ಮೈಸೂರು : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೆನ್ನೆ ನಡೆದ ಸಭೆಯಲ್ಲಿ, ಮೈಸೂರು ಜಿಲ್ಲಾಡಳಿತ ಮತ್ತು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ವಿವಿಧ ಕಾರ್ಯಕ್ರಮಗಳ ನಿರ್ವಹಣೆ ಸಂಬಂಧಿತವಾಗಿ ಸಿದ್ಧಪಡಿಸಿದ ಅಂದಾಜಿನ ಆಧಾರದ ಮೇಲೆ ದಸರದ ವಿವಿಧ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಎಸ್.ಟಿ. ಸೋಮಶೇಖರ್ ತಿಳಿಸಿದರು.
ಅರಮನೆ ಮಂಡಳಿ ವತಿಯಿಂದ ಅರಮನೆ ಕಾರ್ಯಕ್ರಮಗಳಿಗೆ 5 ಕೋಟಿ ರೂ, ಜಿಲ್ಲಾಡಳಿತ ಮತ್ತು ಎಂ ಸಿ ಸಿ ಯು ಅಂದಾಜುಗಳನ್ನು ಪರಿಗಣಿಸಿ ಉಸ್ತವಗಳಿಗೆ ಯೋಚಿಸಲಾದ ಕಾರ್ಯಕ್ರಮಗಳ ಆಧಾರದ ಮೇಲೆ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸೂಚಿಸಿದರು.
ಕೋವಿಡ್- 19 ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅದ್ದೂರಿ ಆಚರಣೆ ಕಡಿಮೆಯಾಗಿದ್ದು ಈ ಬಾರಿ ದಸರಾದಲ್ಲಿ ಪ್ರಪಂಚದಾದ್ಯಂತ ಪ್ರವಾಸಿಗರನ್ನು ಆಕರ್ಷಿಸಲು ವ್ಯಾಪಕ ಪ್ರಚಾರ ಅಭಿಯಾನವನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಮುಂದುವರಿದು ಚಾಮುಂಡಿ ಬೆಟ್ಟದ ಮೇಲೆ ದಸರಾ ಉತ್ಸವವನ್ನು ಉದ್ಘಾಟಿಸುವ ಬಗ್ಗೆ, ಗಣ್ಯರನ್ನು ಆಹ್ವಾನಿಸುವುದರ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.
ಶ್ರೀರಂಗಪಟ್ಟಣ ದಸರಾ ಹಾಗೂ ಚಾಮರಾಜನಗರ ದಸರಾ ಆಚರಣೆಗೆ ತಲಾ ಒಂದು ಕೋಟಿ ರೂ. ಮಹೋತ್ಸವದ ಅಂಗವಾಗಿ ಶ್ರೀರಂಗಪಟ್ಟಣದಲ್ಲಿ ಜಂಬೂ ಸವಾರಿ ಗೆ ಮೂರು ಆನೆಗಳನ್ನು ಹುಡುಕಲಾಗಿದೆ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…