ಮೈಸೂರು: ನಗರದ ತ್ರಿನೇಶ್ವರನಿಗೆ ಚಿನ್ನದ ಮುಖವಾಡ ಧರಿಸಿ ವಿಶೇಷ ಪೂಜೆ ನೆರವೇರಿಸಲಾಯಿತುಮೈಸೂರು : ಮಹಾಶಿವರಾತ್ರಿಯ ನಿಮಿತ್ತ ಇಂದು ಬೆಳಗ್ಗೆಯಿಂದಲೇ ಮೈಸೂರು ಜಿಲ್ಲೆಯ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ ಆರಂಭವಾಗಿದೆ. ಅರಮನೆ ಆವರಣದಲ್ಲಿರುವ ತ್ರಿನೇಶ್ವರ ಸ್ವಾಮಿಗೆ 11 ಕೆಜಿ ತೂಕದ ಚಿನ್ನದ ಮುಖವಾಡದ ಕೊಳಗವನ್ನು ಹಾಕಿ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳು ಬೆಳಗ್ಗೆಯಿಂದಲೇ ತ್ರಿನೇಶ್ವರನ ದರ್ಶನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.ದೇಶಾದ್ಯಂತ ಇಂದು ಮಹಾಶಿವರಾತ್ರಿ ಸಂಭ್ರಮ. ಮುಂಜಾನೆಯಿಂದಲೇ ಭಕ್ತರು ಶಿವನ ದೇವಾಲಯಗಳಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಉಪವಾಸ ಹಾಗೂ ಜಾಗರಣೆ ಈ ದಿನದ ವಿಶೇಷವಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಸಹ ಶಿವರಾತ್ರಿ ಸಂಭ್ರಮ ಜೋರಾಗಿದೆ. ನಗರದ ಅಂಬಾ ವಿಲಾಸ ಅರಮನೆಯ ಆವರಣದಲ್ಲಿರುವ ಇತಿಹಾಸ ಪ್ರಸಿದ್ಧ ತ್ರಿನೇಶ್ವರ ಸ್ವಾಮಿಗೆ ಮಹಾರಾಜರು ನೀಡಿರುವಂತಹ 11 ಕೆಜಿ ತೂಕದ ಬಾಲ ಶಿವನ ಚಿನ್ನದ ಮುಖವಾಡದ ಕೊಳಗವನ್ನು ಬೆಳಗ್ಗೆಯೇ ದೇವರಿಗೆ ಧರಿಸಿ ಪೂಜೆ ಸಲ್ಲಿಸಲಾಯಿತು. ವರ್ಷದಲ್ಲಿ ಶಿವರಾತ್ರಿಯ ದಿನದಂದು ಮಾತ್ರ ಈ ದರ್ಶನ ಭಾಗ್ಯ ಶಿವಭಕ್ತರಿಗೆ ಸಿಗುವುದು ವಿಶೇಷ.
ಶಿವರಾತ್ರಿಯಂದು ನಡೆಯುವ ವಿಶೇಷ ಪೂಜೆಗಳು : ಶಿವರಾತ್ರಿ ದಿನದಂದು ಶಿವನ ದರ್ಶನ ಪಡೆದು ಅರ್ಚನೆ ಮಾಡಿದರೆ ಪುಣ್ಯ ಫಲಗಳು ಸಿಗುತ್ತವೆ ಎಂಬುದು ಶಿವಭಕ್ತರ ನಂಬಿಕೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆ ಆವರಣದಲ್ಲಿ ಇರುವ ತ್ರಿನೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಗ್ಗೆ 4:30 ಯಿಂದಲೇ ವಿಶೇಷ ಚಿನ್ನದ ಕೊಳಗವನ್ನ ಧಾರಣೆ, ಗಣಪತಿ ಪೂಜೆ, ರುದ್ರಾಭಿ
ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…
ನವದೆಹಲಿ: ಬೈಸರನ್ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…
ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…
ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…
ತಿರುವನಂತಪುರಂ: ಕೇರಳದ ತ್ರಿಶೂರ್ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…