ಜಿಲ್ಲೆಗಳು

ಮೈಸೂರು : ಆ. 29ಕ್ಕೆ ಹಾಕಿ ಮಾಂತ್ರಿಕನ ಸ್ಮರಣೆ

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ರಾಷ್ಟ್ರೀಯ ಕ್ರೀಡಾದಿನ

ಮೈಸೂರು : ಕ್ರೀಡಾ ಸಂಸ್ಕೃತಿಯನ್ನು ಇಂದಿನ ಯುವ ಜನತೆಯಲ್ಲಿ ಹೆಚ್ಚಿಸುವ ಮತ್ತು ಪ್ರೋತ್ಸಾಹಿಸುವ ಸಲುವಾಗಿ ಶ್ರೇಷ್ಠ ಹಾಕಿ ಪಟು ಮೇಜರ್‌ ಧ್ಯಾನ್‌ ಚಂದ್‌ ಅವರ ಸ್ಮರಣಾರ್ಥವಾಗಿ ಇದೇ ತಿಂಗಳ ಆ. 29 ರಂದು ನಗರದ ಯಾದವಗಿರಿಯಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾದಿನವನ್ನು ಆಚರಣೆ ಮಾಡಲಾಗುತ್ತಿದೆ. 

ಹಾಕಿ ಮಾಂತ್ರಿಕ ಧ್ಯಾನ ಚಂದ್‌ ಸ್ಮರಣಾರ್ಥವಾಗಿ ಕೇಂದ್ರ ಸರ್ಕಾರದ ಕ್ರೀಡಾ ಮತ್ತು ಯುವಜನ  ವ್ಯವಹಾರ ವಿಭಾಗವು ಈ ಆಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ meet the champion ಎಂಬ ವಿಶೇಷ ಕಾರ್ಯಕ್ರಮವನ್ನು ಸಹ ಭಾರತೀಯ ಕ್ರೀಡಾ ಪ್ರಾಧಿಕಾರಿವು ಆಯೋಜಿಸಿದೆ. ಈ ಕಾರ್ಯಕ್ರಮವು ಭಾರತದಾದ್ಯಂತ ಏಕ ಕಾಲದಲ್ಲಿ 25 ಸ್ಥಳಗಳಲ್ಲಿ ಕಾರ್ಯಕ್ರಮವು ಬೆಳಿಗ್ಗೆ 10 ರಿಂದ 11.30 ರವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಾಂಪಿಯನ್‌ ಕ್ರೀಡಾಪಟು ಮತ್ತು ಅಂತರರಾಷ್ಟ್ರೀಯ ಪ್ಯಾರಾ ಈಜುಗಾರರಾದ ನಿರಂಜನ್‌ ಮುಕುಂದನ್‌ ಅವರು ಭಾಗವಹಿಸಲಿದ್ದಾರೆ. ಆ ದಿನ ಶಾಲೆಯ ವಿದ್ಯಾರ್ಥಿಗಳು ಭವ್ಯ ಸ್ವಾಗತವನ್ನು ಕೋರಲಿದ್ದಾರೆ.ನಂತರ ಈಜುಕೊಳದ ಬಳಿ ಹಲವು ಈಜು ಪಟುಗಳು ತಮ್ಮ ಕೌಶಲ್ಯಗಳನ್ನು ಪ್ರದರ್ಶನ ಮಾಡಲಿದ್ದಾರೆ. ಬಳಿಕ ವಿದ್ಯಾರ್ಥಿಗಳ ಕುರಿತು ಭಾಷಣ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.ಇದರ ಜೊತೆಗೆ ಕ್ರೀಡೆ ಸಂಬಂಧಿಸಿದಂತೆ  ಪ್ರಶ್ನಾವಳಿ ಕಾರ್ಯಕ್ರಮವು ನಡೆಯಲಿದೆ. ವಿಜೇತರಾದ ಒಟ್ಟು ಐವರು ವಿದ್ಯಾರ್ಥಿಗಳಿಗೆ ಅತಿಥಿಗಳ ಹಸ್ತಾಕ್ಷರ ಹೊಂದಿರುವ ಒಂದು ಒಲಂಪಿಕ್‌ ಜರ್ಸಿಯನ್ನು ಬಹುಮಾನವಾಗಿ ನೀಡಲಾಗುವುದು.

 

andolanait

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

2 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

3 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

4 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

4 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

4 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

5 hours ago