ಜಿಲ್ಲೆಗಳು

ಮೈಸೂರಿನ 2ನೇ ನಿಲ್ದಾಣವಾಗಿ ಅಶೋಕಪುರಂ ರೈಲ್ವೆಸ್ಟೇಶನ್‌ ಅಭಿವೃದ್ಧಿ

ಮೇ ಒಳಗೆ ಅಶೋಕಪುರಂ ರೈಲು ನಿಲ್ದಾಣ ಮೇಲ್ದರ್ಜೆ ಕಾಮಗಾರಿ ಪೂರ್ಣ : ಸಂಸದ ಪ್ರತಾಪಸಿಂಹ

ಮೈಸೂರು: ಮುಂದಿನ 30 ರಿಂದ 50 ವರ್ಷಗಳಲ್ಲಿ ಪ್ರಯಾಣಿಕರ ಓಡಾಟ, ಹೆಚ್ಚುವರಿ ರೈಲುಗಳ ಸಂಚಾರದಿಂದ ಎದುರಾಗುವ ಒತ್ತಡ ತಗ್ಗಿಸಿ, ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲ ಮಾಡಿಕೊಡಲು ಅಶೋಕಪುರಂ ರೈಲು ನಿಲ್ದಾಣವನ್ನು ಎರಡನೇ ನಿಲ್ದಾಣವನ್ನಾಗಿ ಅಭಿವೃದ್ಧಿಪಡಿಸಲು 30 ಕೋಟಿ ರೂ.ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ನಾಲ್ಕೈದು ತಿಂಗಳಲ್ಲಿ ಮುಗಿಯಲಿದೆ.

ಬೆಳಗೊಳ ಬಳಿ ಎರಡು ಪ್ಲಾಟ್‌ ಫಾ-ರಂ ಹಾಗೂ ಅಶೋಕಪುರಂ ನಿಲ್ದಾಣದಲ್ಲಿ ಹೆಚ್ಚುವರಿಯಾಗಿ ಎರಡು -ಪ್ಲಾಟ್‌ ಫಾ-ರಂಗಳು ನಿರ್ಮಾಣವಾಗುವುದರಿಂದ ಕೇಂದ್ರೀಯ ರೈಲು ನಿಲ್ದಾಣದ ಮೇಲೆ ಸಾಕಷ್ಟು ಒತ್ತಡ ಕಡಿಮೆಯಾಗಲಿದೆ. ಕೇಂದ್ರೀಯ ರೈಲು ನಿಲ್ದಾಣದಿಂದ ಓಡಾಡುವ ರೈಲುಗಳಲ್ಲಿ ಕೆಲವು ರೈಲುಗಳನ್ನು ಅಶೋಕಪುರಂ ನಿಲ್ದಾಣದಿಂದ ಪ್ರಾರಂಭವಾಗುವಂತೆ ಮಾಡುವ ಯೋಚನೆಯಿದೆ. ಹೀಗಾಗಿ, ಅಶೋಕಪುರಂ ನಿಲ್ದಾಣದ ಬಳಿ ಕೈಗೊಂಡಿರುವ ವಿವಿಧ ಕಾಮಗಾರಿಗಳು ಭರದಿಂದ ಸಾಗಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ಅವರು, ಅಶೋಕಪುರಂ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವೀಕ್ಷಿಸಿದರು.

ರೈಲ್ವೆ ವಿಭಾಗೀಯ ನಿಯಂತ್ರಣಾಧಿಕಾರಿ ರಾಹುಲ್ ಅಗರವಾಲ್ ಅವರು ಕಾಮಗಾರಿ ಪ್ರಗತಿ ಕುರಿತು ಮಾಹಿತಿ ನೀಡಿದರೆ, ಉಪ ವಿಭಾಗಾಽಕಾರಿ ಕಮಲಾ ಭಾಯಿ ಅವರು ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಆಗಬೇಕಿರುವ ಕೆಲಸದ ಬಗ್ಗೆ ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಬೆಂಗಳೂರಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಒತ್ತಡ ತಗ್ಗಿಸಲು ಕಂಟೋನ್‌ಮೆಂಟ್, ಬೈಯಪ್ಪನಹಳ್ಳಿ, ಕೆಂಗೇರಿ, ಯಶವಂತಪುರ ರೈಲು ನಿಲ್ದಾಣಗಳನ್ನು ವಿಸ್ತರಿಸಲಾಗಿದೆ. ಅದೇ ರೀತಿ ಮುಂದಿನ 50 ವರ್ಷಗಳ ಪ್ರಯಾಣಿಕರ ಓಡಾಟವನ್ನು ಗಮನದಲ್ಲಿಟ್ಟುಕೊಂಡು ರೈಲು ನಿಲ್ದಾಣಗಳಿಗೆ ಬೇಡಿಕೆ ಬರುವ ಕಾರಣ ಅಶೋಕಪುರಂ ರೈಲು ನಿಲ್ದಾಣವನ್ನು ಎರಡನೇ ನಿಲ್ದಾಣವನ್ನಾಗಿ ಮೇಲ್ದರ್ಜೇಗೇರಿಸಿ ಅಭಿವೃದ್ಧಿಪಡಿಸಲಾಗುವುದು ಎಂದರು.

ವಿಶ್ವಮಾನವ ಎಕ್ಸ್‌ಪ್ರೆಸ್ ರೈಲನ್ನು ಅಶೋಕಪುರಂ ನಿಲ್ದಾಣದಿಂದಲೇ ಆರಂಭಿಸಬೇಕೆಂಬ ಯೋಚನೆ ಇತ್ತಾದರೂ ಅದು ಸಾಧ್ಯವಾಗಿರಲಿಲ್ಲ. ಈಗ ಹೆಚ್ಚುವರಿಯಾಗಿ ಎರಡು -ಪ್ಲಾಟ್‌ ಫಾ-ರಂ, ಎರಡು ಸ್ಟೇಬಲಿನ್ ಲೇನ್(ರೈಲುಗಳು ಬಂದು ನಿಲ್ಲುವ ಜಾಗ)ಗಳನ್ನು ನಿರ್ಮಿಸಲಾಗುತ್ತದೆ. ಮೊದಲ ಹಂತದಲ್ಲಿ 15.15 ಕೋಟಿ ಮತ್ತು ಎರಡನೇ ಹಂತದ 13.50 ಕೋಟಿ ಸೇರಿ ಅಂದಾಜು 28.65 ಕೋಟಿ ರೂ. ಖರ್ಚಾಗುತ್ತಿದೆ. ಅಶೋಕಪುರಂ ನಿಲ್ದಾಣ ಭವಿಷ್ಯದಲ್ಲಿ ದೊಡ್ಡ ನಿಲ್ದಾಣವಾಗಲಿದೆ ಎಂದರು.

ಮೇಲ್ಸೇತುವೆ ವಿಸ್ತರಣೆ: ಅಶೋಕಪುರಂ ನಿಲ್ದಾಣಕ್ಕೆ ಬರುವವರು ಎರಡೂ ಬದಿಯಲ್ಲಿ ಬರುವುದಕ್ಕೆ ಸಾಧ್ಯವಾಗದೆ ಸುತ್ತಿ ಬಳಸಿ ಬರುವುದನ್ನು ತಪ್ಪಿಸಲು ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಈಗ ನಿಲ್ದಾಣದ ಪ್ರವೇಶದಿಂದ ಮೂರು -ಪ್ಲಾಟ್‌ ಫಾ-ರಂ ತನಕ ಬ್ರಿಡ್ಜ್ ಇದೆ. ಇದನ್ನು ಐದು -ಪ್ಲಾಟ್‌ ಫಾ-ರಂ ದಾಟಿ ಬರುವಂತೆ ಮಾಡುವ ಜತೆಗೆ ಮತ್ತೊಂದು ಪ್ರವೇಶ ದ್ವಾರ ಮಾಡಲಾಗುತ್ತದೆ. ಈ ಕಡೆಯಿಂದ ಆ ಕಡೆಗೆ ಹೋಗುವುದಕ್ಕೆ ಅನುಕೂಲ ಕಲ್ಪಿಸಲಾಗುವುದು.ಇದರಿಂದ ಜಯನಗರ, ಕುವೆಂಪುನಗರ ಮೊದಲಾದ ಕಡೆಗಳಿಂದ ಬರುವವರಿಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.

ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು. ಕೇಂದ್ರೀಯ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ರೈಲುಗಳನ್ನು ನಿಲ್ಲಿಸಲು ಸಾಧ್ಯವಾಗದೆ ಇರುವ ಕಾರಣ ಅಶೋಕಪುರಂ ನಿಲ್ದಾಣಕ್ಕೆ ಬಂದು ನಿಲುಗಡೆ ಮಾಡಬಹುದು. ಅದಕ್ಕಾಗಿ ಐದು ಸಾವಿರ ಚದರ ಅಡಿ ಜಾಗದಲ್ಲಿ ಎರಡು ಸ್ಬೇಬಲಿನ್ ಲೇನ್‌ಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ನುಡಿದರು.

ಜಾಗದ ಸಮಸ್ಯೆಗೆ ಶೀಘ್ರ ಇತ್ಯರ್ಥ

ನಿಲ್ದಾಣದ ಬಳಿ ರೈಲ್ವೆ ಇಲಾಖೆಗೆ ಸೇರಿದ ಜಾಗವನ್ನು ನಗರಪಾಲಿಕೆಗೆ ಹಸ್ತಾಂತರಿಸಲಾಗಿತ್ತು. ಇದೀಗ ವಾಪಸ್ ಪಡೆಯಲಾಗುತ್ತಿದೆ. ಅದೇ ರೀತಿ ಮೂರು ಸಾವಿರ ಚದರ ಅಡಿ ಜಾಗವು ಖಾಸಗಿಯವರಲ್ಲಿದ್ದು, ಭೂ ಪರಿಹಾರ ಕೊಟ್ಟು ವಶಕ್ಕೆ ಪಡೆಯಲಾಗುತ್ತದೆ. ಉಪ ವಿಭಾಗಾಧಿಕಾರಿಗಳು ಈ ಬಗ್ಗೆ ವರದಿ ಸಲ್ಲಿಸುತ್ತಿದ್ದಂತೆ ಭೂ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ಕಮಲಾಭಾಯಿ, ವಿಭಾಗೀಯ ರೈಲ್ವೆ ನಿಯಂತ್ರಣಾಧಿಕಾರಿ ರಾಹುಲ್ ಅಗರ್‌ವಾಲ್, ಸೀನಿಯರ್ ಡಿವಿಷನಲ್ ಇಂಜಿನಿಯರ್ ರವಿಚಂದ್ರ, ಕಾರ್ಯಪಾಲಕ ಇಂಜಿನಿಯರ್ ಕೆ.ಪಿ.ನಾಯ್ಡು, ಕೇಶವಮೂರ್ತಿ ಹಾಜರಿದ್ದರು. –

andolanait

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

2 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

3 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

3 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

3 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

4 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

4 hours ago