ಜಿಲ್ಲೆಗಳು

ಮೈಸೂರು : ಸೆ.18 ರಿಂದ ಕಿವುಡರ ಕ್ರಿಕೆಟ್ ಪಂದ್ಯಾವಳಿ

ಮೈಸೂರು: ಮೈಸೂರು ಜಿಲ್ಲಾ ಕಿವುಡರ ಸಂಸ್ಥೆ ವತಿಯಿಂದ ಇತರೆ ಸಂಸ್ಥೆಗಳ ಸಹಯೋಗದೊಡನೆ ಸೆ. 18 ರಿಂದ 24 ರವರೆಗೆ ನಗರದ ಆರ್‌ಬಿಐ ಮೈದಾನದಲ್ಲಿ ಕಿವುಡರ ರಾಷ್ಟ್ರಮಟ್ಟದ ಟಿ-20 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಆಯೋಜಕರಲ್ಲಿ ಒಬ್ಬರಾದ ಹೇಮಂತ್‌ಚಂದ್ರ ಮಾತನಾಡಿ, ಪಂದ್ಯಾವಳಿಯಲ್ಲಿ ಚೆನ್ನಾಗಿ ಆಡಿದ ಆಟಗಾರರು ಮುಂಬರುವ ಜನವರಿಯಲ್ಲಿ ಕೇರಳದ ತಿರುವನಂತಪುರದಲ್ಲಿ ನಡೆಯುವ ವಿಶ್ವ ಕಿವುಡರ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಅರ್ಹರಾಗುತ್ತಾರೆ. ಸೆ.24 ರಂದು ಇಲ್ಲಿನ ವಿಜೇತ ತಂಡಗಳಿಗೆ ಬಹುಮಾನ ನೀಡಲಾಗುವುದು ಎಂದರು.
ಈ ಪಂದ್ಯಾವಳಿಯಲ್ಲಿ ದೇಶದಾದ್ಯಂತದಿಂದ ಪ್ರತಿಷ್ಠಿತ ತಂಡಗಳು ಆಗಮಿಸುತ್ತಿವೆ. ಹೀಗಾಗಿ ಕ್ರೀಡಾಸಕ್ತರು ಆಗಮಿಸಿ ವೀಕ್ಷಿಸಬೇಕೆಂದು ಮನವಿ ಮಾಡಿದರು. ಎಸ್.ಮೂರ್ತಿ, ಜೆ.ವಿ.ಮಹೇಶ್‌ವರ್ಮ, ನವೀನ್‌ಕುಮಾರ್. ಎ.ಗಣೇಶ್‌ರಾವ್ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

10 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

10 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

10 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

10 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

11 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

11 hours ago