ಜಿಲ್ಲೆಗಳು

ಮೈಸೂರು ದಸರಾ – ಅರಮನೆ ಕಾರ್ಯಕ್ರಮಗಳಿಗೆ 5 ಕೋಟಿ ರೂ : ಸಚಿವ ಎಸ್.ಟಿ. ಸೋಮಶೇಖರ್

ಮೈಸೂರು : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೆನ್ನೆ ನಡೆದ ಸಭೆಯಲ್ಲಿ, ಮೈಸೂರು ಜಿಲ್ಲಾಡಳಿತ ಮತ್ತು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಕಾರ್ಯಕ್ರಮಗಳ ನಿರ್ವಹಣೆ ಸಂಬಂಧಿತವಾಗಿ ಸಿದ್ಧಪಡಿಸಿದ ಅಂದಾಜಿನ ಆಧಾರದ ಮೇಲೆ ದಸರದ ವಿವಿಧ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಎಸ್.ಟಿ. ಸೋಮಶೇಖರ್ ತಿಳಿಸಿದರು.

ಅರಮನೆ ಮಂಡಳಿ ವತಿಯಿಂದ ಅರಮನೆ ಕಾರ್ಯಕ್ರಮಗಳಿಗೆ 5 ಕೋಟಿ ರೂ, ಜಿಲ್ಲಾಡಳಿತ ಮತ್ತು ಎಂ ಸಿ ಸಿ ಯು ಅಂದಾಜುಗಳನ್ನು ಪರಿಗಣಿಸಿ ಉಸ್ತವಗಳಿಗೆ ಯೋಚಿಸಲಾದ ಕಾರ್ಯಕ್ರಮಗಳ ಆಧಾರದ ಮೇಲೆ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸೂಚಿಸಿದರು.

ಕೋವಿಡ್- 19 ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅದ್ದೂರಿ ಆಚರಣೆ ಕಡಿಮೆಯಾಗಿದ್ದು ಈ ಬಾರಿ ದಸರಾದಲ್ಲಿ ಪ್ರಪಂಚದಾದ್ಯಂತ ಪ್ರವಾಸಿಗರನ್ನು ಆಕರ್ಷಿಸಲು ವ್ಯಾಪಕ ಪ್ರಚಾರ ಅಭಿಯಾನವನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಮುಂದುವರಿದು ಚಾಮುಂಡಿ ಬೆಟ್ಟದ ಮೇಲೆ ದಸರಾ ಉತ್ಸವವನ್ನು ಉದ್ಘಾಟಿಸುವ ಬಗ್ಗೆ, ಗಣ್ಯರನ್ನು ಆಹ್ವಾನಿಸುವುದರ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಶ್ರೀರಂಗಪಟ್ಟಣ ದಸರಾ ಹಾಗೂ ಚಾಮರಾಜನಗರ ದಸರಾ ಆಚರಣೆಗೆ ತಲಾ ಒಂದು ಕೋಟಿ ರೂ. ಮಹೋತ್ಸವದ ಅಂಗವಾಗಿ ಶ್ರೀರಂಗಪಟ್ಟಣದಲ್ಲಿ ಜಂಬೂ ಸವಾರಿ ಗೆ ಮೂರು ಆನೆಗಳನ್ನು ಹುಡುಕಲಾಗಿದೆ ಎಂದರು.

andolanait

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

2 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

2 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

2 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

2 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

2 hours ago