ಜಿಲ್ಲೆಗಳು

ಮೈಸೂರು : ಆ. 29ಕ್ಕೆ ಹಾಕಿ ಮಾಂತ್ರಿಕನ ಸ್ಮರಣೆ

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ರಾಷ್ಟ್ರೀಯ ಕ್ರೀಡಾದಿನ

ಮೈಸೂರು : ಕ್ರೀಡಾ ಸಂಸ್ಕೃತಿಯನ್ನು ಇಂದಿನ ಯುವ ಜನತೆಯಲ್ಲಿ ಹೆಚ್ಚಿಸುವ ಮತ್ತು ಪ್ರೋತ್ಸಾಹಿಸುವ ಸಲುವಾಗಿ ಶ್ರೇಷ್ಠ ಹಾಕಿ ಪಟು ಮೇಜರ್‌ ಧ್ಯಾನ್‌ ಚಂದ್‌ ಅವರ ಸ್ಮರಣಾರ್ಥವಾಗಿ ಇದೇ ತಿಂಗಳ ಆ. 29 ರಂದು ನಗರದ ಯಾದವಗಿರಿಯಲ್ಲಿರುವ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾದಿನವನ್ನು ಆಚರಣೆ ಮಾಡಲಾಗುತ್ತಿದೆ. 

ಹಾಕಿ ಮಾಂತ್ರಿಕ ಧ್ಯಾನ ಚಂದ್‌ ಸ್ಮರಣಾರ್ಥವಾಗಿ ಕೇಂದ್ರ ಸರ್ಕಾರದ ಕ್ರೀಡಾ ಮತ್ತು ಯುವಜನ  ವ್ಯವಹಾರ ವಿಭಾಗವು ಈ ಆಚರಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ meet the champion ಎಂಬ ವಿಶೇಷ ಕಾರ್ಯಕ್ರಮವನ್ನು ಸಹ ಭಾರತೀಯ ಕ್ರೀಡಾ ಪ್ರಾಧಿಕಾರಿವು ಆಯೋಜಿಸಿದೆ. ಈ ಕಾರ್ಯಕ್ರಮವು ಭಾರತದಾದ್ಯಂತ ಏಕ ಕಾಲದಲ್ಲಿ 25 ಸ್ಥಳಗಳಲ್ಲಿ ಕಾರ್ಯಕ್ರಮವು ಬೆಳಿಗ್ಗೆ 10 ರಿಂದ 11.30 ರವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಾಂಪಿಯನ್‌ ಕ್ರೀಡಾಪಟು ಮತ್ತು ಅಂತರರಾಷ್ಟ್ರೀಯ ಪ್ಯಾರಾ ಈಜುಗಾರರಾದ ನಿರಂಜನ್‌ ಮುಕುಂದನ್‌ ಅವರು ಭಾಗವಹಿಸಲಿದ್ದಾರೆ. ಆ ದಿನ ಶಾಲೆಯ ವಿದ್ಯಾರ್ಥಿಗಳು ಭವ್ಯ ಸ್ವಾಗತವನ್ನು ಕೋರಲಿದ್ದಾರೆ.ನಂತರ ಈಜುಕೊಳದ ಬಳಿ ಹಲವು ಈಜು ಪಟುಗಳು ತಮ್ಮ ಕೌಶಲ್ಯಗಳನ್ನು ಪ್ರದರ್ಶನ ಮಾಡಲಿದ್ದಾರೆ. ಬಳಿಕ ವಿದ್ಯಾರ್ಥಿಗಳ ಕುರಿತು ಭಾಷಣ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.ಇದರ ಜೊತೆಗೆ ಕ್ರೀಡೆ ಸಂಬಂಧಿಸಿದಂತೆ  ಪ್ರಶ್ನಾವಳಿ ಕಾರ್ಯಕ್ರಮವು ನಡೆಯಲಿದೆ. ವಿಜೇತರಾದ ಒಟ್ಟು ಐವರು ವಿದ್ಯಾರ್ಥಿಗಳಿಗೆ ಅತಿಥಿಗಳ ಹಸ್ತಾಕ್ಷರ ಹೊಂದಿರುವ ಒಂದು ಒಲಂಪಿಕ್‌ ಜರ್ಸಿಯನ್ನು ಬಹುಮಾನವಾಗಿ ನೀಡಲಾಗುವುದು.

 

andolanait

Recent Posts

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

1 hour ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

10 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

10 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

10 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

10 hours ago