ಮೈಸೂರು: ನಗರದ ತ್ರಿನೇಶ್ವರನಿಗೆ ಚಿನ್ನದ ಮುಖವಾಡ ಧರಿಸಿ ವಿಶೇಷ ಪೂಜೆ ನೆರವೇರಿಸಲಾಯಿತುಮೈಸೂರು : ಮಹಾಶಿವರಾತ್ರಿಯ ನಿಮಿತ್ತ ಇಂದು ಬೆಳಗ್ಗೆಯಿಂದಲೇ ಮೈಸೂರು ಜಿಲ್ಲೆಯ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ ಆರಂಭವಾಗಿದೆ. ಅರಮನೆ ಆವರಣದಲ್ಲಿರುವ ತ್ರಿನೇಶ್ವರ ಸ್ವಾಮಿಗೆ 11 ಕೆಜಿ ತೂಕದ ಚಿನ್ನದ ಮುಖವಾಡದ ಕೊಳಗವನ್ನು ಹಾಕಿ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳು ಬೆಳಗ್ಗೆಯಿಂದಲೇ ತ್ರಿನೇಶ್ವರನ ದರ್ಶನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.ದೇಶಾದ್ಯಂತ ಇಂದು ಮಹಾಶಿವರಾತ್ರಿ ಸಂಭ್ರಮ. ಮುಂಜಾನೆಯಿಂದಲೇ ಭಕ್ತರು ಶಿವನ ದೇವಾಲಯಗಳಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಉಪವಾಸ ಹಾಗೂ ಜಾಗರಣೆ ಈ ದಿನದ ವಿಶೇಷವಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಸಹ ಶಿವರಾತ್ರಿ ಸಂಭ್ರಮ ಜೋರಾಗಿದೆ. ನಗರದ ಅಂಬಾ ವಿಲಾಸ ಅರಮನೆಯ ಆವರಣದಲ್ಲಿರುವ ಇತಿಹಾಸ ಪ್ರಸಿದ್ಧ ತ್ರಿನೇಶ್ವರ ಸ್ವಾಮಿಗೆ ಮಹಾರಾಜರು ನೀಡಿರುವಂತಹ 11 ಕೆಜಿ ತೂಕದ ಬಾಲ ಶಿವನ ಚಿನ್ನದ ಮುಖವಾಡದ ಕೊಳಗವನ್ನು ಬೆಳಗ್ಗೆಯೇ ದೇವರಿಗೆ ಧರಿಸಿ ಪೂಜೆ ಸಲ್ಲಿಸಲಾಯಿತು. ವರ್ಷದಲ್ಲಿ ಶಿವರಾತ್ರಿಯ ದಿನದಂದು ಮಾತ್ರ ಈ ದರ್ಶನ ಭಾಗ್ಯ ಶಿವಭಕ್ತರಿಗೆ ಸಿಗುವುದು ವಿಶೇಷ.
ಶಿವರಾತ್ರಿಯಂದು ನಡೆಯುವ ವಿಶೇಷ ಪೂಜೆಗಳು : ಶಿವರಾತ್ರಿ ದಿನದಂದು ಶಿವನ ದರ್ಶನ ಪಡೆದು ಅರ್ಚನೆ ಮಾಡಿದರೆ ಪುಣ್ಯ ಫಲಗಳು ಸಿಗುತ್ತವೆ ಎಂಬುದು ಶಿವಭಕ್ತರ ನಂಬಿಕೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆ ಆವರಣದಲ್ಲಿ ಇರುವ ತ್ರಿನೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 4:30 ಯಿಂದಲೇ ವಿಶೇಷ ಚಿನ್ನದ ಕೊಳಗವನ್ನ ಧಾರಣೆ, ಗಣಪತಿ ಪೂಜೆ, ರುದ್ರಾಭಿ
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…