ಜಿಲ್ಲೆಗಳು

ಮೈಸೂರು ರೇಷ್ಮೆ ಸೀರೆ ಉಟ್ಟು ದಸರೆಗೆ ಮೆರುಗು ನೀಡಿದ ರಾಷ್ಟ್ರಪತಿ

ಮೈಸೂರು: ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ಧರಿಸಿ, ದಸರಾ ಉದ್ಘಾಟಿಸುವ ಮೂಲಕ ಮೈಸೂರಿಗೆ ವಿಶೇಷ ಗೌರವ ನೀಡಿದ್ದಾರೆ. ರಾಷ್ಟ್ರಪತಿಯವರಿಗಾಗಿಯೇ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆಯನ್ನು ಅಧಿಕೃತ ಆಹ್ವಾನದ ವೇಳೆ ಉಡುಗೊರೆಯಾಗಿ ಕೊಡಲಾಗಿತ್ತು.

ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವಸೂಚಕವಾಗಿ ಈ ಮೈಸೂರು ರೇಶ್ಮೆ ಸೀರೆ, ಫಲ ತಾಂಬೂಲ ನೀಡಿ ಗೌರವಿಸಿದ್ದರು. ಇದೇ ಉಡುಪು ಧರಿಸಿ ರಾಷ್ಟ್ರಪತಿಯವರು ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ್ದು ಮೈಸೂರಿಗರಿಗೆ ಸಂತಸ ತಂದಿದೆ.

ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಿ ಸ್ವಾಮ್ಯದ ಕೆ.ಎಸ್.ಐ.ಸಿ.ಯ ಸರ್ಕಾರಿ ರೇಷ್ಮೆ ಕಾರ್ಖಾನೆಗೆ ಈ ಉಡುಪು ತಯಾರಿಕೆಗೆ ಆದೇಶ ನೀಡಿ, ಸಿದ್ಧಪಡಿಸಿದ್ದರು. ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ಸ್ಥಾಪಿಸಿದ ರೇಷ್ಮೆ ಕಾರ್ಖಾನೆ ಎಂಬ ಹೆಮ್ಮೆ ಈ ಕಾರ್ಖಾನೆಗೆ ಇದೆ. ಮೈಸೂರು ಸಿಲ್ಕ್ ಸೀರೆ ಬ್ರಾಂಡ್ ವಿಶ್ವಪ್ರಸಿದ್ಧ ಬ್ರಾಂಡ್ ಆಗಿದೆ. ನೂರಾರು ವರ್ಷಗಳಿಂದ ಮಹಿಳೆಯರಿಗೆ ಮೈಸೂರು ಸಿಲ್ಕ್ ಸೀರೆ ಎಂದರೆ ಎಲ್ಲಿಲ್ಲದ ಅಚ್ಚುಮೆಚ್ಚು. ಹಾಗಾಗಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಅಪ್ಪಟ ರೇಶ್ಮೆ ಮತ್ತು ಅಪ್ಪಟ ಚಿನ್ನದ ಎಳೆಗಳನ್ನು ಬಳಸಿ ತಯಾರಿಸಿದ ಈ ಉಡುಪನ್ನು ಗೌರವಸೂಚಕವಾಗಿ ಅವರಿಗೆ ಸಮರ್ಪಿಸಲಾಗಿತ್ತು.

ಮೈಸೂರು ಸೀರೆ ಉಟ್ಟು ಮೈಸೂರು ದಸರೆಯನ್ನು ಉದ್ಘಾಟಿಸಿದ ರಾಷ್ಟ್ರಪತಿಯವರ ನಡೆ ಮೈಸೂರಿಗರು ಮಾತ್ರವಲ್ಲ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದೆ.

andolanait

Recent Posts

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

30 mins ago

ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ…

38 mins ago

ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ, ಆದರೆ ಇದೇ ಪರಿಹಾರವಲ್ಲ: ಪಾಲಿಕೆ ಆಯುಕ್ತ ಶೇಖ್ ತನ್ವಿರ್ ಆಸೀಫ್

ಮೈಸೂರು: ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸಿಫ್‌…

45 mins ago

ತಮಿಳುನಾಡು ಸಿಎಂ ವಿಜಯ್‌ಗೆ ಕರೆ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್‌ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ…

1 hour ago

ಮೇ.13 ರಿಂದ 3 ದಿನಗಳ ಕಾಲ ಟ್ರಂಪ್‌ ಚೀನಾ ಪ್ರವಾಸ

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ…

2 hours ago

ʻಪ್ರೀತಿ ಎಲ್ಲಕ್ಕಿಂತ ಶಕ್ತಿಶಾಲಿʼ ವಿಜಯ್‌ ಮುಖ್ಯಮಂತ್ರಿ ಆದ ಬೆನ್ನಲ್ಲೇ ತ್ರಿಶಾ ಪೋಸ್ಟ್‌

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ…

3 hours ago