ಮೈಸೂರು: ನಗರದ ತ್ರಿನೇಶ್ವರನಿಗೆ ಚಿನ್ನದ ಮುಖವಾಡ ಧರಿಸಿ ವಿಶೇಷ ಪೂಜೆ ನೆರವೇರಿಸಲಾಯಿತುಮೈಸೂರು : ಮಹಾಶಿವರಾತ್ರಿಯ ನಿಮಿತ್ತ ಇಂದು ಬೆಳಗ್ಗೆಯಿಂದಲೇ ಮೈಸೂರು ಜಿಲ್ಲೆಯ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ ಆರಂಭವಾಗಿದೆ. ಅರಮನೆ ಆವರಣದಲ್ಲಿರುವ ತ್ರಿನೇಶ್ವರ ಸ್ವಾಮಿಗೆ 11 ಕೆಜಿ ತೂಕದ ಚಿನ್ನದ ಮುಖವಾಡದ ಕೊಳಗವನ್ನು ಹಾಕಿ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳು ಬೆಳಗ್ಗೆಯಿಂದಲೇ ತ್ರಿನೇಶ್ವರನ ದರ್ಶನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.ದೇಶಾದ್ಯಂತ ಇಂದು ಮಹಾಶಿವರಾತ್ರಿ ಸಂಭ್ರಮ. ಮುಂಜಾನೆಯಿಂದಲೇ ಭಕ್ತರು ಶಿವನ ದೇವಾಲಯಗಳಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಉಪವಾಸ ಹಾಗೂ ಜಾಗರಣೆ ಈ ದಿನದ ವಿಶೇಷವಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಸಹ ಶಿವರಾತ್ರಿ ಸಂಭ್ರಮ ಜೋರಾಗಿದೆ. ನಗರದ ಅಂಬಾ ವಿಲಾಸ ಅರಮನೆಯ ಆವರಣದಲ್ಲಿರುವ ಇತಿಹಾಸ ಪ್ರಸಿದ್ಧ ತ್ರಿನೇಶ್ವರ ಸ್ವಾಮಿಗೆ ಮಹಾರಾಜರು ನೀಡಿರುವಂತಹ 11 ಕೆಜಿ ತೂಕದ ಬಾಲ ಶಿವನ ಚಿನ್ನದ ಮುಖವಾಡದ ಕೊಳಗವನ್ನು ಬೆಳಗ್ಗೆಯೇ ದೇವರಿಗೆ ಧರಿಸಿ ಪೂಜೆ ಸಲ್ಲಿಸಲಾಯಿತು. ವರ್ಷದಲ್ಲಿ ಶಿವರಾತ್ರಿಯ ದಿನದಂದು ಮಾತ್ರ ಈ ದರ್ಶನ ಭಾಗ್ಯ ಶಿವಭಕ್ತರಿಗೆ ಸಿಗುವುದು ವಿಶೇಷ.
ಶಿವರಾತ್ರಿಯಂದು ನಡೆಯುವ ವಿಶೇಷ ಪೂಜೆಗಳು : ಶಿವರಾತ್ರಿ ದಿನದಂದು ಶಿವನ ದರ್ಶನ ಪಡೆದು ಅರ್ಚನೆ ಮಾಡಿದರೆ ಪುಣ್ಯ ಫಲಗಳು ಸಿಗುತ್ತವೆ ಎಂಬುದು ಶಿವಭಕ್ತರ ನಂಬಿಕೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆ ಆವರಣದಲ್ಲಿ ಇರುವ ತ್ರಿನೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 4:30 ಯಿಂದಲೇ ವಿಶೇಷ ಚಿನ್ನದ ಕೊಳಗವನ್ನ ಧಾರಣೆ, ಗಣಪತಿ ಪೂಜೆ, ರುದ್ರಾಭಿ
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…