ಜಿಲ್ಲೆಗಳು

ಮೈಸೂರು ದಸರಾ – ಅರಮನೆ ಕಾರ್ಯಕ್ರಮಗಳಿಗೆ 5 ಕೋಟಿ ರೂ : ಸಚಿವ ಎಸ್.ಟಿ. ಸೋಮಶೇಖರ್

ಮೈಸೂರು : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೆನ್ನೆ ನಡೆದ ಸಭೆಯಲ್ಲಿ, ಮೈಸೂರು ಜಿಲ್ಲಾಡಳಿತ ಮತ್ತು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಕಾರ್ಯಕ್ರಮಗಳ ನಿರ್ವಹಣೆ ಸಂಬಂಧಿತವಾಗಿ ಸಿದ್ಧಪಡಿಸಿದ ಅಂದಾಜಿನ ಆಧಾರದ ಮೇಲೆ ದಸರದ ವಿವಿಧ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಎಸ್.ಟಿ. ಸೋಮಶೇಖರ್ ತಿಳಿಸಿದರು.

ಅರಮನೆ ಮಂಡಳಿ ವತಿಯಿಂದ ಅರಮನೆ ಕಾರ್ಯಕ್ರಮಗಳಿಗೆ 5 ಕೋಟಿ ರೂ, ಜಿಲ್ಲಾಡಳಿತ ಮತ್ತು ಎಂ ಸಿ ಸಿ ಯು ಅಂದಾಜುಗಳನ್ನು ಪರಿಗಣಿಸಿ ಉಸ್ತವಗಳಿಗೆ ಯೋಚಿಸಲಾದ ಕಾರ್ಯಕ್ರಮಗಳ ಆಧಾರದ ಮೇಲೆ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸೂಚಿಸಿದರು.

ಕೋವಿಡ್- 19 ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅದ್ದೂರಿ ಆಚರಣೆ ಕಡಿಮೆಯಾಗಿದ್ದು ಈ ಬಾರಿ ದಸರಾದಲ್ಲಿ ಪ್ರಪಂಚದಾದ್ಯಂತ ಪ್ರವಾಸಿಗರನ್ನು ಆಕರ್ಷಿಸಲು ವ್ಯಾಪಕ ಪ್ರಚಾರ ಅಭಿಯಾನವನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಮುಂದುವರಿದು ಚಾಮುಂಡಿ ಬೆಟ್ಟದ ಮೇಲೆ ದಸರಾ ಉತ್ಸವವನ್ನು ಉದ್ಘಾಟಿಸುವ ಬಗ್ಗೆ, ಗಣ್ಯರನ್ನು ಆಹ್ವಾನಿಸುವುದರ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಶ್ರೀರಂಗಪಟ್ಟಣ ದಸರಾ ಹಾಗೂ ಚಾಮರಾಜನಗರ ದಸರಾ ಆಚರಣೆಗೆ ತಲಾ ಒಂದು ಕೋಟಿ ರೂ. ಮಹೋತ್ಸವದ ಅಂಗವಾಗಿ ಶ್ರೀರಂಗಪಟ್ಟಣದಲ್ಲಿ ಜಂಬೂ ಸವಾರಿ ಗೆ ಮೂರು ಆನೆಗಳನ್ನು ಹುಡುಕಲಾಗಿದೆ ಎಂದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

2 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

14 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

15 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

17 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

21 hours ago