದೆ. ನೂರಾರು ವರ್ಷಗಳಿಂದ ಮಹಿಳೆಯರಿಗೆ ಮೈಸೂರು ಸಿಲ್ಕ್ ಸೀರೆ ಎಂದರೆ ಎಲ್ಲಿಲ್ಲದ ಅಚ್ಚುಮೆಚ್ಚು. ಹಾಗಾಗಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಅಪ್ಪಟ ರೇಶ್ಮೆ ಮತ್ತು ಅಪ್ಪಟ ಚಿನ್ನದ ಎಳೆಗಳನ್ನು ಬಳಸಿ ತಯಾರಿಸಿದ ಈ ಉಡುಪನ್ನು ಗೌರವಸೂಚಕವಾಗಿ ಅವರಿಗೆ ಸಮರ್ಪಿಸಲಾಗಿತ್ತು.

ಮೈಸೂರು ಸೀರೆ ಉಟ್ಟು ಮೈಸೂರು ದಸರೆಯನ್ನು ಉದ್ಘಾಟಿಸಿದ ರಾಷ್ಟ್ರಪತಿಯವರ ನಡೆ ಮೈಸೂರಿಗರು ಮಾತ್ರವಲ್ಲ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ.

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

57 mins ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

5 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

7 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

9 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

12 hours ago