ಜಿಲ್ಲೆಗಳು

ಮೈಸೂರು : ಹೆಣ್ಣು ಮಕ್ಕಳ ದಿನ ಪ್ರಯುಕ್ತ ನೈರುತ್ಯ ರೈಲ್ವೆಯಿಂದ ವಿಶೇಷ ಸೇವೆ

ಮೈಸೂರು : ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಪ್ರಯುಕ್ತ ಮೈಸೂರಿನ ನೈರುತ್ಯ ರೈಲ್ವೆಯ ರೈಲ್ವೆ ಮ್ಯೂಸಿಯಂನಲ್ಲಿ ಹೆಣ್ಣು ಮಕ್ಕಳಿಗೆ ಒಬ್ಬರು ಪೋಷಕರೊಂದಿಗೆ ಉಚಿತ ಪ್ರವೇಶ ನೀಡುತ್ತಿದೆ.
ಈ ಸೇವೆಯು ಮಂಗಳವಾರದಂದು ಅಂದರೆ ಜನವರಿ 24ರಂದು ಲಭ್ಯವಿದ್ದು ಒಂದು ಹೆಣ್ಣು ಮಗುವಿನ ಜೊತೆಗೆ ಒಬ್ಬ ಪೋಷಕರಿಗೆ ಉಚಿತ ಪ್ರವೇಶಾತಿಯನ್ನು ನೀಡಲಾಗುತ್ತಿದೆ.

ಅಂದಿನ ದಿನ ಮಂಗಳವಾರ ಮ್ಯೂಸಿಯಂ ಗೆ ನೀಡಲಾಗಿದ್ದ ರಜವನ್ನು ರದ್ದುಪಡಿಸಲಾಗಿದ್ದು. ಹೆಣ್ಣು ಮಕ್ಕಳ ಈ ದಿನಾಚರಣೆಯ ಪ್ರಯುಕ್ತ ಉಚಿತ ಪ್ರವೇಶ ನೀಡಲಾಗುತ್ತಿದೆ. ರಾಷ್ಟ್ರೀಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಭಾರತ ಸರ್ಕಾರ ಈ ದಿನವನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಾಗಿ ಆಚರಣೆ ಮಾಡುತ್ತ ಬರುತ್ತಿದೆ. ಇದರ ಮುಖ್ಯ ಉದ್ದೇಶ ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಗೌರವ ಮತ್ತು ಪ್ರಗತಿಯತ್ತ ಕೊಂಡೊಯ್ಯುವುದು ಆಗಿದೆ. ಇದರೊಂದಿಗೆ ಸಮಾಜದಲ್ಲಿರುವ ಅಸಮಾನತೆಯನ್ನು ಹೋಗಲಾಡಿಸುವಂತಹ ಪ್ರಯತ್ನ ಇದಾಗಿದೆ.

ರೈಲ್ವೆ ಮ್ಯೂಸಿಯಂ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:30ರ ವರೆಗೆ ಪ್ರವೇಶ ಅವಧಿಯಾಗಿರುತ್ತದೆ ಆಹಾರ ಪದಾರ್ಥಗಳನ್ನು ಮ್ಯೂಸಿಯಂ ನ ಒಳಗೆ ತೆಗೆದುಕೊಂಡು ಹೋಗುವಂತಿಲ್ಲ ವೃತ್ತಿಪರ/DSLR ಬಳಸುವ ಫೋಟೋಗ್ರಾಫರ್ ಗಳು ನಿಗದಿತ ಶುಲ್ಕವನ್ನು ಪಾವತಿ ಮಾಡುವ ಮೂಲಕ ಮ್ಯೂಸಿಯಂ ಪ್ರವೇಶಿಸಲು ಅನುಮತಿ ನೀಡಲಾಗುತ್ತದೆ ಎಂದು ನೈಋತ್ಯ ರೈಲ್ವೆ ಮೈಸೂರು ಇದರ ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ಮಂಜುನಾಥ್‌ ತಿಳಿಸಿದ್ದಾರೆ.

 

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

5 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

5 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

6 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

6 hours ago